ವೃದ್ಧಾಪ್ಯ ಪಿಂಚಣಿ ಫಲಾನುಭವಿಗಳ ಮನೆ ಬಾಗಿಲಿಗೆ: ಕಂದಾಯ ಸಚಿವ ಅಶೋಕ

Thursday, September 2nd, 2021
R Ashok

ಹೊಸದುರ್ಗ  : ತಾಲ್ಲೂಕು ಕಚೇರಿಗೆ ವೃದ್ಧರು, ವಿಧವೆಯರು, ಬಡವರು ನಿತ್ಯ ಅಲೆಯುತ್ತಾರೆ. ಅವರ ಕೆಲಸಗಳೆಲ್ಲಾ ಸರಾಗವಾಗಿ ಆಗುವಂತೆ ಆಗಬೇಕು. ಅವರಿಗೆಲ್ಲಾ ಸೌಲಭ್ಯಗಳು ಸಿಗಬೇಕು. ಆ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇರಿಸುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. “ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ರೂ.10ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಮಿನಿ ವಿಧಾನಸೌಧಕ್ಕೆ ಭೂಮಿಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು, ಜಿಲ್ಲಾಡಳಿತ ಹಳ್ಳಿಗೆ ಹೋಗುವಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರೂಪಿಸಿದ್ದೇವೆ. ಆಧಾರ್ ಕಾರ್ಡ್ ನಲ್ಲಿ […]