ಪ್ರಿಯತಮೆಯ ತಮ್ಮನನ್ನು ಅಪಹರಿಸಿದ ಪ್ರೇಮಿ

Saturday, January 22nd, 2022
Srinivasa

ಬೆಂಗಳೂರು:  ಪ್ರಿಯತಮೆಯ ತಮ್ಮನನ್ನು ಪ್ರೇಮಿಯೊಬ್ಬ ಅಪಹರಿಸಿ ನೀನು ನನ್ನ ಜೊತೆ ಬರದಿದ್ದರೆ ನಿನ್ನ ತಮ್ಮನ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುವ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಪ್ರಿಯತಮೆಯ ತಮ್ಮ ವೆಂಕಟೇಶ್‍ನನ್ನು ಆರೋಪಿ ಅಪಹರಿಸಿದ್ದಾನೆ. ಪ್ರಿಯತಮೆ ಬೇರೊಬ್ಬನ ಜೊತೆ ಮದುವೆ ಆಗಿದ್ದಳು. ಆದರೂ ಗಂಡನ ಬಿಟ್ಟು ಪ್ರಿಯಕರನ ಜೊತೆ ಸ್ವಲ್ಪ ದಿನ ಜೀವನ ಮಾಡಿದ್ದಾಳೆ. ಬಳಿಕ ರಾಜಿ ಪಂಚಾಯತಿ ಮಾಡಿ ಗಂಡನ ಮನೆಗೆ ಹೋಗಿದ್ದಾಳೆ. ನಂತರ ಗಂಡನನ್ನೂ ಬಿಟ್ಟು ತವರು ಮನೆ […]

ಕೋಮು ಗಲಭೆ ಬಿಜೆಪಿಯ ಚುನಾವಣಾ ತಂತ್ರ: ವೆಂಕಟೇಶ್

Thursday, February 15th, 2018
congress

ಮಂಗಳೂರು: ರಾಜ್ಯ ಸರ್ಕಾರ ಮಾಡಿರುವ ಸಾಧನೆಗಳ ಮೂಲಕವೇ ಪಕ್ಷ ಜನರ ಬಳಿಗೆ ತೆರಳಲಿದ್ದು, ಕೆಲ ತಿಂಗಳುಗಳಿಂದೀಚೆಗೆ ದ.ಕ. ಜಿಲ್ಲೆಯಲ್ಲಿ ನಡೆದ ಕೋಮು ಗಲಭೆ ಬಿಜೆಪಿಯ ಚುನಾವಣಾ ತಂತ್ರವಾಗಿದೆ. ಆದರೆ ಅದು ಸಫಲವಾಗುವುದಿಲ್ಲ. ಅದಕ್ಕೆ ಉತ್ತರ ಮುಂದಿನ ಎರಡು ತಿಂಗಳಲ್ಲಿ ದೊರೆಯಲಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆ ಕಾಂಗ್ರೆಸ್‌ನ ತವರೂರು. ಇದು ಹಾಗೆಯೇ ಮುಂದುವರಿಯಲಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟೂ ಕ್ಷೇತ್ರಗಳಲ್ಲಿ […]

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಕಾನ್ಸ್‌ಟೇಬಲ್ ವನಿತಾ ಆರ್. ಆಯ್ಕೆ

Wednesday, February 7th, 2018
state

ಮಂಗಳೂರು: ಕೆಲವು ತಿಂಗಳ ಹಿಂದೆ ಬಂಟ್ವಾಳ ತಾಲೂಕು ಕೋಮುಗಲಭೆಯಿಂದಾಗಿ ರಾಜ್ಯಮಟ್ಟದಲ್ಲಿ ಸುದ್ದಿಯಾಗಿತ್ತು. ಪೊಲೀಸರು ಹಗಲು ರಾತ್ರಿಯೆನ್ನದೆ ಬಂದೋಬಸ್ತ್ ಡ್ಯೂಟಿಯಲ್ಲಿಯೇ ನಿರತರಾಗಿದ್ದರು. ಇದೆಲ್ಲದರ ಮಧ್ಯೆ ಇಲ್ಲಿನ ಮಹಿಳಾ ಕಾನ್ಸ್‌ಟೇಬಲ್ ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಮಟ್ಟದ ಸಾಧನೆ ಮಾಡಿದ್ದಾರೆ. ಪೊಲೀಸ್ ಇಲಾಖಾ ವತಿಯಿಂದ ಆಯೋಜಿಸಿದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಂಟ್ವಾಳ ನಗರ ಠಾಣೆಯ ಕಾನ್ಸ್‌ಟೇಬಲ್ ವನಿತಾ ಆರ್. 100, 200ಮತ್ತು 400 ಮೀಟರ್ ಓಟದಲ್ಲಿ ಪ್ರಥಮ, ಎತ್ತರ ಜಿಗಿತ ಹಾಗೂ 4*100 ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆಯುವ ರಾಷ್ಟ್ರಮಟ್ಟದ […]

ನಟಿ ರಮ್ಯಾ ಜತೆ ಮದ್ವೆಯಾಗಿರುವುದಾಗಿ ಹೇಳಿದ್ದ ‘ಹುಚ್ಚ’ ವೆಂಕಟೇಶ್ ಬಂಧನ

Friday, February 21st, 2014
Ramya Venktesh

ಬೆಂಗಳೂರು: ಸಂಸದೆ ಹಾಗೂ ನಟಿ ರಮ್ಯಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ‘ಹುಚ್ಚ ವೆಂಕಟ್‌’ ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಾಯಕ ನಟ ವೆಂಕಟೇಶ್ ಅವರನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ರಮ್ಯಾ ಅವರನ್ನು ತಾನು ಬನಶಂಕರಿ ದೇವಸ್ಥಾನದಲ್ಲಿ ಮದುವೆಯಾಗಿರುವುದಾಗಿ ವೆಂಕಟೇಶ್ ಹೇಳಿಕೆ ನೀಡಿದ್ದರು. ಈ ಸಂಬಂಧ ಎರಡು ದಿನಗಳ ಹಿಂದೆ ನಟಿ ರಮ್ಯಾ ಅವರು ವೆಂಕಟೇಶ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪೊಲೀಸರು […]