ಸುರತ್ಕಲ್: ಪ್ರಯಾಣಿಕನ ಜೀವ ಉಳಿಸಲು ಆಸ್ಪತ್ರೆ ಅಲೆದಾಡಿದ ಬಸ್ ನಿರ್ವಾಹಕ

Friday, November 20th, 2020
Ganesh

ಮಂಗಳೂರು  : ತನ್ನ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಜೀವ ಉಳಿಸಲು ನಿರ್ವಾಹಕನೋರ್ವ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲು ಸ್ವತಹ ಮುಂದಾಗಿ ಮಾನವೀಯತೆ ಮೆರೆದಿದ್ದಾರೆ. ಗಣೇಶ್ ಅವರು ಕಳೆದ  ನವಂಬರ್ 16 ರಂದು ಬೆಳಗ್ಗೆ ಎಂದಿನಂತೆ  ಬಜಪೆ ಕೈಕಂಬ ಮಾರ್ಗವಾಗಿ ಸಂಚರಿಸುವ ಶಾನ್ ಎಂಬ ಸರ್ವಿಸ್ ಬಸ್ ನಲ್ಲಿ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ದಿನ ಪ್ರಯಾಣಿಸುತ್ತಿದ್ದ ಉತ್ತರಪ್ರದೇಶದ ವಾರಣಾಸಿ ನಿವಾಸಿ ರಾಜೇಶ್ ಚೌಹಾನ್ (40) ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದರು.ತಕ್ಷಣ ಗಣೇಶ್ […]

ವೆನ್ ಲಾಕ್ ಕೊವೀಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ಪತ್ತೆ

Monday, July 6th, 2020
devaraj

ಮಂಗಳೂರು : ನಗರದ ವೆನ್ ಲಾಕ್ ಕೊವೀಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ದೇವರಾಜು(18) ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಣಿ ಮತ್ತು ಶಂಕರಪ್ಪ ನಂದ್ಯಾಲ್ ಅವರು ವೆನ್ಲಾಕ್ ಆಸ್ಪತ್ರೆಯಿಂದ ಓಡಿಹೋದ ಕೊವೀಡ್ ಪಾಸಿಟಿವ್ ಇದ್ದ ಆರೋಪಿಗಳನ್ನು ತ್ವರಿತ ಮತ್ತು ಸಮರ್ಕವಾಗಿ ಪತ್ತೆ ಹಚ್ಚಿ ಬಂಧಿಸುವ ಮೂಲಕ ನಿಜವಾಗಿ ಹೀರೋಗಳಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಪಿ ವಿಕಾಸ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದೇ ವೇಳೆ ಆರೋಪಿ ದೇವರಾಜ್ ನಿಂದ ಅನೇಕರಿಗೆ ಸೋಂಕು […]