ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿಗಳಿಂದ 2.82 ಕೋಟಿ ರೂ. ಪಡೆದು ವಂಚನೆ

Monday, September 19th, 2016
deralakatte

ಮಂಗಳೂರು: ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎನ್ನಲಾದ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿ, 37.50 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿನ ಈರೋಡ್ ನಿವಾಸಿ ಸಂಜೀವಕುಮಾರ್ ಆರ್.(45) ಮತ್ತು ಮಡಿಕೇರಿ ನಿವಾಸಿ ಬಿ.ಸಿ.ತಿಮ್ಮಯ್ಯ(34) ಬಂಧಿತ ಆರೋಪಿಗಳು. ಇವರು ತಮಿಳುನಾಡು ಮೂಲದ 16 ವಿದ್ಯಾರ್ಥಿಗಳಿಂದ 2.82 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂಬ ಆರೋಪವಿದೆ. ದೇರಳಕಟ್ಟೆಯ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಹಣ ಪಡೆದು ಆರೋಪಿಗಳು ವಂಚಿಸಿದ್ದರು ಎನ್ನಲಾಗಿದೆ. ಕಾಲೇಜಿನಿಂದ […]