ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Friday, December 11th, 2020
shankara Narayana

ವಿಟ್ಲ: ಕೆಎಸ್ ಆರ್ ಟಿಸಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಸಾವನ್ನಪ್ಪಿದ್ದಾರೆ. ವಿಟ್ಲ ನೆತ್ರಕೆರೆ ನಿವಾಸಿ ಶಂಕರನಾರಾಯಣ ಭಟ್ (58) ಸಾವನ್ನಪ್ಪಿದ್ದು, ಅವರು ಗುರುವಾರ ತನ್ನ ಬೈಕಿನಲ್ಲಿ ವಿಟ್ಲಕ್ಕೆ ಆಗಮಿಸುತ್ತಿದ್ದಾಗ ಫರಂಗಿಪೇಟೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆ ಜ.21ರಂದು ಉದ್ಘಾಟನೆಗೊಳ್ಳಲಿದೆ

Wednesday, January 17th, 2018
campo-ltd

ಮಂಗಳೂರು: ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆ ಆವರಣದಲ್ಲಿ 13 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಎಮಿನಿಟಿ ಕಟ್ಟಡ (ಸೌಲಭ್ಯ ಸೌಧ) ಜ.21ರಂದು ಉದ್ಘಾಟನೆಗೊಳ್ಳಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ತಿಳಿಸಿದರು. ಮಂಗಳೂರಿನ ಕ್ಯಾಂಪ್ಕೋ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್ ಪ್ರಭು ಬೆಳಗ್ಗೆ 10 ಗಂಟೆಗೆ ನೂತನ ಕಟ್ಟಡವನ್ನು ಉದ್ಘಾಟಿಸುವರು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷ ವಾರಣಾಶಿ ಸುಬ್ರಾಯ ಭಟ್ಟರ ಪ್ರತಿಮೆಯನ್ನು ಕೇಂದ್ರದ ಅಂಕಿ ಅಂಶಗಳು […]