ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಕಾರು ಪಲ್ಟಿ, ಚಾಲಕ ಪಾರು

Saturday, August 8th, 2020
pumpwell

ಮಂಗಳೂರು:  ಪಂಪ್ ವೆಲ್ ಮೇಲ್ಸೇತುವೆಯ ಮೇಲೆ ಕಾರೊಂದು ಪಲ್ಟಿಯಾಗಿ, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಕಾರು ಸಂಪೂರ್ಣ ತಲೆಕೆಳಗಾಗಿ ಬಿದ್ದಿದ್ದು, ಸ್ಥಳಿಯರು ಚಾಲಕನನ್ನು ಹೊರತೆಗೆದರು. ಪಂಪ್ ವೆಲ್ ಸೇತುವೆಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿತ್ತು.  

ನಾಯಕತ್ವ ಗುಣದೊಂದಿಗೆ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು: ಡಿ. ವೀರೇಂದ್ರ ಹೆಗ್ಗಡೆ

Monday, October 1st, 2018
veerendra-hegade

ಉಜಿರೆ: ಮನಸ್ಸಿನ ನಿಯಂತ್ರಣದೊಂದಿಗೆ ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ನಾಯಕತ್ವ ಗುಣದೊಂದಿಗೆ ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಭಜನಾ ಕಮ್ಮಟದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಭಜನೆಯಲ್ಲಿ ಸಾಹಿತ್ಯವಿದೆ. ಸಾಹಿತ್ಯದಲ್ಲಿ ಸಾರ್ಥಕ ಬದುಕಿಗೆ ಬೇಕಾದ ಸಂದೇಶವಿದೆ. ಹಾಡುಗಳ ಅರ್ಥವನ್ನು ತಿಳಿದು ಹಾಡಬೇಕು. ನಿಜ ಜೀವನದಲ್ಲಿಯೂ ಅದನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಯಾವುದೇ ಸಮಸ್ಯೆ ಬಂದಾಗ ಅದನ್ನು ಆತ್ಮವಿಶ್ವಾಸದಿಂದ ಎದುರಿಸುವ ಶಕ್ತಿ-ತಾಳ್ಮೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ತಿಳಿಸಿದರು. […]