ಸಂಘಟನೆ, ಪಕ್ಷ ಅಥವಾ ಇನ್ಯಾವುದೋ ಪಾಸ್ ಬಳಸಿ ಸುತ್ತಾಡಿದರೆ ವಾಹನ ಮುಟ್ಟುಗೋಲು

Sunday, May 9th, 2021
police Commissioner

ಮಂಗಳೂರು :  ಕೊರೋನ ಲಾಕ್ ಡೌನ್ ಸಂದರ್ಭ ಸಂಘಟನೆ, ಪಕ್ಷ ಅಥವಾ ಇನ್ಯಾವುದೋ ಪಾಸ್ ಬಳಸಿ ಸುತ್ತಾಡಿದರೆ ಅಂತಹವರ ವಾಹನಗಳನ್ನು ನಿರ್ದಾಕ್ಷಿಣ್ಯವಾಗಿ ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ರವಿವಾರ ಸಾಮಾಜಿ ಜಾಲತಾಣಗಳ ಲೈವ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ. ನಾಗರಿಕರ ಹಿತದೃಷ್ಟಿಯಿಂದ ಕೋವಿಡ್, ವೀಕೆಂಡ್ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ. ಮೆಡಿಕಲ್, ವೈದ್ಯಕೀಯ, ಪತ್ರಿಕೆ ಸಹಿತ ತುರ್ತು ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಆದರೆ ಕೆಲವರು ನಿರ್ಗತಿಕರಿಗೆ ಊಟದ ವ್ಯವಸ್ಥೆ ನೀಡುತ್ತಿದ್ದೇವೆ ಎಂದು ಹೇಳಿಕೊಂಡು […]

ಸುಲಿಗೆ, ಕಳ್ಳತನ ನಡೆಸುತ್ತಿದ್ದ 6 ಮಂದಿ ದರೋಡೆಕೋರರ ಬಂಧನ

Thursday, April 15th, 2021
Robbers

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಲಿಗೆ, ಕಳ್ಳತನ ನಡೆಸುತ್ತಿದ್ದ 6 ಮಂದಿಯನ್ನು ಬಂಧಿಸಿದ್ದು, ಈ ಮೊದಲು  9 ಮಂದಿ ದರೋಡೆಕೋರರನ್ನು ಬಂಧಿಸಿದ್ದರು. ಇದೀಗ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕೆ.ಸಿ ರೋಡ್ನ ಮುಹಮ್ಮದ್ ಝುಬೈರ್, ಬೆಳ್ತಂಗಡಿಯ ಇಬ್ರಾಹಿಂ ಲತೀಫ್,‌ ಮೂಡಬಿದಿರೆಯ ರಾಕೇಶ್, ಅರ್ಜುನ್, ಉಪ್ಪಿನಂಗಡಿಯ ಮೋಹನ್ ಮತ್ತು ಕೋಣಾಜೆ ಬೋಳಿಯಾರ್ನ ಮನ್ಸೂರ್ ಬಂಧಿತರು. ಮಂಗಳೂರು ನಗರದಲ್ಲಿ 7 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 8, ಹಾಸನದಲ್ಲಿ 2, ಚಿಕ್ಕಮಗಳೂರಿನಲ್ಲಿ 3, ಕೊಡಗುವಿನಲ್ಲಿ 5, ಉಡುಪಿಯಲ್ಲಿ […]

ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಅಧಿಕಾರ ಸ್ವೀಕಾರ

Saturday, January 2nd, 2021
Shashikumar

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್  ಆಗಿ  ಐಪಿಎಸ್  ಅಧಿಕಾರಿ ಶಶಿಕುಮಾರ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಪೊಲೀಸ್ ರೀತಿಯಲ್ಲಿ ಕೆಲಸ ಮಾಡಿದರೆ ಅಪರಾಧ ರಹಿತ ಸಮಾಜ ನಿರ್ಮಾಣ ಸಾಧ್ಯ. ಪೊಲೀಸ್ ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಹಿಂದೆ ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿದ್ದ ಪೋನ್ ಇನ್ ಕಾರ್ಯಕ್ರಮ ಮುಂದುವರಿಯುವ ಜೊತೆಗೆ ಪ್ರತಿ ಪೊಲೀಸ್ ಸಿಬ್ಬಂದಿ ಸಾರ್ವಜನಿಕರ ಅಹವಾಲು ಆಲಿಸುವ ಪೊಲ್ ವ್ಯವಸ್ಥೆ ರೂಪಿಸುವುದಾಗಿ ಹೇಳಿದ್ದಾರೆ. ಮಂಗಳೂರಿನಲ್ಲಿ ಪೊಲೀಸ್ ಮೇಲೆ ಹಲ್ಲೆ ಪ್ರಕರಣಗಳು ಕೇಳಿ […]

ಮರಳಿ ಮನೆಗೆ… ‘ಕೈ’ ಬಿಟ್ಟು ‘ತೆನೆ’ ಹೊತ್ತ ನಟ ಶಶಿಕುಮಾರ್

Thursday, April 19th, 2018
shshi-kumar

ಬೆಂಗಳೂರು: ಟಿಕೆಟ್ ಆಕಾಂಕ್ಷಿಗಳ ಪಕ್ಷಾಂತರ ಪರ್ವದ ಪಟ್ಟಿಗೆ ಇದೀಗ ನಟ ಶಶಿಕುಮಾರ್ ಹೆಸರು ಸೇರ್ಪಡೆಯಾಗಿದೆ. ಶಶಿಕುಮಾರ್ ಹೊಸದುರ್ಗ ಟಿಕೆಟ್‌ಗಾಗಿ ‘ಕೈ’ ತೊರೆದು ‘ತೆನೆ’ ಹೊತ್ತಿದ್ದಾರೆ. ಹೌದು, ಮಾಜಿ ಸಂಸದ ಹಾಗೂ ಚಿತ್ರನಟ ಶಶಿಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು ಜಾತ್ಯತೀತ ಜನತಾದಳವನ್ನು ಸೇರಿದ್ದಾರೆ. ಪದ್ಮನಾಭನಗರದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ತೆರಳಿ ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಪಕ್ಷದ ಶಾಲು ನೀಡುವ ಮೂಲಕ ದೇವೇಗೌಡರು ಶಶಿಕುಮಾರ್‌‌ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು. ಹೊಸದುರ್ಗ ಕ್ಷೇತ್ರದ ಟಿಕೆಟ್ […]

ಸಾಲ ಹಿಂದಿರುಗಿಸದ್ದಕ್ಕೆ ಕೋಪಗೊಂಡ ಯುವಕನೊಬ್ಬ ಸ್ನೇಹಿತನ ತಲೆ ಕಡಿದು ಪೊಲೀಸ್‌ ಠಾಣೆಗೆ ಶರಣು

Wednesday, August 24th, 2016
Anjaneya

ದೇವನಹಳ್ಳಿ: 27 ಸಾವಿರ ರೂಪಾಯಿ ಸಾಲ ಹಿಂದಿರುಗಿಸದ್ದಕ್ಕೆ ಕೋಪಗೊಂಡ ಯುವಕನೊಬ್ಬ, ಸ್ನೇಹಿತನ ತಲೆ ಕಡಿದು ರುಂಡ ಸಮೇತ ಪೊಲೀಸ್‌ ಠಾಣೆಗೆ ಬಂದು ಶರಣಾಗಿರುವ ಘಟನೆ ತಾಲೂಕಿನ ವಿಶ್ವನಾಥಪುರ ಠಾಣೆಯಲ್ಲಿ ನಡೆದಿದೆ. ತಾಲೂಕಿನ ಕೆಂಪತಿಮ್ಮನಹಳ್ಳಿಯ ಮಂಜುನಾಥ್‌ (26) ಬರ್ಬರವಾಗಿ ಕೊಲೆಯಾದ ದುರ್ದೈವಿ. ಉಗನವಾಡಿ ಶಶಿಕುಮಾರ್‌ ಕೊಲೆ ಮಾಡಿ ಪೊಲೀಸರಿಗೆ ಶರಣಾದವ. ಈತ ಕನ್ನಮಂಗಲ ಗ್ರಾಮ ಪಂಚಾಯಿತಿ ಸದಸ್ಯ ನಾರಾಯಣಸ್ವಾಮಿ ಅವರ ಪುತ್ರ ಎಂದು ಪೊಲೀಸರು ತಿಳಿಸಿದ್ದಾರೆ. ಶಶಿಕುಮಾರ್‌ ಮತ್ತು ಮಂಜುನಾಥ್‌ ಸ್ನೇಹಿತರಾಗಿದ್ದು ಶಶಿಕುಮಾರ್‌, ಮಂಜುನಾಥಗೆ 27 ಸಾವಿರ ರೂ. […]

ರೈಲೇ ಹೋರಾಟಗಾರ-ಸಮಾಜ ಸೇವಕ ಶಶಿಕುಮಾರ್ ಸಿ.ಕುಂದರ್ ಮೂಲ್ಕಿ ನಿಧನ

Tuesday, March 10th, 2015
kundar

ಮುಂಬಯಿ : ರೈಲ್ವೇ ಯಾತ್ರಿ ಸಂಘ ಬೊರಿವಲಿ ಮುಂಬಯಿ (ಪಶ್ಚಿಮ ವಲಯ) ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಸಿ. ಕುಂದರ್ (68.) ಅವರು ಸೋಮವಾರ ರಾತ್ರಿ ತಮ್ಮ ಗೋರೆಗಾಂವ್ ಪೂರ್ವದ ಸ್ವನಿವಾಸದಲ್ಲಿ ನಿಧನ ಹೊಂದಿದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಬಪ್ಪನಾಡು ನಿವಾಸಿಯಾಗಿದ್ದ ಅವರು ಕಳೆದ ಹಲವು ವರ್ಷಗಳಿಂದ ರೈಲ್ವೇ ಯಾತ್ರಿ ಸಂಘದಲ್ಲಿ ಸಕ್ರೀಯರಾಗಿ ಸೇವಾ ನಿರತರಾಗಿದ್ದು, ಕೇಂದ್ರಿಯ ಅಂದಿನ ರೈಲ್ವೇ ಮಂತ್ರಿ ಮಮತಾ ಬಾನರ್ಜಿ ಅವರಿಂದ ಒಳಗೊಂಡು ಪ್ರಸಕ್ತ ರೈಲ್ವೇ ಮಂತ್ರಿ ಸುರೇಶ್ ಪ್ರಭು […]