ಬ್ಯಾಟರಿ ಶಾರ್ಟ್ ಸರ್ಕ್ಯೂಟ್ – ಕಾರು ಚಲಿಸುತ್ತಿರುವಾಗಲೇ ಬೆಂಕಿ

Tuesday, March 16th, 2021
Mudradi Car

ಹೆಬ್ರಿ :  ಮಂಗಳವಾರ ಮುಂಜಾನೆ ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ತಾಲೂಕಿನ ಮುದ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮೇಶ್ವರ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾವೇರಿ ಮೂಲದ ರಮೇಶ್ ಎಂಬವರು ಹಿರಿಯಡ್ಕದಲ್ಲಿ ಪೂಜೆ ಕಾರ್ಯಕ್ರಮ ಮುಗಿಸಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ತನ್ನ ಮಾರುತಿ ಆಲ್ಟೋ ಕಾರಿನಲ್ಲಿ ಮನೆಗೆ ವಾಪಾಸುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಕ್ಷಣ ಅವರು ಕಾರಿನಿಂದ ಕೆಳಗಿದು ಬಚಾವ್ ಆಗಿದ್ದಾರೆ. ಸ್ಥಳಕ್ಕಾಗಮಿಸಿದ […]

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಬೆಂಕಿಗಾಹುತಿ

Friday, August 14th, 2020
vishnuBakery

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೇಕರಿ ಅಂಗಡಿ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಪಾಣೆಮಂಗಳೂರು ಕಲ್ಲುರ್ಟಿ ದೇವಸ್ಥಾನದ ಸಮೀಪದ ಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿರುವ ವಿಷ್ಣು ಬೇಕರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಸುಟ್ಟು ಭಸ್ಮವಾಗಿರುದೆ. ಸುಮಾರು 10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ಬೇಕರಿ ಮಾಲೀಕ ರಾಜೇಶ್ ಅವರು ತಿಳಿಸಿದ್ದಾರೆ. ಇತ್ತೀಚಿಗೆ ಅಷ್ಟೇ ಈ ಅಂಗಡಿಯ ನವೀಕರಣ ಕೆಲಸಗಳನ್ನು ಮಾಡಲಾಗಿದೆ. ರಾತ್ರಿ ಅಂಗಡಿ ಬಾಗಿಲು ಹಾಕಿ ಹೋದ […]

ಬ್ರಹ್ಮರಕೂಟ್ಲು : ಶಾರ್ಟ್ ಸರ್ಕ್ಯೂಟ್ ನಿಂದ ಪ್ಲೈವುಡ್ ಮಿಲ್ ನಲ್ಲಿ ಬೆಂಕಿ

Wednesday, October 23rd, 2019
ply-wood

ಬಂಟ್ವಾಳ : ಶಾರ್ಟ್ ಸರ್ಕ್ಯೂಟ್ ನಿಂದ ಪ್ಲೈವುಡ್ ಮಿಲ್ ನಲ್ಲಿ ಬೆಂಕಿ ತಗಲಿದ ಘಟನೆ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಎಂಬಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ಮಿಲ್ ನ ಒಳಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ‌. ಈ ವೇಳೆ ಇಲ್ಲಿ ಕೆಲಸ ಮಾಡುತ್ತಿದ್ದ ವಾಚ್ ಮ್ಯಾನ್ ಮಾಲಕರಿಗೆ ತಿಳಿಸಿದ್ದು, ತಕ್ಷಣ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ‌. ಅರ್ಧ ತಾಸಿನ ಬಳಿಕ ಬೆಂಕಿ ಮಿಲ್ ಒಳಭಾಗವಿಡೀ ವ್ಯಾಪಿಸಿದೆ‌. ಒಟ್ಟು ನಾಲ್ಕು ಘಟಕದ ಅಗ್ನಿಶಾಮಕ ದಳವು ಮೂರೂವರೆ ಗಂಟೆಗಳ […]

ಅಗ್ನಿ ಅವಘಡ : ಮಕ್ಕಳಿಬ್ಬರು ಮೃತ್ಯು; ಪೋಷಕರು ಗಂಭೀರ

Monday, October 21st, 2019
agni-avaghada

ಬೆಂಗಳೂರು : ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿ ಇದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿಯ ಭಕ್ಷಿಗಾರ್ಡನ್‍ನಲ್ಲಿ ನಡೆದಿದೆ. ಮೃತ ದುರ್ದೈವಿ ಮಕ್ಕಳನ್ನು ಕಾವೇರಿ (21) ಶ್ರೀಕಾಂತ್ (13) ಎಂದು ಗುರುತಿಸಲಾಗಿದೆ. ಇವರ ಪೋಷಕರಾದ ಮುರಳಿ ಮತ್ತು ಗೀತಾರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಬಂದು ಪರೀಶಿಲನೆ […]

ಮಂಗಳೂರು : ಶಾರ್ಟ್ ಸರ್ಕ್ಯೂಟ್ ದಿಂದ ಟಯರ್ ಅಂಗಡಿಗೆ ಬೆಂಕಿ

Thursday, October 17th, 2019
tayar-angadi

ಮಂಗಳೂರು : ಬಂದರಿನಲ್ಲಿರುವ ಹಿದಾಯತ್ ಸೆಂಟರ್ ನ ಪಕ್ಕದ ಸುರೇಶ್ ಮಾಲೀಕತ್ವದ ನವಜೀವನ ಟ್ರೇಡರ್ಸ್ ಟಯರ್ ಅಂದದಿಗೆ ಬೆಂಕಿ ಕಾಣಿಸಿಕೊಂಡ್ಡಿದ್ದು ಸ್ಥಳೀಯರ ಸಹಾಯದಿಂದ ಭಾರೀ ದುರಂತ ತಪ್ಪಿದೆ. ಈ ಬಗ್ಗೆ ಇರ್ಷಾದ್ ವೇಣೂರ್ ಪಾಂಡೇಶ್ವರ್ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿ ಮೆಸ್ಕಂನವರಿಗೂ ತಿಳಿಸಿ ಕರೆಂಟ್ ಆಫ್ ಮಾಡಲು ಮನವಿ ಮಾಡಿದರು. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು, ಸುಮಾರು 6 ಲಕ್ಷ ರೂ. ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ. ಈ ಬಗ್ಗೆ […]

ಶಾರ್ಟ್ ಸರ್ಕ್ಯೂಟ್ ನಿಂದ ಜನರಿಕ್ ಔಷಧ ಮಳಿಗೆ ಭಸ್ಮ

Tuesday, August 6th, 2019
genaric

ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಪ್ರಧಾನ ಮಂತ್ರಿ ಜನರಿಕ್ ಔಷಧ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಗರದ ತೊಕ್ಕೊಟ್ಟು ಒಳಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಈ ಘಟನೆಯಿಂದ ಲಕ್ಷಾಂತರ ರೂ. ಮೌಲ್ಯದ ಔಷಧಿಗಳು, ಫ್ರಿಡ್ಜ್ ಸೇರಿ‌ದಂತೆ ವಿವಿಧ ವಸ್ತುಗಳು ಸುಟ್ಟು ಭಸ್ಮವಾಗಿದೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ ಬೆಂಕಿ‌ ನಂದಿಸುವ ಕಾರ್ಯ ಮಾಡಿತು. ಕಾರ್ಯಾಚರಣೆ ವೇಳೆ ಔಷಧಿ ಅಂಗಡಿಯಲ್ಲಿದ್ದ ಬ್ಯಾಟರಿ ಸ್ಪೋಟಗೊಂಡ ಪರಿಣಾಮ ಅಗ್ನಿಶಾಮಕ ದಳದ ಸಿಬ್ಬಂದಿಯ ಮುಖಕ್ಕೆ ಗಾಯವಾದ ಘಟನೆ ನಡೆಯಿತು. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ […]

ಸರ್ಕಾರಿ ‌ಲೇಡಿಗೋಷನ್ ಆಸ್ಪತ್ರೆಯ ಮಕ್ಕಳ ಎನ್​ಐಸಿಯು ವಿಭಾಗದಲ್ಲಿ ಬೆಂಕಿ

Monday, December 10th, 2018
lady-goshan

ಮಂಗಳೂರು: ನಗರದ ಸರ್ಕಾರಿ ‌ಲೇಡಿಗೋಷನ್ ಆಸ್ಪತ್ರೆಯ ಮಕ್ಕಳ ಎನ್ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾರ್ಡ್ನಲ್ಲಿದ್ದ 4 ಮಕ್ಕಳನ್ನು ರಕ್ಷಿಸಿ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್ಐಸಿಯುನಲ್ಲಿ ನಾಲ್ಕು ಕಂದಮ್ಮಗಳು ಚಿಕಿತ್ಸೆ ಪಡೆಯುತ್ತಿದ್ದು, ಮಕ್ಕಳ ತುರ್ತು ನಿಗಾ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಮಕ್ಕಳನ್ನು ತಕ್ಷಣವೇ ಸ್ಥಳೀಯ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಮಂಗಳೂರಿನ ಮೆಡಿಕಲ್ ಶಾಪ್​ಗೆ ಬೆಂಕಿ: ಔಷಧಗಳು ಸುಟ್ಟು ಭಸ್ಮ

Wednesday, October 24th, 2018
shop-medical

ಮಂಗಳೂರು: ಇಲ್ಲಿನ ಹಂಪನಕಟ್ಟೆಯಲ್ಲಿರುವ ಸೆಂಟ್ರಲ್ ಮಾರುಕಟ್ಟೆ ರಸ್ತೆಯಲ್ಲಿನ ಮೆಡಿಕಲ್ ಶಾಪ್ಗೆ ಬೆಂಕಿ ಬಿದ್ದು, ಔಷಧಗಳು ಸೇರಿದಂತೆ ಪೀಠೋಪಕರಣಗಳು ಭಸ್ಮವಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ರಾತ್ರಿ 11 ಗಂಟೆಯ ಸುಮಾರಿಗೆ ಸೆಂಟ್ರಲ್ ಮಾರುಕಟ್ಟೆಯ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ಗೆ ಬೆಂಕಿ ಬಿದ್ದಿದೆ. ಇದರಿಂದ ಮೆಡಿಕಲ್ ಶಾಪಿನ ಎಲ್ಲಾ ಔಷಧಗಳು ಬೆಂಕಿಗಾಹುತಿಯಾಗಿವೆ . ಜೊತೆಗೆ ಪೀಠೋಪಕರಣ ಸೇರಿದಂತೆ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿವೆ. ರಾತ್ರಿಯಾದ್ದರಿಂದ ಮೆಡಿಕಲ್ ಶಾಪ್ನಲ್ಲಿ ಯಾರೂ ಇರಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ, […]

ಶಾರ್ಟ್‌ ಸರ್ಕ್ಯೂಟ್‌ಗೆ ಕಾರು ಧಗಧಗ… ನೋಡು ನೋಡ್ತಿದ್ದಂತೆ ಹೊತ್ತಿ ಉರಿಯಿತು!

Saturday, June 2nd, 2018
short-circute

ಮಂಗಳೂರು: ನೋಡು ನೋಡ್ತಿದ್ದಂತೆ ಕಾರುವೊಂದು ಹೊತ್ತಿ ಉರಿದಿರುವ ಘಟನೆ ಮಂಗಳೂರಿನ ಹೊರವಲಯದ ಕಾವೂರ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ರಸ್ತೆ ಮಧ್ಯೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ. ಬಜ್ಪೆಯ ಜಯರಾಜ್ ಎಂಬುವವರಿಗೆ ಸೇರಿದ ಐ 10 ಕಾರ್ ಇದಾಗಿದ್ದು, ಬೆಂಕಿಗೆ ಆಕಸ್ಮಿಕವಾಗಿ ನಡೆದ ಶಾರ್ಟ್‌ ಸರ್ಕ್ಯೂಟ್‌ ಎಂದು ಹೇಳಲಾಗಿದೆ.

ಮಂಗಳೂರಿನಲ್ಲಿ ಗುಜರಿಗೆ ಬೆಂಕಿ ಬಿದ್ದು ಲಕ್ಷಾಂತರ ರುಪಾಯಿಯ ವಸ್ತು ಬೂದಿ

Friday, March 16th, 2018
mangaluru

ಮಂಗಳೂರು: ಮಂಗಳೂರಿನ ಬಂದರು ಪ್ರದೇಶದಲ್ಲಿ ಗುಜರಿ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ, ಅಪಾರ ನಷ್ಟ ಸಂಭವಿಸಿದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಗುಜರಿ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಬೂದಿಯಾಗಿವೆ. ಬಂದರು ಪ್ರದೇಶದ ಬೀಬಿ ಅಲಾಬಿ ರಸ್ತೆಯಲ್ಲಿರುವ ಗುಜರಿ ಅಂಗಡಿಗೆ ಬೆಂಕಿ ಹೊತ್ತಿಕೊಂಡು, ಸುತ್ತಲ ಪರಿಸರದಲ್ಲಿ ಆವರಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ನಿವಾಸಿಗಳು ಬೆಂಕಿ ನಂದಿಸಲು ಶ್ರಮಿಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ […]