ರಾಜ್ಯ ಸರಕಾರಕ್ಕೆ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಪಡಿಸುವ ಅಧಿಕಾರವಿಲ್ಲ : ಯು.ಟಿ ಖಾದರ್

Thursday, January 14th, 2021
ut Khader

ಮಂಗಳೂರು : ಸುಳ್ಯ ಶಾಸಕ ಎಸ್. ಅಂಗಾರ ಸಚಿವರಾಗಿರುವುದು ಸಂತೋಷದ ವಿಷಯ. ಕೋಟ ಶ್ರೀನಿವಾಸ ಪೂಜಾರಿ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸಿದ್ದು, ಅವರನ್ನೇ ಉಸ್ತುವಾರಿ ಸಚಿವರನ್ನಾಗಿ ಮುಂದುವರಿಸುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಅವರನ್ನು ಉಡುಪಿಯ ಬದಲು ದ.ಕ. ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಿರುವುದರ ಉದ್ದೇಶವೇನು ಎಂಬುದನ್ನು ಸರಕಾರ ಸ್ಪಷ್ಟಪಡಿಸಲಿ ಎಂದು ಶಾಸಕ ಯು.ಟಿ  ಖಾದರ್  ಪ್ರಶ್ನಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕ ಸುನೀಲ್ ಕುಮಾರ್ ಕೂಡಾ ‘ನನಗೆ ಪಕ್ಷ ನಿಷ್ಠೆ ಗೊತ್ತು, ಬ್ಲಾಕ್ ಮೇಲ್ ಗೊತ್ತಿಲ್ಲ’ […]

ಶಾಸಕ ಎಸ್. ಅಂಗಾರ ಅವರಿಗೆ ಕೊರೋನ ಪಾಸಿಟಿವ್ ದೃಢ

Friday, August 28th, 2020
S Angara

ಸುಳ್ಯ : ಬೆಂಗಳೂರಿನಿಂದ ಆಗಮಿಸಿದ  ಶಾಸಕ ಎಸ್. ಅಂಗಾರ ಅವರಿಗೆ ಕೊರೋನ ಪಾಸಿಟಿವ್ ದೃಢವಾಗಿದ್ದು, ಹೊಮ್ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ಅವರು ತಿಳಿಸಿದ್ದಾರೆ. ಶಾಸಕರಿಗೆ ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಪರೀಕ್ಷೆ ಮಾಡಿಕೊಂಡಿದ್ದು, ರಿಪೋರ್ಟ್ ನಲ್ಲಿ ಕೊರೋನ ಪಾಸಿಟಿವ್ ದೃಢವಾಗಿದ್ದು, ಕ್ವಾರಂಟೈನ್ ನಲ್ಲಿ ಇರುವುದಾಗಿ ತಿಳಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ : 237 ಸರ್ಪ ಸಂಸ್ಕಾರ ಕ್ರಿಯಾಕರ್ತರಿಗೆ ತಲಾ 5,000 ರೂ. ಮೌಲ್ಯದ ಚೆಕ್ ವಿತರಣೆ

Saturday, May 16th, 2020
Angara MLA

ಸುಳ್ಯ: ಕುಕ್ಕೆಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ನಿತ್ಯ ನಡೆಯುತ್ತಿದ್ದ ಸರ್ಪ ಸಂಸ್ಕಾರ ಪೂಜೆ ಕೋವಿಡ್-19 ಲಾಕ್ಡೌನ್ನಿಂದಾಗಿ ಸ್ಥಗಿತಗೊಂಡಿತ್ತು.  ಇದರಿಂದಾಗಿ ಕಷ್ಟಕ್ಕೆ ಸಿಲುಕಿರುವ ಕ್ರಿಯಾಕರ್ತರಿಗೆ ಗೌರವ ಧನವನ್ನು ಶಾಸಕ ಎಸ್. ಅಂಗಾರ ಅವರು ಶನಿವಾರ ವಿತರಿಸಿದರು. ಒಟ್ಟು 237 ಮಂದಿ ಸರ್ಪ ಸಂಸ್ಕಾರ ಕ್ರಿಯಾಕರ್ತರಿಗೆ ತಲಾ 5,000 ರೂ. ಮೌಲ್ಯದ ಚೆಕ್ ನೀಡಿದರು. ಕ್ರಿಯಾಕರ್ತರ ಪರವಾಗಿ ದೇವಸ್ಥಾನದ ವತಿಯಿಂದ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಧನ ಸಹಾಯಕ್ಕೆ ಮನವಿ ಸಲ್ಲಿಸಲಾಗಿತ್ತು. ಧನ ಸಹಾಯ ವಿತರಿಸಿದ ಶಾಸಕ ಎಸ್.ಅಂಗಾರ ಕ್ರಿಯಾಕರ್ತರ […]