ಶಿರೂರು ಮಠದ ಉತ್ತರಾಧಿಕಾರಿ ಘೋಷಣೆ, ಮೇ.14ರಂದು ಪಟ್ಟಾಭಿಷೇಕ

Wednesday, April 21st, 2021
Anirudha

ಉಡುಪಿ : ಶಿರೂರು ಮಠದ ಉತ್ತರಾಧಿಕಾರಿಯಾಗಿ ಅನಿರುದ್ಧ ಸರಳತ್ತಾಯ, ಎಂಬ ವಟುವನ್ನು ಆಯ್ಕೆ ಮಾಡಲಾಗಿದೆ ಎಂದು ಶಿರೂರು ಮಠದ ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥರು ಹಿರಿಯಡ್ಕ ಸಮೀಪದ ಶಿರೂರು ಮೂಲ ಮಠದಲ್ಲಿ ಘೋಷಣೆ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀವಿಶ್ವವಲ್ಲಭ ತೀರ್ಥರು ವಟು ಅನಿರುದ್ಧ 10ನೇ ತರಗತಿಯಲ್ಲಿ ವ್ಯಾಸಂಗ ಪೂರೈಸಿದ್ದು, ಬಾಲ್ಯದಿಂದಲೇ ಧಾರ್ಮಿಕ ಆಚರಣೆಗಳಲ್ಲಿ ಆಸಕ್ತಿ ಹೊಂದಿದ್ದರು. ತಾನೇ ಸ್ವತಃ ಶೀರೂರು ಮಠಕ್ಕೆ ಯತಿಯಾಗಿ ತೆರಳುವೆನೆಂದು ತನ್ನ ಅಭಿಪ್ರಾಯವನ್ನು ತಂದೆಯ ಬಳಿ ವ್ಯಕ್ತಪಡಿಸಿದ್ದರು. ಈ ವೇಳೆ ಜಾತಕ ವಿಮರ್ಶಿಸಿದಾಗ ಪೀಠಾಧಿಪತ್ಯದ ಯೋಗ ಇದೆ ಎಂದು ತಿಳಿಯಿತು […]

ಶಿರೂರು ಮೂಲ ಮಠದ ಬೆಲೆಬಾಳುವ ಸೊತ್ತುಗಳು ಉಡುಪಿಗೆ

Thursday, August 2nd, 2018
Shiroor math

ಉಡುಪಿ :  ಹಿರಿಯಡ್ಕ ಸಮೀಪದ ಶಿರೂರು ಮೂಲ ಮಠದಲ್ಲಿದ್ದ ಬೆಲೆಬಾಳುವ, ಅಮೂಲ್ಯ ಸೊತ್ತುಗಳನ್ನು ಸುರಕ್ಷತೆಯ ದೃಷ್ಠಿಯಿಂದ ದ್ವಂದ್ವ ಮಠವಾದ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಇಂದು ಪೊಲೀಸರ ಸಮ್ಮುಖದಲ್ಲಿ ಉಡುಪಿಯ ಶಿರೂರು ಮಠಕ್ಕೆ ತಂದು ಅಲ್ಲಿನ ಲಾಕರ್‌ನಲ್ಲಿರಿಸಿದರು. ಶಿರೂರು ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಜು.19ರಂದು  ಮೃತಪಟ್ಟ ನಂತರ ತನಿಖೆಯ ಹಿನ್ನೆಲೆಯಲ್ಲಿ ಪೊಲೀಸರು ಶಿರೂರು ಮೂಲ ಮಠವನ್ನು ತಮ್ಮ ಸುಪರ್ದಿಗೆ ಪಡೆದು ಬಿಗಿ ಭದ್ರತೆಯನ್ನು ಒದಗಿಸಿದ್ದರು. ತೀರಾ ಗ್ರಾಮೀಣ ಪ್ರದೇಶವಾದ ಶಿರೂರಿನ ಮೂಲಮಠದಲ್ಲಿರುವ ಬೆಲೆಬಾಳುವ ಹಲವು […]