ಆಳ್ವಾಸ್ ಎನ್‍ಎಸ್‍ಎಸ್ ಶೈಕ್ಷಣಿಕ ವರ್ಷದ ಚಟುವಟಿಕಗಳ ಸಮಾರೋಪ ಸಮಾರಂಭ

Monday, April 2nd, 2018
NSS-Program

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ಎನ್ ಎಸ್ ಎಸ್ ವಿಭಾಗದ 2017-18 ಶೈಕ್ಷಣಿಕ ವರ್ಷದ ಚಟುವಟಿಕಗಳ ಸಮಾರೋಪ ಸಮಾರಂಭ ಶನಿವಾರ ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್ ನಲ್ಲಿ ಜರುಗಿತು. ಮೂಡಬಿದಿರೆ ರೋಟರಿ ಕ್ಲಬ್‍ನ ಅಧ್ಯಕ್ಷ ಶ್ರೀಕಾಂತ ಕಾಮತ್, ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಸದಾ ಸ್ವಚ್ಛತಾ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿ, ಸುಂದರ ಪರಿಸರದ ನಿರ್ಮಾತೃಗಳಾಗಬೇಕು ಮೂಡಬಿದಿರೆ ರೋಟರಿ ಕ್ಲಬ್‍ನ ಮಹತ್ತರ ಯೋಜನೆಯಲ್ಲೊಂದಾದ ಸ್ವಚ್ಛ ಸುಂದರ ಮೂಡಬಿದಿರೆ ನಿರ್ಮಾಣದಲ್ಲಿ ಮುಂದಿನ ದಿನಗಳಲ್ಲಿ ಆಳ್ವಾಸ್ ಕಾಲೇಜಿನ ಎನ್‍ಎಸ್‍ಎಸ್ ವಿಭಾಗವು ಕೈಜೋಡಿಸಬೇಕು ಎಂದು ವಿನಂತಿಸಿದರು. […]

ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ

Friday, March 9th, 2018
ramanath-rai

ಬಂಟ್ವಾಳ: ಕಳ್ಳಿಗೆ ಗ್ರಾಮ ಆರ್ಥಿಕವಾಗಿ ಹಿಂದುಳಿದಿದ್ದು, ಈ ಗ್ರಾಮದ ಅಭಿವೃದ್ಧಿಗೆ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವ ಬಿ.ರಮಾನಾಥ ರೈ ಭರವಸೆ ನಿಡಿದ್ದಾರೆ. ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಚೇರಿ ಉದ್ಘಾಟನೆ ಹಾಗೂ ಸ್ವಚ್ಛತಾ ಕರೆಗಂಟೆ ಅಳವಡಿಸಿ, ಮೊಳಗಿಸುವ ಮೂಲಕ ಕಾಲಿಂಗ್ಬೆಲ್ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿ, ತಾಲೂಕಿನ 9 ಹೊಸ ಗ್ರಾಮ ಪಂಚಾಯತ್‌ಗಳಲ್ಲಿ ಕಳ್ಳಿಗೆ ಗ್ರಾಮ ಕೂಡಾ ಒಂದು. ಈ ಗ್ರಾಮದ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುವುದು ಎಂದು […]

ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕಕ್ಕೆ ಮಂಗಳೂರಿನ ಛತ್ರತ್ರಯ !

Thursday, February 15th, 2018
shravanabelagola

ಮಂಗಳೂರು: ಶ್ರವಣಬೆಳಗೊಳ ಶ್ರೀ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸರ್ವ ಸಿದ್ಧತೆಗಳು ನಡೆಯುತ್ತಿದ್ದು, ಅಟ್ಟಳಿಗೆಯ ತುದಿಯಲ್ಲಿ, ಶ್ರೀ ಬಾಹುಬಲಿಯ ಶಿರದ ಮೇಲೆ ಮಂಗಳೂರಿನಲ್ಲಿ ತಯಾರಿಸಿದ ಛತ್ರತ್ರಯ ಕಂಗೊಳಿಸುತ್ತಿದೆ. ಮಂಗಳೂರಿನ ರಥಬೀದಿಯ ಗೋವರ್ಧನ ಮೆಟಲ್‌ ಹೌಸ್‌ನ ಮಾಲಕರಾದ ಶಿವಪ್ರಸಾದ್‌ ಅವರ ತಾಂತ್ರಿಕ ಮೇಲ್ವಿಚಾರಣೆ ಹಾಗೂ ನಿರ್ದೇಶನದಂತೆ ಛತ್ರತ್ರಯವನ್ನು ಸಿದ್ಧಪಡಿಸಲಾಗಿದೆ. ಈ ಮೊದಲು ನಡೆದ ಮಹಾಮಸ್ತಕಾಭಿಷೇಕಕ್ಕೂ ಛತ್ರತ್ರಯಗಳನ್ನು ಅಳವಡಿಸುವ ಕಾರ್ಯವನ್ನು ಮಂಗಳೂರಿನ ಇವರ ನೇತೃತ್ವದ ತಂಡವೇ ನಿರ್ವಹಿಸಿದೆ. ತಾಮ್ರದ ಜಾಲಿಯಲ್ಲಿ ಹಿತ್ತಾಳೆಯ ಸೂಕ್ಷ್ಮ ಕುಸುರಿ ಕೆತ್ತನೆ ಮಾಡಿದ ಈ ಛತ್ರಿಗಳಿಗೆ ಬಳಿಕ ಬಂಗಾರದ […]

ಮೆಗಾ ಮೀಡಿಯಾ ನ್ಯೂಸ್ ಹತ್ತನೇ ವಾರ್ಷಿಕೋತ್ಸವದ ಅಂಗವಾಗಿ ಮೆಗಾ ಮಿಡಿಯಾ ಪತ್ರಿಕೋದ್ಯಮ ಪ್ರಶಸ್ತಿ, ಸಾಧಕರಿಗೆ ಸನ್ಮಾನ ಸಾಂಸ್ಕೃತಿಕ ಹಬ್ಬ-2013 ಸಂಭ್ರಮದ ಆಚರಣೆ

Saturday, January 19th, 2013
Mega Media "Cultural Festival 2013"

ಮಂಗಳೂರು : ಜಗತ್ತು ತೀವ್ರಗತಿಯಲ್ಲಿ ಬದಲಾಗುತ್ತಿದೆ. ಈ ಬದಲಾವಣೆಯನ್ನು ಸ್ವೀಕರಿಸಿ ಉತ್ತಮ ವಿಚಾರಗಳನ್ನು ಪಾಲಿಸಿಕೊಂಡು ಬಂದಾಗ ಮಾತ್ರ ಅಭಿವೃದ್ಧಿ ಎನ್ನುವ ಮಂತ್ರ ಪಠಿಸಲು ಸಮಾಜದಲ್ಲಿ ಸಾಧ್ಯವಾಗುತ್ತದೆ ಎಂದು ಕರಾವಳಿ ಸಮೂಹ ಕಾಲೇಜು ಇದರ ಅಧ್ಯಕ್ಷ ಗಣೇಶ್ ರಾವ್ ಹೇಳಿದರು. ಅವರು ಶುಕ್ರವಾರ ಮಂಗಳೂರಿನ ಪುರಭವನದಲ್ಲಿ ನಡೆದ ಮೆಗಾ ಮೀಡಿಯಾ ನ್ಯೂಸ್ ಇದರ ಹತ್ತನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ಸಾಂಸ್ಕೃತಿಕ ಹಬ್ಬ-2013ರಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮೆಗಾ ಮೀಡಿಯಾ ವಿಶೇಷ ಸಂಚಿಕೆಯನ್ನು ಕರ್ನಾಟಕ ಬ್ಯಾಂಕಿನ ಜನರಲ್ […]

ಮೆಗಾ ಮೀಡಿಯಾ “ಸಾಂಸ್ಕೃತಿಕ ಹಬ್ಬ 2013” ನಗರದ ಪುರಭವನದಲ್ಲಿ ಜನವರಿ 18 ಶುಕ್ರವಾರ ಸಂಜೆ 4:30ಕ್ಕೆ

Thursday, January 10th, 2013
Mega media

ಮಂಗಳೂರು : ಮೆಗಾ ಮೀಡಿಯಾ ತನ್ನ 10 ನೇ ವರ್ಷಾಚರಣೆಯ ಪ್ರಯುಕ್ತ ನಗರದ ಪುರಭವನದಲ್ಲಿ ಜನವರಿ 18 ಶುಕ್ರವಾರ ಸಂಜೆ 4:30ಕ್ಕೆ ಮೆಗಾ ಮೀಡಿಯಾ “ಸಾಂಸ್ಕೃತಿಕ ಹಬ್ಬ 2013” ಮನರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕಾರ್ಯಕ್ರಮದಲ್ಲಿ ಮನೋರಂಜನಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಮೆಗಾ ಮೀಡಿಯಾ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಹಾಗೂ ಸಭಾಕಾರ್ಯಕ್ರಮ ನಡೆಯಲಿದೆ ಎಂದು ಮೆಗಾ ಮೀಡಿಯಾ ನ್ಯೂಸ್ ನ ಪ್ರದಾನ ಸಂಪಾದಕ ಶಿವಪ್ರಸಾದ್ ಅವರು ಇಂದು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಮೆಗಾಮೀಡಿಯಾ 2002 ರಲ್ಲಿ ಆರಂಭಗೊಂಡು […]