ಬಂಟ್ವಾಳದಲ್ಲಿ ಶೋಭಾ ಕರಂದ್ಲಾಜೆಯವರೊಂದಿಗೆ ರಕ್ಷಾಬಂಧನ

Sunday, August 22nd, 2021
Raksha Bandhana

ಬೆಂಗಳೂರು  : ಕೇಂದ್ರ ಕೃಷಿ ಮತ್ತ ರೈತಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಇಂದು ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೇಂದ್ರದ ನೂತನ ಸಚಿವೆಯನ್ನು ಭಗವದ್ಗೀತೆ ನೀಡಿ ಅಭಿನಂದಿಸಿ ಸಚಿವೆ ಶೋಭಾ ಕರಂದ್ಲಾಜೆಯವರೊಂದಿಗೆ ಸಹೋದರತ್ವದ ಪ್ರತೀಕವಾದ ರಕ್ಷಾಬಂಧನ ಆಚರಿಸಿದರು. ಪ್ರತಿ ತಾಲೂಕಿನಲ್ಲಿ ಮುಂದಿನ ದಿನಗಳಲ್ಲಿ FPO(ರೈತರ ಉತ್ಪಾದಕರ ಸಂಸ್ಥೆ) ಪ್ರಾರಂಭಿಸುವುದಾಗಿ ಕೃಷಿ ಸಚಿವೆ ಈ ಸಂದರ್ಭದಲ್ಲಿ ಹೇಳಿದರು. ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ರವರು ಕೋಟಿ-ಚೆನ್ನಯರ ಚರಿತ್ರೆ […]

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

Thursday, August 19th, 2021
Shobha Udupi

ಉಡುಪಿ: ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಗುರುವಾರ ಭೇಟಿ ನೀಡಿದರು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥಶ್ರೀ ಹಾಗೂ ಪರ್ಯಾಯ ಅದಮಾರು ಮಠದ ಹಿರಿಯ ಸ್ವಾಮಿಗಳಾದ ವಿಶ್ವಪ್ರಿಯ ತೀರ್ಥಶ್ರೀ ಅವರಿಮದ ಮಂತ್ರಾಕ್ಷತೆ ಪಡೆದು ಸ್ವಾಮಿಯೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭ ಶಾಸಕ ಕೆ. ರಘುಪತಿ ಭಟ್ ಹಾಗು ಇತರರು ಉಪಸ್ಥಿತರಿದ್ದರು.

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಹಾನಿ : ದೆಹಲಿಯಿಂದ ಸಚಿವೆ ಶೋಭಾ ಕರಂದ್ಲಾಜೆ ವಿಡಿಯೋ ಕಾನ್ಫೆರನ್ಸ್

Friday, July 16th, 2021
Shobha Karandlaje

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ದೆಹಲಿಯಲ್ಲಿದ್ದುಕೊಂಡೇ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಉಂಟಾದ ಭಾರಿ ಮಳೆಯ ವಿವರಗಳನ್ನು  ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ್ದಾರೆ. ಬೆಳಿಗ್ಗೆಯೇ ತಮ್ಮ ದೆಹಲಿಯ ಕಛೇರಿ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫೆರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಳೆಯಿಂದ ಆಗಲಿರುವ ಪೃಕತಿ […]

ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆದ ಕರ್ನಾಟಕದ ನಾಲ್ವರು ಸಂಸದರು

Wednesday, July 7th, 2021
cabinet

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ  ಕೇಂದ್ರ ಸಂಪುಟ ಪುನರ್ ರಚನೆ ಗೊಂಡಿದ್ದು ರಾಷ್ಟ್ರಪತಿ ಭವನದಲ್ಲಿ ಜು.7 ರಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಎ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ಮೊದಲಿಗರಾಗಿ ರಾಜೀವ್ ಚಂದ್ರಶೇಖರ್ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ರಾಜೀವ್ ಚಂದ್ರಶೇಖರ್ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ […]

ತುಳುವರ ನಾಡು ನುಡಿಯ ಹೋರಾಟವನ್ನು ಅವಮಾನಿಸಿದ ಶೋಭಾ ಕರಂದ್ಲಾಜೆ : ತುಳುವೆರೆ ಪಕ್ಷ ಖಂಡನೆ

Tuesday, June 22nd, 2021
Shailesh

ಬೆಳ್ತಂಗಡಿ: ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆಯವರು ಇತ್ತೀಚೆಗೆ ತುಳು ರಾಜ್ಯದ ಬೇಡಿಕೆಯು ಕುಚೋದ್ಯದ ಬೇಡಿಕೆ ಎಂದಿದ್ದು ಖಂಡನೀಯ. ಕನ್ನಡ ಏಕೀಕರಣ ಚಳವಳಿಯನ್ನು ಸಮರ್ಥಿಸಿರುವ ಇವರು ಅದೇ ತುಳು ಏಕೀಕರಣ ಚಳವಳಿಯನ್ನು ಕುಚೋದ್ಯದ ಬೇಡಿಕೆ ಎಂದಿದ್ದು ಇವರ ದ್ವಿಮುಖ ನೀತಿಯನ್ನು ತೋರಿಸುತ್ತದೆ. ತುಳುವರ ನಾಡು ನುಡಿಯ ಹೋರಾಟವನ್ನು ಅವಮಾನಿಸುವ ಮೂಲಕ ಸಮಸ್ತ ತುಳುವರ ಭಾವನೆಗಳಿಗೆ ನೋವು ತಂದಿದ್ದಾರೆ. ತುಳು ಅಸ್ಮಿತೆಯ ವಿಚಾರಗಳನ್ನು ಯಾರೇ ಕುಚೋದ್ಯ ಮಾಡಿದರೂ ಅದನ್ನು ತುಳುವೆರೆ ಪಕ್ಷ ಖಂಡಿಸುತ್ತದೆ ಎಂದು ಪಕ್ಷದ ಅದ್ಯಕ್ಷರಾದ ಶೈಲೇಶ್ ಆರ್.ಜೆ. […]

ಶೋಭಾ ಕರಂದ್ಲಾಜೆಯ ಪ್ರಜಾಪ್ರಭುತ್ವದ ಸದಸ್ಯತ್ವದಿಂದ ರದ್ದು ಮಾಡಬೇಕು : ಐವನ್ ಡಿ ಸೋಜ

Thursday, May 20th, 2021
ivan

ಮಂಗಳೂರು : ದೇಶದ ಲೋಕಸಭೆಗೆ ಶೋಭಾ ಕರಂದ್ಲಾಜೆಯಂತಹ ಸಂಸದರು ಆಯ್ಕೆಯಾಗಿರುವುದು ಪ್ರಜಾಪ್ರಭುತ್ವದ ಒಂದು ದೊಡ್ಡ ದುರಂತ,  ಇಂತಹವರನ್ನು ಪ್ರಜಾಪ್ರಭುತ್ವದ ಸದಸ್ಯತ್ವದಿಂದ ರದ್ದು ಮಾಡಬೇಕು. ತಮ್ಮ ಸ್ವಾರ್ಥಕ್ಕಾಗಿ ಒಂದು ಸಮುದಾಯವನ್ನೇ ಬಲಿತೆಗೆದುಕೊಂಡು, ಸುಳ್ಳು ಹೇಳಿಕೆಗಳನ್ನು ನೀಡಿರುವುದು ಪ್ರಜಾಪ್ರಭುತ್ವದಲ್ಲಿ ಇದೊಂದು ಕಪ್ಪು ಚುಕ್ಕೆ  ಎಂದು ಐವನ್ ಡಿ ಸೋಜ ತಿಳಿಸಿದರು. ಶೋಭಾ ಕರಂದ್ಲಾಜೆ ಕ್ರೈಸ್ತ ಸಮಾಜಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಕಮಿಷನರಿಗೆ, ಉಪಪೋಲಿಸ್ ಆಯುಕ್ತ(ಡಿಸಿಪಿ)ರಾದ ಹರಿರಾಮ್ ಶಂಕರ್, ಇವರಿಗೆ ದೂರು  ನೀಡಲಾಯಿತು ಮತ್ತು ಕೂಡಲೇ ಕೇಸು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಡಿಸಿಪಿಯವರು […]

ಚರ್ಚ್‌ನಲ್ಲಿ ಕೋವಿಡ್‌ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ನಡೆಯುತ್ತಿದೆ : ಶೋಭಾ ಕರಂದ್ಲಾಜೆ

Wednesday, May 19th, 2021
shobha karandlaje

ಚಿಕ್ಕಮಗಳೂರು : ಮೂಡಿಗೆರೆಯ ಆಲ್ದೂರಿನ ಕೆಲ ಚರ್ಚುಗಳಲ್ಲಿ ಕೋವಿಡ್‌ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮತಾಂತರಗೊಂಡವರು ಚರ್ಚಿಗೆ ಹೋದಾಗ ಈ ರೀತಿ ಅಪಪ್ರಚಾರ ಮಾಡಲಾಗುತ್ತಿದೆ. ಯಾರು, ಏಕೆ ಹೀಗೆ ಹೇಳುತ್ತಿದ್ದಾರೆ ಎಂಬುದನ್ನು ಪತ್ತೆಹಚ್ಚಬೇಕು. ಚರ್ಚ್‌ನವರೇ ವ್ಯಾಕ್ಸಿನ್‌ ತೆಗೆದುಕೊಳ್ತಾರೆ. ಆದರೆ ಜನರಿಗೆ ತೆಗೆದುಕೊಳ್ಳಬೇಡಿ ಎಂದು ತಪ್ಪು ಸಂದೇಶ ನೀಡ್ತಾರೆ. ಇತ್ತೀಚೆಗೆ ಬಂದ ಪ್ರಾಟೆಸ್ಟೆಂಟ್, ಸೆಂಥಕೋಸ್ಟ್ ಚರ್ಚ್‌ಗಳಿಂದ ಅಪಪ್ರಚಾರ ನಡೆಯುತ್ತಿದೆ. ಅವರ ಬಗ್ಗೆ ತನಿಖೆ ಮಾಡಿ ಸೂಕ್ತ ಕ್ರಮ […]

ಈ ಬಾರಿಯ ಕೋವಿಡ್ ಕರ್ಫ್ಯೂ ನಿಂದ ಕೊರೋನ ನಿಯಂತ್ರಣ ಕಷ್ಟ ಸಾಧ್ಯ : ಶೋಭಾ ಕರಂದ್ಲಾಜೆ

Thursday, May 6th, 2021
shobha karandlaje

ಉಡುಪಿ : ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಕೊರೋನ ಸೋಂಕು ನಿಯಂತ್ರಣಕ್ಕಾಗಿ ಕಳೆದ ಬಾರಿಯಂತೆ ಗಂಭೀರವಾಗಿ ಕರ್ಪ್ಯೂ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ. ಉಡುಪಿ ಜಿಲ್ಲೆ ಯಲ್ಲಿ ಕೋವಿಡ್  ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ಬಾರಿಯ ಕೋವಿಡ್ ಕರ್ಫ್ಯೂ ನಿಂದ ನಿಯಂತ್ರಣ ಕಷ್ಟ ಸಾಧ್ಯ. ಕಳೆದ ಬಾರಿಯಂತೆ ಗಂಭೀರವಾಗಿ ಕರ್ಪ್ಯೂ ಮಾಡಬೇಕು. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು. ಉಳಿದಂತೆ ಪೂರ್ಣ ಲಾಕ್ಡೌನ್ ಮಾಡಬೇಕು. ಜನ ಈಗಿನಂತೆ ಓಡಾಡಿದರೆ ಕೋವಿಡ್ ನಿಯಂತ್ರಣ […]

ಡಿ.ಕೆ.ಶಿವಕುಮಾರ್ ಅವರ ಆಟ ಕರಾವಳಿಯಲ್ಲಿ ನಡೆಯುದಿಲ್ಲ: ಶೋಭಾ ಕರಂದ್ಲಾಜೆ

Monday, November 30th, 2020
Shobha Karandlaje

ಉಡುಪಿ : ಹಿಂದೂ ಧರ್ಮ ಬಿಜೆಪಿಯ ಆಸ್ತಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಉಡುಪಿ-ಚಿಕ್ಕಮಗಳೂರು ಸಂಸದೆ  ಶೋಭಾ ಕರಂದ್ಲಾಜೆ, “ಬಿಜೆಪಿ ಕರಾವಳಿ ಕ್ಷೇತ್ರಗಳನ್ನು ದತ್ತು ಪಡೆದಿರುವುದು ನಿಜ. ಕರಾವಳಿ ಜಿಲ್ಲೆಗಳು ನಮ್ಮವು. ಉಡುಪಿ ಜಿಲ್ಲೆಯ ಎಲ್ಲಾ ಐದು ಶಾಸಕರು ಬಿಜೆಪಿಯವರು. ನಾವು ಈ ಪ್ರದೇಶವನ್ನು ದತ್ತು ಪಡೆದಿದ್ದೇವೆ ಮತ್ತು ಅದನ್ನು ಅಭಿವೃದ್ಧಿಪಡಿಸುತ್ತೇವೆ. ಕರಾವಳಿ ಪ್ರದೇಶದ ಜನರು ತಮ್ಮ ವಿರೋಧಿ ನೀತಿಗಳಿಗಾಗಿ ಸೂಕ್ತವಾದ ಪಾಠವನ್ನು ಕಲಿಸಿದ್ದಾರೆ. ಡಿ.ಕೆ.ಶಿವಕುಮಾರ್ […]

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ನೀಡಬೇಕು : ಶೋಭಾ ಕರಂದ್ಲಾಜೆ

Saturday, October 10th, 2020
shobha

ಉಡುಪಿ :  ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ ಹರಣ ಶಿಕ್ಷೆ ವಿಧಿಸುವುದು ಸೂಕ್ತ, ಅತ್ಯಾಚಾರ ಪ್ರಕರಣಗಳಿಗೆ ಧರ್ಮ, ಜಾತಿಯ ಲೇಪನ ಹಚ್ಚುವುದು ಸರಿಯಲ್ಲ. ಇದು ಮಾನಸಿಕ ಸ್ಥಿತಿಯ ಮೇಲೆ ಅವಲಂಭಿತವಾಗಿರುತ್ತದೆ ಎಂದು ಉಡುಪಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಲವು ಕಡೆಗಳಲ್ಲಿ ಪದೇ ಪದೇ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ. ಇದೇ ಸಂದರ್ಭದಲ್ಲಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಬಗ್ಗೆಯೂ ಎಲ್ಲ ಕಡೆಗಳಲ್ಲಿ ಚರ್ಚೆಗಳು ನಡೆಯುತ್ತಿವೆ. ಅತ್ಯಾಚಾರಿಗೆ ಗಲ್ಲು ಶಿಕ್ಷೆಗಿಂತಲೂ ಪುರುಷತ್ವ […]