‘ಮಂಗಳೂರು ದಕ್ಷಿಣ’ದಲ್ಲಿ ಬಿಜೆಪಿ ಜಯಭೇರಿಗೆ ಹಾಗೂ ಕಾಂಗ್ರೆಸ್ ಸೋಲಿಗೆ ಕಾರಣ ಏನು ?

Thursday, May 17th, 2018
Vedavyas

ಮಂಗಳೂರು:  ಮಂಗಳೂರು ದಕ್ಷಿಣ ಕ್ಷೇತ್ರವನ್ನು ಮತ್ತೆ ಬಿಜೆಪಿ ವಶಪಡಿಸಿಕೊಂಡಿದೆ. ಈ ಹಿಂದೆ 2013ರ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ದ ತನ್ನ ಅಸಮಾಧಾನ ಹೊರಹಾಕಿ ಕಾಂಗ್ರೆಸ್ ಅಭ್ಯರ್ಥಿಯನ್ನುಗೆಲ್ಲಿಸಿದ್ದ ಮತದಾರ ಪ್ರಭು ಈ ಬಾರಿ ಮತ್ತೆ ಬಿಜೆಪಿಗೆ ಜೈ ಎಂದಿದ್ದಾನೆ. ಅಭಿವೃದ್ಧಿಯ ಜಪದೊಂದಿಗೆ ಮತ್ತೆ ಜನರ ಮುಂದೆ ಹೋಗಿದ್ದ ಕಾಂಗ್ರೆಸ್ ನ ಕೈ ಹಿಡಿಯಲು ಮತದಾರ ನಿರಾಕರಿಸಿದ್ದಾನೆ. ಇಲ್ಲಿ ಅತಿಯಾದ ಆತ್ಮ ವಿಶ್ವಾಸವೇ ಕಾಂಗ್ರೆಸಿಗೆ ಮುಳುವಾಯಿತೇ ಎಂದು ವಿಶ್ಲೇಷಿಸಲಾಗುತ್ತಿದೆ. ಅದಲ್ಲದೇ ನಮ್ಮ ಕಾರ್ಪೊರೇಟರ್ ಗಳೇ ಸೋಲಿಗೆ ಕಾರಣರಾದರು ಎನ್ನುವ ಅನುಮಾನಗಳು […]

ಮಹಿಳೆಯರ ಗೌರವ ರಕ್ಷಣೆ ನನ್ನ ಹೊಣೆ – ಶ್ರೀಕರ ಪ್ರಭು

Monday, May 7th, 2018
srikar-prabhu

ಮಂಗಳೂರು: ಮಂಗಳೂರಿನ ಮಹಿಳೆಯರ ಗೌರವ ರಕ್ಷಣೆ ನನ್ನ ಪ್ರಥಮ ಆದ್ಯತೆ ಮತ್ತು ಇದನ್ನು ನೂರಕ್ಕೆ ನೂರ್ರರಷ್ಟು ಜವಾಬ್ದಾರಿಯುತವಾಗಿ ನಾನು ಮುಂದೆ ಶಾಸಕನಾಗಿ ನಿಭಾಯಿಸಲಿದ್ದೇನೆ ದಯವಿಟ್ಟು ನನ್ನನ್ನು ಆರಿಸಿಯೆಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಶ್ರೀಕರ್ ಪ್ರಭು ಅವರು ನಗರದ ಸಿ ವಿ ನಾಯಕ್ ಹಾಲ್ ಸಭಾಂಗಣದಲ್ಲಿ ಕಿಕ್ಕಿರಿದು ತುಂಬಿದ ಮಹಿಳಾ ಮತದಾರರ ಸಮಾವೇಶದಲ್ಲಿ ಘೋಷಿಸಿದರು. ಹಣಬಲದಿಂದ ಜನ ಸೇವೆ ಮಾಡದೇ ಚುನಾವಣೆ ಗೆಲ್ಲುವುದು ಅಸಾಧ್ಯ, ರಾಷ್ಟ್ರೀಯ ರಾಜಕೀಯ ಪಕ್ಷಗಳಲ್ಲಿ ಖಾಲಿ ಪೋಲಿಗಳು ವಿಜೃಂಬಿಸುತಿದ್ದರೆ ಇದೊಂದು […]

ಕಾಂಗ್ರೆಸ್, ಬಿಜೆಪಿಯಿಂದ ಕಾರ್ಯಕರ್ತರ ಒಪ್ಪಿಗೆ ಇಲ್ಲದೆ ಅಭ್ಯರ್ಥಿಗಳ ಆಯ್ಕೆ – ಶ್ರೀಕರ ಪ್ರಭು

Saturday, May 5th, 2018
sreekar-prabhu

ಮಂಗಳೂರು  : ಈ ಬಾರಿಯ ವಿಧಾನ ಸಭಾ ಚುನಾವಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ನಿಷ್ಠಾವಂತ ಕಾರ್ಯಕರ್ತರ ಅಭಿಪ್ರಾಯ ಪಡೆಯದೇ ಅಭ್ಯರ್ಥಿಗಳ ಆಯ್ಕೆ ಮಾಡಿರುವುದು ತನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಶ್ರೀಕರ ಪ್ರಭು ಅವರು ತಮ್ಮ ಚುನಾವಣಾ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ತಿಳಿಸಿದರು. ಇದರಿಂದ ಕೆಲವು ನಾಯಕರುಗಳ ಸ್ವಾರ್ಥಕ್ಕೆ ಕಾರ್ಯಕರ್ತರನ್ನು ಕಡೆಗಣಿಸಿರುವುದರಿಂದ ಆ ಪಕ್ಷಗಳಲ್ಲಿ ಅಸಮಾಧಾನ ಶುರುವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ನುಡಿದರು. ಈಗ […]

ಇಂದು ಶ್ರೀಕರ ಪ್ರಭು ಅಭಿಮಾನಿ ಬಳಗದ ಮಹಿಳಾ ಮತದಾರರ ಸಮಾವೇಶ

Saturday, May 5th, 2018
shrikar-prabhu

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಅವರ ಅಭಿಮಾನಿ ಬಳಗದ ಮಹಿಳಾ ಮತದಾರರ ಬ್ರಹತ್ ಸಮಾವೇಶ ಇಂದು (06-05-2018) ಆದಿತ್ಯವಾರ ಸಂಜೆ 5:30 ಇಂದ 6:45ರ ತನಕ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಸಿ. ವಿ. ನಾಯಕ್ ಹಾಲ್ ನಲ್ಲಿ ಜರಗಲಿದೆ. ಈ ಸಮಾವೇಶದಲ್ಲಿ ಬಾರಿ ಸಂಖ್ಯೆಯ ಮಹಿಳಾ ಮತದಾರರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದು, ಶ್ರೀಕರ್ ಪ್ರಭು ಅವರು ಅಭಿಮಾನಿಗಳನ್ನು ಉದ್ದೇಶಿಸಿ ತಮ್ಮ ಚುನಾವಣಾ ಪ್ರಚಾರ ಬಾಷಣ ಮಾಡಲಿದ್ದಾರೆಂದು ಶ್ರೀಕರ ಪ್ರಭು ಅಭಿಮಾನಿ […]

ಶ್ರೀಕರ ಪ್ರಭು ಅವರಿಗೆ ಗೆಲ್ಲುವ ಸಾಧ್ಯತೆಯನ್ನುಇಮ್ಮಡಿಗೊಳಿಸಿದ ಮತದಾರ

Friday, May 4th, 2018
Srikara Prabhu

ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭುರವರು ಇಂದು ನಗರದ ಲೇಡಿ ಹಿಲ್, ಉರ್ವಾ ಮಾರ್ಕೆಟ್, ಉರ್ವಾ ಸ್ಟೋರ್, ಕೊಟ್ಟಾರ ಪರಿಸರದಲ್ಲಿ ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ನಾಗರೀಕ ಬಂದುಗಳಲ್ಲಿ ಪಾದಯಾತ್ರೆಯ ಮೂಲಕ ತಮ್ಮ ಚುನಾವಣಾ ಚಿಹ್ನೆ ‘ಆಟೋ ರಿಕ್ಷಾ’ ಮಾದರಿ ಪ್ರದರ್ಶಿಸಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮತದಾರ ಬಾಂದವರಿಂದ ಶ್ರೀಕರ ಪ್ರಭು ಅವರ ಬಗ್ಗೆ ಬಾರಿ ಒಲವು ವ್ಯಕ್ತವಾಗಿದ್ದು, ಇದು ಅವರು ಮುಂಬರುವ ಚುನಾವಣೆಯನ್ನು ಗೆಲ್ಲುವ ಸಾಧ್ಯತೆಯನ್ನು ಇಮ್ಮಡಿಗೊಳಿಸಿದೆ. ಈ […]

ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ರೋಡ್ ಶೋ ಮೂಲಕ ಅದ್ದೂರಿ ಪ್ರಚಾರ..!

Friday, May 4th, 2018
shrikar-prabhu

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿರುವಂತೆಯೇ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಕೂಡ ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಮನೆ ಮನೆ ಭೇಟಿಯ ಬಳಿಕ ಐದನೆ ಹಂತದಲ್ಲಿ ರೋಡ್ ಶೋ ನಡೆಸುವ ಮೂಲಕ ತಮ್ಮ ಪ್ರಬಲ ಜನಬೆಂಬಲವನ್ನು ಸಾಬೀತುಪಡಿಸಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಬಾಹುಳ್ಯದ ರಥಬೀದಿಯಲ್ಲಿ ತಮ್ಮ ಬೃಹತ್ ಪಾದಯಾತ್ರೆಯ ಅಭಿಯಾನಕ್ಕೆ ಚಾಲನೆ ನೀಡಿದ ಶ್ರೀಕರ ಪ್ರಭು ಮತದಾರರನ್ನು ಸೆಳೆಯುವ ಎಲ್ಲ ಲಕ್ಷಣಗಳನ್ನು ಪ್ರದರ್ಶಿಸಿದ್ದಾರೆ. ತಮ್ಮ […]

ರಥಬೀದಿಯಲ್ಲಿ ಶ್ರೀಕರ ಪ್ರಭು ರೋಡ್ ಶೋ : ಯುವಕರ ರಣೋತ್ಸಾಹ

Thursday, May 3rd, 2018
srikara prabhu

ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿರುವಂತೆಯೇ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ಕೂಡ ತಮ್ಮ ಪ್ರಚಾರವನ್ನು ತೀವ್ರಗೊಳಿಸಿದ್ದಾರೆ. ಮನೆ ಮನೆ ಭೇಟಿಯ ಬಳಿಕ ಐದನೇ ಹಂತದಲ್ಲಿ ರೋಡ್ ಶೋ ನಡೆಸುವ ಮೂಲಕ ತಮ್ಮ ಪ್ರಬಲ ಜನಬೆಂಬಲವನ್ನು ಸಾಬೀತುಪಡಿಸಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಬಾಹುಳ್ಯದ ರಥಬೀದಿಯಲ್ಲಿ ತಮ್ಮ ಬೃಹತ್ ಪಾದಯಾತ್ರೆಯ ಅಭಿಯಾನಕ್ಕೆ ಚಾಲನೆ ನೀಡಿದ ಶ್ರೀಕರ ಪ್ರಭು ಮತದಾರರನ್ನು ಸೆಳೆಯುವ ಎಲ್ಲ ಲಕ್ಷಣಗಳನ್ನು ಪ್ರದರ್ಶಿಸಿದ್ದಾರೆ. […]

ಸತತ ಜನ ಸೇವೆಯಿಂದ ಮತದಾರರ ಒಲವು: ಶ್ರೀಕರ ಪ್ರಭು ವಿಶ್ವಾಸ

Wednesday, May 2nd, 2018
shrikar-prabhu

ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು ತಮ್ಮ ಪ್ರಚಾರ ಕಾರ್ಯವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ನಗರದ ವಿವಿಧೆಡೆಗಳಲ್ಲಿ ಪ್ರಚಾರ ನಡೆಸಿದ ಅವರು ಮತದಾರರನ್ನು ನೇರವಾಗಿ ಭೇಟಿ ಮಾಡಿ ಮತಯಾಚನೆ ನಡೆಸಿದರು. ಕಳೆದ 33 ವರ್ಷಗಳಿಂದ ಮಂಗಳೂರಿನಲ್ಲಿ ಜನ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡಿರುವ ನನ್ನ ಕೆಲಸಕ್ಕೆ ಜನ ಮೆಚ್ಚುಗೆ ಬಾರಿ ವ್ಯಕ್ತವಾಗಿದೆ ಎಂದು ಶ್ರೀಕರ ಪ್ರಭು ಹೇಳಿದರು. ಅನೇಕ ವರ್ಷಗಳಿಂದ ಯುವ ಜನರ, ಮಹಿಳೆಯರ ವಯೋವೃದ್ಧರ ನಾನಾ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸರ್ಕಾರೀ ಮತ್ತು ಖಾಸಗಿ […]

ಬಿಜೆಪಿಯೊಳಗಿನ ಗೊಂದಲ ತನ್ನ ಗೆಲುವಿಗೆ ಪೂರಕ: ಶ್ರೀಕರ ಪ್ರಭು

Thursday, April 26th, 2018
shreekar-prabhu

ಮಂಗಳೂರು: ಬಿಜೆಪಿಯೊಳಗಿನ ಗೊಂದಲ ತನ್ನ ಗೆಲುವಿಗೆ ಪೂರಕವಾಗಲಿದೆ ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀಕರ ಪ್ರಭು ಹೇಳಿದ್ದಾರೆ. ನಗರದಲ್ಲಿರುವ ತನ್ನ ಚುನಾವಣಾ ಪ್ರಚಾರ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಇಲ್ಲಿನ ಅಭ್ಯರ್ಥಿಗಳಿಬ್ಬರೂ ಸರಿ ಇಲ್ಲ. ಹಾಲಿ ಶಾಸಕ ಜೆ.ಆರ್.ಲೋಬೊ ಅವರ ಮೇಲೆ ಕುಡ್ಸೆಂಪ್ ಹಗರಣದ ಆರೋಪ ಇದೆ. ಮೊದಲ ಶಾಸಕತ್ವದ ಅವಧಿಯಲ್ಲಿ ಅವರೊಬ್ಬ ಭ್ರಷ್ಟಾಚಾರಿ ಎಂಬುದು ಸಾಬೀತಾಗಿದೆ. ಇದೇವೇಳೆ ಇಲ್ಲಿನ ಬಿಜೆಪಿ ಅಭ್ಯರ್ಥಿ […]

ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಉಪಚುನಾವಣೆಯ ಗೆಲುವಿಗೆ ವಿಜಯೋತ್ಸವ

Friday, May 13th, 2011
ದ.ಕ ಜಿಲ್ಲಾ ಬಿಜೆಪಿ ವಿಜಯೋತ್ಸವ

ಮಂಗಳೂರು: ದ.ಕ ಜಿಲ್ಲಾ ಬಿಜೆಪಿ ಇಂದು ಬೆಳಿಗ್ಗೆ ಚನ್ನಪಟ್ಟಣ, ಜಗಳೂರು, ಬಂಗಾರಪೇಟೆಯಲ್ಲಿ ಬಿ.ಜೆ.ಪಿ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿಜಯೋತ್ಸವ ಆಚರಿಸಿತು. ಜಿಲ್ಲಾ ಬಿಜೆಪಿಯ ನಗರಾಧ್ಯಕ್ಷ ಶ್ರೀಕರ ಪ್ರಭು ಕಾರ್ಯಕರ್ತರಿಗೆ ಹಾಗೂ ಮನಪಾ ಮೇಯರ್ ಪ್ರವೀಣ್ ಅಂಚನ್ರಿಗೆ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಬಳಿಕ ಕಾರ್ಯಕರ್ತರು ಬಿಜೆಪಿ ಪತಾಕೆಗಳನ್ನು ಹಿಡಿದು ನವಭಾರತ ಸರ್ಕಲ್ ವರೆಗೆ ವಿಜಯೋತ್ಸವ ಜಾಥಾ ನಡೆಸಿದರು. ವಿಜಯೋತ್ಸವದಲ್ಲಿ ಶ್ರೀಕರ ಪ್ರಭು ಮಂಗಳೂರು, ಮೇಯರ್ ಪ್ರವೀಣ್ ಅಂಚನ್, ಫಿಶರೀಶ್ ಫೆಡರೇಶನ್ನಿನ […]