ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆ ಪ್ರಾರಂಭ

Thursday, August 22nd, 2019
Udupi

ಉಡುಪಿ : ಆಗಸ್ಟ್‌ 23ರಂದು ದೇಶದೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ. ಸದ್ಯ ಕೃಷ್ಣನೂರು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಸಿದ್ಧತೆ ಭರದಿಂದ ಸಾಗಿದ್ದು, ಅತ್ಯಂತ ವೈಭವದಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ರಾಜ್ಯದ ವಿವಿಧ ಭಾಗದಿಂದ ಶ್ರೀಕೃಷ್ಣಾಷ್ಟಮಿ ಉತ್ಸವಕ್ಕೆ ಲಕ್ಷಾಂತರ ಜನ ಉಡುಪಿಗೆ ಆಗಮಿಸುತ್ತಾರೆ. ಈಗಾಗಲೇ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆ ಪ್ರಾರಂಭಗೊಂಡಿದ್ದು, ಭಕ್ತರಿಗೆ ಪ್ರಸಾದ ರೂಪದಲ್ಲಿ ನೀಡಲಾಗುವ ಲಕ್ಷಾಂತರ ಉಂಡೆ-ಚಕ್ಕುಲಿ ತಯಾರಿ ಆ.20ರಿಂದಲೇ ಪ್ರಾರಂಭವಾಗಿದೆ. 23ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು 24ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಆ.23ರಂದು ರಾತ್ರಿ […]