ಕೊರೊನಾ ಶಮನಾರ್ಥ ನಾಳೆ ಶ್ರೀ ಕ್ಷೇತ್ರ ಕದ್ರಿಯಲ್ಲಿ ಧನ್ವಂತರಿ ಜಪ ಪಾರಾಯಣ ಹಾಗೂ ಸಾಮೂಹಿಕ ಪ್ರಾರ್ಥನೆ

Saturday, March 14th, 2020
kadri

ಮಂಗಳೂರು : ವಿಶ್ವದಾದ್ಯಾಂತ ವ್ಯಾಪಿಸಿರುವ ಮಾರಕ ಕಾಯಿಲೆ ಕೊರೊನಾದ ಶಮನಕ್ಕಾಗಿ ನಾಳೆ ತಾ.15. ಮಾರ್ಚ್, ರವಿವಾರ ಬೆಳಿಗೆ 6 ರಿಂದ ಕದ್ರಿ ಶ್ರೀ ಮಂಜುನಾಥ ದೇವಳದ ಪ್ರಾಂಗಣದಲ್ಲಿ ಧನ್ವಂತರಿ ಪಾರಾಯಣ, ರುದ್ರ ಪಠಣ, ವಿಷ್ಣು ಸಹಸ್ರನಾಮ ಹಾಗೂ 7.15ಕ್ಕೆಸಾಮೂಹಿಕ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ. ಧಾರ್ಮಿಕ, ಸಾಮಾಜಿಕ ಪ್ರಮುಖರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದ್ದು ಸಾಮೂಹಿಕ ಪ್ರಾರ್ಥನೆಯಲ್ಲಿ ಸರ್ವರೂ ಸಹಭಾಗಿಗಳಾಗುವಂತೆ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.    

ಶ್ರೀ ಕ್ಷೇತ್ರ ಕದ್ರಿಗೆ ಪಲಿಮಾರು ಮಠಾಧೀಶರ ಭೇಟಿ

Wednesday, January 22nd, 2020
palimaru

ಮಂಗಳೂರು : ಪರ್ಯಾಯ ಪೂರೈಸಿ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿಯವರು ಇಂದು ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಂದರ್ಶನ ಗೈದರು. ಪೂಜ್ಯ ಸ್ವಾಮೀಜಿಯವರನ್ನು ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ. ಜೆ. ಶೆಟ್ಟಿಯವರು ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು. ಈ ಸಂದರ್ಭ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸ್ಥಳೀಯ ಕಾರ್ಪೋರೇಟರ್‌ಗಳಾದ ಶ್ರೀಮತಿ ಶಕಿಲಾ ಕಾವ ಹಾಗೂ ಮನೋಹರ ಶೆಟ್ಟಿ, ಅಲ್ಲದೆ ದೇವಳದ ಕಾರ್ಯನಿರ್ವಹಣಾಧಿಕಾರಿ ಶ್ರಿಮತಿ ಜಯಮ್ಮ ಪಿ., […]

ಸೂರ್ಯಗ್ರಹಣ : ಶ್ರೀ ಕ್ಷೇತ್ರ ಕದ್ರಿಯಲ್ಲಿ ಲೋಕಕಲ್ಯಾಣಾರ್ಥ ಮಂತ್ರ ಪಠನ; ಭಜನೆ

Friday, December 27th, 2019
Kadri

ಮಂಗಳೂರು : ಡಿಸೆಂಬರ್ 26 ರಂದು ಕದ್ರಿ ಶ್ರೀ ಮಂಜುನಾಥ ದೇವಳದಲ್ಲಿ ಕಲ್ಕೂರ ಪ್ರತಿಷ್ಠಾನದ ಆಯೋಜಕತ್ವದೊಂದಿಗೆ ಕಂಕಣ ಸೂರ್ಯಗ್ರಹಣದ ಪ್ರಯುಕ್ತ, ಲೋಕಕಲ್ಯಾಣಾರ್ಥ ಸುಭಿಕ್ಷೆಗಾಗಿ ಸಾಮೂಹಿಕ ರುದ್ರಪಾರಾಯಣ, ವಿಷ್ಣು ಸಹಸ್ರನಾಮ ಪಠನ, ಹಾಗು ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ನೇತೃತ್ವದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ವೇ.ಮೂ.ಡಾ.ಪ್ರಭಾಕರ ಅಡಿಗರ ಮಾರ್ಗದರ್ಶನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರಾಘವೇಂದ್ರ ಅಡಿಗ, ವಿದ್ವಾನ್ ರವಿ ಅಡಿಗ, ಕೃಷ್ಣ ಅಡಿಗ, ಗಣೇಶ ಹೆಬ್ಬಾರ್ ಕದ್ರಿ, ಡಾ.ಪ್ರಕಾಶ್‌ಕೃಷ್ಣ, ಸುಧಾಕರ ರಾವ್ ಪೇಜಾವರ, ಪ್ರಭಾಕರ […]

ಶ್ರೀ ಕ್ಷೇತ್ರ ಕದ್ರಿಯಲ್ಲಿ ಮಳೆ, ಬೆಳೆಗಾಗಿ ಸೀಯಳಾಭಿಷೇಕ

Tuesday, May 14th, 2019
Shiyalabhisheka

ಮಂಗಳೂರು  : ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಕಲ್ಕೂರ ಪ್ರತಿಷ್ಠಾನ, ಹತ್ತು ಸಮಸ್ತರು, ಸಾರ್ವಜನಿಕ ಸಂಘಸಂಸ್ಥೆಗಳ ಸಹಯೋಗದಲ್ಲಿ ಮೇ 14, ಮಂಗಳವಾರದಂದು ಬೆಳಿಗ್ಗೆ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎ.ಜೆ. ಶೆಟ್ಟಿಯವರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥ, ಸುಭಿಕ್ಷೆ ಮಳೆ, ಬೆಳೆ, ಫಲಪ್ರಾಪ್ತಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸೀಯಾಳಾಭಿಷೇಕ ನಡೆಸಲಾಯಿತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷಎಸ್. ಪ್ರದೀಪ ಕುಮಾರ ಕಲ್ಕೂರ ಉಪಸ್ಥಿತರಿದ್ದರು. ಊರಹತ್ತು ಸಮಸ್ತರು, ಜನ ಪ್ರತಿನಿಧಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿಕಲ್ಕೂರ ಪ್ರತಿಷ್ಠಾನವು ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭ […]

ಶ್ರೀ ಕ್ಷೇತ್ರ ಕದ್ರಿ ರಾಜಾಂಗಣದಲ್ಲಿ ‘ಅತಿಕಾಯ ಕಾಳಗ’ ತಾಳ ಮದ್ದಳೆ

Saturday, October 13th, 2018
kadri-temple

ಮಂಗಳೂರು: ಕಲ್ಕೂರ ಪ್ರತಿಷ್ಠಾನದ ವತಿಯಿಂದ ಶ್ರೀ ಕ್ಷೇತ್ರ ಕದ್ರಿ ರಾಜಾಂಗಣದಲ್ಲಿ ‘ಸಂಯಮಂ’ ಬಳಗದವರಿಂದ ’ಅತಿಕಾಯ ಕಾಳಗ’ ತಾಳ ಮದ್ದಳೆ ಜರಗಿತು. ಈ ಸಂದರ್ಭ ಸಂಯಮಂ ತಂಡದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ ಅವರನ್ನು ನವರಾತ್ರಿಯ ಸಂಭ್ರಮದ ನಿಮಿತ್ತ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸನ್ಮಾನಿಸಿದರು. ಈ ಸಂದರ್ಭ ಜನಾರ್ದನ ಹಂದೆ, ಕದಳಿ ಕಲಾ ಕೇಂದ್ರದ ಪ್ರಮುಖ ರಮೇಶ್ ಭಟ್‌ ಕದ್ರಿ, ಸಂಘಟಕ ಕೇಶವ ಹೆಗಡೆ, ಕದ್ರಿ ದೇವಳದ ವ್ಯವಸ್ಥಾಪನ ಸಮಿತಿಯ ಸದಸ್ಯ ಸುರೇಶ್‌ಕುಮಾರ್, […]

ಸೆಪ್ಟೆಂಬರ್ 02 ರಂದು ಶ್ರೀ ಕ್ಷೇತ್ರ ಕದ್ರಿಯಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ಧೆ..!

Saturday, July 28th, 2018
kalkur

ಮಂಗಳೂರು: ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಆಶ್ರಯದಲ್ಲಿ ಸೆಪ್ಟೆಂಬರ್ 02 ನೇ ಭಾನುವಾರ ವರ್ಷಂಪ್ರತಿಯಂತೆ ಶ್ರೀ ಕ್ಷೇತ್ರ ಕದ್ರಿಯಲ್ಲಿ ರಾಷ್ಟ್ರೀಯ ಮ್ಕಕಳ ಹಬ್ಬ ಶ್ರೀಕೃಷ್ಣ ವೇಷ ಸ್ಪರ್ಧೆಯು ಜರಗಲಿದೆ. ಬೆಳಿಗ್ಗೆ 9 ರಿಂದ ಆರಂಭಗೊಂಡು ರಾತ್ರಿ 9 ರವರೆಗೆ ನಡೆಯಲಿರುವ ಈ ಬೃಹತ್ ಸ್ಪರ್ಧಾ ಕಾರ್ಯಕ್ರಮದಲ್ಲಿ ಈ ಬಾರಿಒಟ್ಟು 29 ವಿಭಾಗಗಳಿದ್ದು ಎಲ್ಲವೂಏಕಕಾಲದಲ್ಲಿ ನಡೆಯಲಿವೆ. ಒಂದು ವರ್ಷದೊಳಗಿನ ಕಂದಮ್ಮಗಳಿಂದ ತೊಡಗಿ ೭ನೇ ತರಗತಿವರೆಗಿನ ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಪಾರಂಪರಿಕ/ ಆಧುನಿಕ ಗೀತೆಗಳ ಪ್ರಸ್ತುತಿ ’ಗಾನವೈಭವ’ ಸ್ಪರ್ಧೆಯು ಮಕ್ಕಳಿಗಾಗಿ ಈ ಬಾರಿ ೪ ವಿಭಾಗಗಳಲ್ಲಿ ಏರ್ಪಡಿಸಲಾಗಿದೆ. […]

ಕರಾವಳಿಯ ಶಿವನ ದೇವಸ್ಥಾನಗಳಲ್ಲಿ ಶಿವರಾಧನೆ

Wednesday, February 14th, 2018
shivrathri

ಮಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಕರಾವಳಿಯ ಶಿವನ ದೇವಸ್ಥಾನಗಳಲ್ಲಿ ಶಿವರಾಧನೆ ಶ್ರದ್ಧಾ-ಭಕ್ತಿಯಿಂದ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಜಾತ್ರೆ, ರುದ್ರಾಭಿಷೇಕ, ವಿಶೇಷ ಪೂಜೆಯ ಸಂಭ್ರಮ ನಡೆಯುತ್ತಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವರಾತ್ರಿ ಮಹೋತ್ಸವ, ಬೆಳ್ಳಿ ರಥೋತ್ಸವ, ಮಹಾರುದ್ರಾಭಿಷೇಕ, ವಿಷ್ಣು ಬಲಿ ಉತ್ಸವ, ರಥೋತ್ಸವ, ಶಿವಬಲಿ, ಜಾಗರಣೆ ಬಲಿ, ಕಟ್ಟೆಪೂಜೆ, ಕೆರೆದೀಪ, ಮಂಟಪ ಪೂಜೆ ನೆರವೇರಿದೆ. ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ವಿಶೇಷವಾಗಿ ರುದ್ರಾಭಿಷೇಕ, ಶಿವಪೂಜೆ, ರಾತ್ರಿ ರಂಗಪೂಜೆ, ಬಂಡಿ ಉತ್ಸವ, ಬೆಳ್ಳಿ ರಥೋತ್ಸವ, ಇದೇ […]