ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶ್ರೀಕರ್ ಪ್ರಭು

Saturday, April 28th, 2018
srikar-prabhu

ಬೆಳ್ತಂಗಡಿ: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾಗಿರುವ ಯುವ ಮುಂದಾಳು, ಸಾಮಾಜಿಕ ನಾಯಕ ಆರ್ ಶ್ರೀಕರ್ ಪ್ರಭು ಅವರು ಇಂದು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಗ್ರಾಮದ ಶ್ರೀರಾಮ ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಕರ್ ಪ್ರಭು ಅಭಿಮಾನಿ ಬಳಗದ ಮುಖಂಡರಾದ ಅವಿನಾಶ್ ಶೆಟ್ಟಿ, ರಘುನಾಥ್ ಮತ್ತಿತರು ಉಪಸ್ಥಿತರಿದ್ದರು.