ಸಂಪುಟ ವಿಸ್ತರಣೆ : ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನೂತನ ಹತ್ತು ಮಂದಿ ಶಾಸಕರು

Thursday, February 6th, 2020
Raj-Bhawan

ಬೆಂಗಳೂರು : ಉಪಚುನಾವಣೆಯಲ್ಲಿ ಗೆದ್ದ ಹತ್ತು ಮಂದಿ ಶಾಸಕರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲ ನೂತನ ಸಚಿವರಿಗೆ ಪ್ರಮಾಣ ವಚನ ಭೋಧಿಸಿದರು. ಗೋಕಾಕ್ ಶಾಸಕ ರಮೇಶ್‌ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್‌ ಸಿಂಗ್‌, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್‌, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌, ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. […]

ಬೆಂಗಳೂರು : ಜನವರಿ 31ರಂದು ಬಿ.ಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆ ಸಾಧ್ಯತೆ

Tuesday, January 28th, 2020
BSY

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆಯದ್ದೇ ತಲೆನೋವಾಗಿದೆ. ವಿವಿಧ ಕಾರಣಗಳಿಂದ ವಿಳಂಬವಾಗುತ್ತಲೇ ಇರುವ ಸಂಪುಟ ವಿಸ್ತರಣೆಯ ದಿನವನ್ನು ಯಡಿಯೂರಪ್ಪ ಜ. 29ಕ್ಕೆ ಫಿಕ್ಸ್ ಮಾಡಿದ್ದರು. ಈಗ ಅದು ಜ. 31ಕ್ಕೆ ಹೋಗಿದೆ. ಶುಕ್ರವಾರ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ. ಆದರೆ, ಹೈಕಮಾಂಡ್ ಒಪ್ಪಿಗೆ ಮೇಲೆ ಎಲ್ಲವೂ ನಿಂತಿದೆ. ಸಂಪುಟ ವಿಸ್ತರಣೆಗೆ ಸಂಭಾವ್ಯ ಸಚಿವರ ಪಟ್ಟಿಯನ್ನು ಯಡಿಯೂರಪ್ಪ ಈಗಾಗಲೇ ಬಿ.ಎಲ್. ಸಂತೋಷ್ ಮೂಲಕ ಹೈಕಮಾಂಡ್ಗೆ ತಲುಪಿಸಿದ್ಧಾರೆ. ಈ ಪಟ್ಟಿಗೆ ಹೈಕಮಾಂಡ್ ಕೂಡ ಒಪ್ಪಿತ್ತೆಂಬ […]

ಜನವರಿ 18ರಂದು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಷಾ ಆಗಮನ

Thursday, January 16th, 2020
amith

ಬೆಂಗಳೂರು : ಜನವರಿ 18ರ ಶನಿವಾರ ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ಗರಿಗೆದರಿದೆ. ಅಮಿತ್ ಷಾ ಭೇಟಿಗೆ ಉತ್ಸುಕರಾಗಿರೋ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಷಾ ಮುಂದೆ ಚರ್ಚಿಸಲು ಸಿದ್ಧತೆ ನಡೆಸಿದ್ದಾರೆ. ಹಾಗಾಗಿ ಸಚಿವ ಸ್ಥಾನಾಕಾಂಕ್ಷಿಗಳಲ್ಲಿ ಮತ್ತೆ ಆಸೆ ಚಿಗುರಿದೆ. ಅಮಿತ್ ಷಾ ಭೇಟಿ ವೇಳೆ ಕೆಲವು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಲು ಮುಖ್ಯಮಂತ್ರಿ ಅವರು ಸಿದ್ಧತೆ ನಡೆಸಿದ್ದಾರೆ. ಅದರಲ್ಲಿನ ಪ್ರಮುಖ ವಿಷಯಗಳ […]

ಸಿಎಂ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ಸದ್ಯದಲ್ಲೇ ವಿಸ್ತರಣೆ

Tuesday, December 24th, 2019
BSY

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಸಿಎಂ ಯಡಿಯೂರಪ್ಪಗೆ ನೂತನ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಹಾಗಾಗಿ ಮುಂದಿನ ವರ್ಷ ಜನವರಿ ಮೊದಲ ವಾರದಲ್ಲೇ ಸಚಿವ ಸಂಪುಟ ಮಾಡುವ ನಿರ್ಧಾರ ಸಿಎಂ ಬಿ.ಎಸ್ ಯಡಿಯೂರಪ್ಪ ಕೈಗೊಂಡಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸುವ ಸಲುವಾಗಿ ವಾರಾಂತ್ಯಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಕೇಂದ್ರ ಗೃಹ ಸಚಿವ […]