ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟನೆ

Wednesday, March 13th, 2024
Udupi-CM

ಉಡುಪಿ : ದೇಶದ ಸಂವಿಧಾನವನ್ನು ಬದಲಿಸುವ ಹುನ್ನಾರವನ್ನು ಬಿಜೆಪಿ ನಡೆಸಿದೆ. ಇದು ಬಿಜೆಪಿಯ ಹಿಡನ್ ಅಜೆಂಡಾ ಆಗಿದ್ದು, ದೇಶದ ಜನ ಇದನ್ನು ವಿಫಲಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬುಧವಾರ ಮಹಾತ್ಮ ಗಾಂಧಿ ಮೈದಾನದಲ್ಲಿ ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು. ಸಂವಿಧಾನವನ್ನು ಬದಲಿಸುವುದಕ್ಕಾಗಿಯೇ ಅಧಿಕಾರಕ್ಕೆ ಬಂದಿರುವುದಾಗಿ ಉತ್ತರ ಕನ್ನಡ ಸಂಸದ ಅನಂತಕುಮಾರ್ […]

ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Sunday, September 10th, 2023
ssf

ಬೆಂಗಳೂರು : ದೇಶದ ಐಕ್ಯತೆ, ಸಂವಿಧಾನ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ಎಸ್ ಎಸ್ ಎಫ್ ಕೆಲಸ ಮಾಡಬೇಕು. ಇದಕ್ಕಾಗಿ ತಮ್ಮ ಶಕ್ತಿ, ಸಂಘಟನೆಯನ್ನು ಮುಡಿಪಾಗಿ ಇಟ್ಟು ಅಭಿವೃದ್ಧಿ ದಿಕ್ಕಿನಲ್ಲಿ ದೇಶವನ್ನು ವೇಗವಾಗಿ ಮುನ್ನಡೆಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅರಮನೆ ಮೈದಾನದಲ್ಲಿ ನಡೆದ ಸುನ್ನಿ ಸ್ಟೂಡೆಂಟ್ ಫೆಡರೇಷನ್ (SSF) ಗೋಲ್ಡನ್ 50 ಸಮಾವೇಷದಲ್ಲಿ ಮಾತನಾಡಿದರು. ಸಾಮರಸ್ಯ ಭಾರತದ ಮಣ್ಣಿನ ಗುಣ. 50 ವರ್ಷಗಳಿಂದ ದೇಶದ ಸೌಹಾರ್ದ ಮತ್ತು ಸಾಮರಸ್ಯದ ಸಂಸ್ಕೃತಿ […]

ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ : ಸಿಎಂ ಬಸವರಾಜ ಬೊಮ್ಮಾಯಿ

Friday, November 26th, 2021
Constitution Day

ದಾವಣಗೆರೆ : ಭಾರತವನ್ನು ಒಗ್ಗೂಡಿಸುವಲ್ಲಿ ಸಂವಿಧಾನ ಮಹತ್ವದ ಪಾತ್ರ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ದಿನದ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಓದಿದ ನಂತರ ಮಾತನಾಡಿದರು. ಈ ದಿನ ಸಂವಿಧಾನ ವನ್ನು ಅಂಗೀಕರಿಸಿದ ಮಹತ್ವದ ದಿನ. ಭಾರತದ ಸಂವಿಧಾನ ಇಶ್ವದ ಅತ್ಯಂತ ಶ್ರೇಷ್ಠ ಸಂವಿಧಾನ. ಅಭಿವ್ಯಕ್ತಿ ಸ್ವಾತಂತ್ರ್ಯ, ವಾಕ್ ಸ್ವಾತಂತ್ರ್ಯ, ಸಾಮಾಜಿ, ಆರ್ಥಿಕ, ಧಾರ್ಮಿಕ ಚಟುವಟಿಕೆಗಳಿಗೆ ಸ್ವಾತಂತ್ರ್ಯ ಜೊತೆಗೆ ಸಮಾನತೆ, ಭ್ರಾತೃತ್ವ, ಪರಸ್ಪರ ಪ್ರೀತಿ ವಿಶ್ವಾಸ, […]

“ಭಾರತದ ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ”: ವಿಚಾರ ಕಲರವ ಉಪನ್ಯಾಸ ಮಾಲಿಕೆ

Thursday, June 3rd, 2021
Nagamohan

ಬೆಂಗಳೂರು: ರಾಷ್ಟ್ರೀಯ ಸೇವಾ ಯೋಜನೆ ಕೋಶ, ಬೆಂಗಳೂರು ವಿಶ್ವವಿದ್ಯಾಲಯ ಇವರ ವರಿಯಿಂದ ಆಯೋಜಿಸಿದ್ದ “ಭಾರತದ ಸಂವಿಧಾನದ ಅಡಿಯಲ್ಲಿ ಸಾಮಾಜಿಕ ನ್ಯಾಯ” ಕುರಿತು ಏರ್ಪಡಿಸಲಾದ ವಿಚಾರ ಕಲರವ ಮೂರನೇ ಉಪನ್ಯಾಸ ಮಾಲಿಕೆಯಲ್ಲಿ ನಿವೃತ್ತ ಉಚ್ಛನ್ಯಾಯಾಲಯದ ನ್ಯಾಯಾಧೀಶರಾದ ಹೆಚ್. ನಾಗಮೋಹನ್‍ದಾಸ್ ರವರು ಭಾಗವಹಿಸಿದ್ದರು. ಭಾರತವನ್ನು ಅರಿಯದೇ ಸಂವಿದಾನವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ಸಮಾಜದಲ್ಲಿರುವ ದುರ್ಬಲರು, ಬಡತನದಿಂದ ಬಳಲುತ್ತಿರುವವರು, ಅನಕ್ಷರಸ್ಥರು, ಭೂ ಹೀನರು, ರೋಗಗ್ರಸ್ಥರು, ನಿರುದ್ಯೋಗಿಗಳು, ಹಿಂದುಳಿದ ವರ್ಗದವರನ್ನು ಮುಂದೆ ತಂದು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯುವುದೇ ಸಂವಿಧಾನದ ಬಹು ಮುಖ್ಯ ಉದ್ದೇಶ […]

ಕಾಯ್ದೆ ತಿದ್ದುಪಡಿಗೆ ಸಂವಿಧಾನದಲ್ಲಿ ಅವಕಾಶವಿದೆ

Saturday, January 18th, 2020
meeting

ಮಡಿಕೇರಿ : ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ವಿರೋಧಿ ಎಂದು ಕೆಲವರು ಟೀಕಿಸುತ್ತಿದ್ದು, ಕಾಯ್ದೆ ತಿದ್ದುಪಡಿಗೆ ಸಂವಿಧಾನದಲ್ಲೆ ಅವಕಾಶವಿದೆ ಎಂದರು. ನೆಹರು ಅವರ ಕಾಲದಲ್ಲಿ ಪ್ರಸ್ತಾಪವಾದ ಈ ಕಾಯ್ದೆಯನ್ನು ನಂತರದ ಕಾಂಗ್ರೆಸ್ ಸರ್ಕಾರ ಅನೇಕ ಬಾರಿ ತಿದ್ದುಪಡಿ ಮಾಡಿದೆ. ಸಂವಿಧಾನದ ಅಡಿಯಲ್ಲೆ ರಚನೆಯಾದ ಕಾಯ್ದೆ ಇದಾಗಿದ್ದು, ಲೋಕಸಭೆಯಲ್ಲಿ ವಿಸ್ತೃತ ಚರ್ಚೆಯಾದ ನಂತರವೆ ಕಾಯ್ದೆಯನ್ನು ಜಾರಿಗೆ ತರಲಾಗಿದೆಯೇ ಹೊರತು, ಏಕಾಏಕಿ ಜಾರಿ ಮಾಡಿಲ್ಲವೆಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ಸೇರಿದಂತೆ ಕೆಲವು ಪಕ್ಷಗಳು […]

ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಿ : ನ್ಯಾಯಾಧೀಶ ವಿ.ವಿ.ಮಲ್ಲಾಪುರ ಸಲಹೆ

Wednesday, November 27th, 2019
Madikeri

ಮಡಿಕೇರಿ : ಇಡೀ ಜಗತ್ತಿನಲ್ಲಿಯೇ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ರಾಷ್ಟ್ರದಲ್ಲಿ, ಸಂವಿಧಾನವು ಪವಿತ್ರ ಮಹಾಗ್ರಂಥವಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಎಫ್‌ಎಂಕೆಎಂಸಿ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಗರದ ಎಫ್‌ಎಂಕೆಎಂಸಿ ಕಾಲೇಜಿನಲ್ಲಿ ಮಂಗಳವಾರ ನಡೆದ ’ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಷ್ಟ್ರದ ಸಂವಿಧಾನದಲ್ಲಿ 25 ವಿಭಾಗಗಳಲ್ಲಿ […]

ಅಂಬೇಡ್ಕರ್ ಸಮಾನತೆಯ ಪ್ರಜ್ಞೆ ಭಾರತಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು

Monday, April 22nd, 2019
Alvas

ಮೂಡಬಿದಿರೆ: ಅಂಬೇಡ್ಕರ್ ಎಂಬ ಮಹಾನ್ ಚೇತನ ಸಂಘರ್ಷದ ಅನುಭವದಿಂದ ಹುಟ್ಟಿಕೊಂಡ ವ್ಯಕಿತ್ವ. ಅವರ ಮನಸ್ಸಿನಲ್ಲಿ ಅಂದು ಮೂಡಿದ ಸಮಾನತೆಯ ಪ್ರಜ್ಞೆ ,ಭವ್ಯ ಭಾರತಕ್ಕೆ ಬಲಿಷ್ಠ ಸಂವಿಧಾನವನ್ನು ನೀಡುವಂತೆ ಪ್ರೇರೆಪಿಸಿತು ಎಂದು ಆಳ್ವಾಸ್ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಪಕ ಡಾ ಯೋಗೀಶ್ ಕೈರೋಡಿ ನುಡಿದರು. ಅವರು ಆಳ್ವಾಸ್ ಪದವಿ ಕಾಲೇಜಿನ ಐಕ್ಯೂಎಸಿವತಿಯಿಂದ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಕಾರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ನಮ್ಮ ಇಂದಿನ ದಿನ ನಿತ್ಯದ ಜೀವನ ನಮ್ಮ ಸಂವಿಧಾನದ ತಳಹದಿಯ ಮೇಲೆ ನಿಂತಿದೆ. ಅಂದು ಅಂಬೇಡ್ಕರ್ […]

ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ಮಾಡಿದ್ದಲ್ಲ : ಪೇಜಾವರ ಶ್ರೀ

Saturday, November 25th, 2017
pejavar seer

ಉಡುಪಿ :  ಕೇವಲ ಅಲ್ಪಸಂಖ್ಯಾತರು ಹಾಗೂ ಬಹುಸಂಖ್ಯಾತರ ನಡುವೆ ಇರುವ ತಾರತಮ್ಯವನ್ನು ತೊಡೆದು ಹಾಕಲು ಸಂವಿಧಾನದ ತಿದ್ದುಪಡಿ ಮಾಡುವಂತೆ ಸೂಚಿಸಿದ್ದೇನೆಯೇ ಹೊರತು ಸಂವಿಧಾನವನ್ನು ಬದಲಾಯಿಸುವಂತೆ ಕರೆ ನೀಡಿಲ್ಲ ಎಂದು ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಧರ್ಮ ಸಂಸದ್‌ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಲ್ಪಸಂಖ್ಯಾತರಿಗೆ ಹಾಗೂ ಬಹುಸಂಖ್ಯಾತರಿಗೆ ಬೇರೆ ಬೇರೆ ನಿಯಮಗಳಿರುವುದನ್ನು ಟೀಕಿಸಿ, ಅಲ್ಪಸಂಖ್ಯಾತರಿಗೆ ಸಿಗುವ ಎಲ್ಲಾ ಸೌಲಭ್ಯಗಳು ಬಹುಸಂಖ್ಯಾತರಿಗೂ ಸಿಗುವಂತಾಗಬೇಕು. ಇದಕ್ಕಾಗಿ ಸಂವಿಧಾನದಲ್ಲಿ ಬದಲಾವಣೆಯಾಗಬೇಕು ಎಂದು ಉಡುಪಿಯಲ್ಲಿ ನಡೆದಿರುವ ಧರ್ಮ ಸಂಸದ್‌ನ ಉದ್ಘಾಟನಾ […]

ಕರಾವಳಿಯ ತುಳು ಭಾಷೆಗೆ ವಿಕಿಪೀಡಿಯ ಮನ್ನಣೆ

Monday, August 8th, 2016
Thulu-lipi

ಮಂಗಳೂರು: ಇಂದಲ್ಲ ನಾಳೆ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಯಾಗುತ್ತದೆ ಎಂಬ ಆಶಯದಲ್ಲೇ ಇರುವ ಕರಾವಳಿಯ ತುಳು ಭಾಷೆಗೆ ವಿಕಿಪೀಡಿಯ ಮನ್ನಣೆ ನೀಡುವ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಿದೆ. ವಿಕಿಪೀಡಿಯ ಫೌಂಡೇಷನ್‍ನ ವ್ಯವಸ್ಥಾಪಕ ನಿರ್ದೇಶಕಿ ಕ್ಯಾಥರಿನ್ ಮಹೆರ್ ಶನಿವಾರ ಪಂಜಾಬಿನ ಚಂಡೀಗಡದಲ್ಲಿ ನಡೆದ ‘ವಿಕಿ ಕಾನ್ಫರೆನ್ಸ್ ಇಂಡಿಯಾ-2016’ ಕಾರ್ಯಕ್ರಮದಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ. ಇದುವರೆಗೆ ಇನ್‍ಕ್ಯುಬೇಟರ್‌‌ನಲ್ಲಿ ಇದ್ದ ತುಳು ಲಿಪಿಯನ್ನು ಈಗ ಲೈವ್ ಸ್ಥಾನಕ್ಕೆ ತರಲಾಗಿದೆ. ಅಂದರೆ ತುಳು ಜಾನಪದಕ್ಕೆ ಸಂಬಂಧಿಸಿ ಯಾವುದೇ ವಿಷಯ ಟೈಪ್ ಮಾಡಿದರೆ […]

ಶಾಂತಿ ಸೌಹಾರ್ದತೆಯ ಭಾರತ ಕಟ್ಟೋಣ : ಹರ್ಷಾದ್ ವರ್ಕಾಡಿ

Thursday, January 28th, 2016
Harshad

ಮಂಜೇಶ್ವರ : ಜಗತ್ತೇ ಗೌರವಿಸುವ ಪ್ರಜಾಪ್ರಭ್ರುತ್ವ ರಾಷ್ರ್ರ ನಮ್ಮ ಭಾರತವಾಗಿದೆ. ಭಾರತದ ಸಂವಿಧಾನ ಇಡೀ ಜಗತ್ತಿಗೇ ಮಾದರಿಯಾಗಿದ್ದು ಸಹಿಷ್ಣುತೆ, ಸಹಬಾಳ್ವೆಯ ಜೀವನದೊಂದಿಗೆ ಶಾಂತಿ ಸೌಹಾರ್ದತೆ, ಭಾರತವನ್ನು ನಾವು ಕಟ್ಟೋಣ ಎಂದು ಕಾಸರಗೋಡು ಜಿಲ್ಲಾ ಪಂಚಾಯತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧಕ್ಷ ಹರ್ಷಾದ್ ವರ್ಕಾಡಿ ಕರೆ ನೀಡಿದ್ದಾರೆ. ಅವರು ವರ್ಕಾಡಿ ಕಳಿಯೂರಿನ ಸೈಂಟ್ ಮೇರೀಸ್ ಆಂಗ್ಲ ಮಾಧಮ ಶಾಲೆಯಲ್ಲಿ ಜರುಗಿದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧಕ್ಷ ಸ್ಥಾನ ವಹಿಸಿ ಮಾತನಾಡಿದರು. ಸ್ವಾತಂತ್ರ್ಯಾನಂತರದ ಭಾರತದಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರು ರೂಪಿಸಿದ ಸಂವಿಧಾನ ಇಂದು […]