ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣದ ಆರೋಪಿಗಳಿಂದ ಮಹತ್ವದ ಮಾಹಿತಿ, ಹೆಚ್ಚಿನ ತನಿಖೆಗೆ ಐದು ದಿನಗಳ ಪೊಲೀಸ್ ಕಸ್ಟಡಿ

Wednesday, October 28th, 2020
Surendra Bantwal

ಬಂಟ್ವಾಳ: ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಂದ ಮಹತ್ವದ ಮಾಹಿತಿ ಲಭ್ಯವಾಗಿದ್ದು, ಪ್ರಕರಣದ ಹಿಂದಿರುವ ಮತ್ತೆ ಕೆಲವರ ಮಾಹಿತಿ ಲಭ್ಯವಾಗಿದೆ.  ಬಂಧಿತ ಆರೋಪಿಗಳಿಗೆ  ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ದ.ಕ. ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ನಿರ್ದೇಶನದಲ್ಲಿ ಬಂಟ್ವಾಳ ಇನ್ಸ್ಪೆಕ್ಟರ್ ನಾಗರಾಜ್ ಪ್ರಕರಣದ ತನಿಖೆ ನಡೆಸುತ್ತಿದ್ದು,  ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ ತಲವಾರನ್ನು ವಶಪಡಿಸಿಕೊಂಡಿ ದ್ದಾರೆ. ತಾಲೂಕಿನ ಭಂಡಾರಿ ಬೆಟ್ಟುವಿನ ವಸ್ತಿ ಅಪಾರ್ಟ್ಮೆಂಟ್ನಲ್ಲಿ ಅ.20ರಂದು ಸುರೇಂದ್ರ ಬಂಟ್ವಾಳ್ ಹೆಣವಾಗಿ ಮಲಗಿದ್ದ.  ಆತನ ಮೊಬೈಲಿಗೆ ಕರೆ ಮಾಡಿದರೆ […]

ಸುರೇಂದ್ರ ಬಂಟ್ವಾಳ್ ಕೊಲೆ ಆರೋಪಿ ಸತೀಶ್ ಕುಲಾಲ್ ಮತ್ತು ಇನ್ನೊಬ್ಬ ಸಹಚರನ ಬಂಧನ

Sunday, October 25th, 2020
Surendra Bantwal

ಬಂಟ್ವಾಳ : ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆ.20ರಂದು ರಾತ್ರಿ ಸುರೇಂದ್ರ ಬಂಟ್ವಾಳ್ ನನ್ನು ಬಿ.ಸಿ.ರೋಡಿನ ಪ್ಲ್ಯಾಟ್ ನಲ್ಲಿ ಚೂರಿಯಿಂದ ಇರಿದು ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಗಳಾದ ಸುರೇಂದ್ರನ ಆಪ್ತ ಸ್ನೇಹಿತ ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಮತ್ತು ಕಿನ್ನಿಗೋಳಿ ನಿವಾಸಿ ಗಿರೀಶ್ ಯಾನೆ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಕಾಸರಗೋಡು ಕಡೆಯಿಂದ ಬಾಡಿಗೆ ವಾಹನದಲ್ಲಿ ಬಂಟ್ವಾಳ ಕಡೆ ಶನಿವಾರ ರಾತ್ರಿ ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಡಿವೈಎಸ್ಪಿ […]

ಸುರೇಂದ್ರ ಬಡ್ಡಿ ವ್ಯವಹಾರದ ಪಾಪದ ಹಣವನ್ನು ಕಿಶನ್ ಹೆಗ್ಡೆ ಕೊಲೆಗೆ ಬಳಸಿದ್ದ, ಅದಕ್ಕಾಗಿ ಕೊಲೆ ಶಂಕೆ

Thursday, October 22nd, 2020
suresh Kulal

ಬಂಟ್ವಾಳ : ಕಿಶನ್ ಹೆಗ್ಡೆ ಕೊಲೆಗೆ ಪ್ರತಿಕಾರವಾಗಿ ಸುರೇಂದ್ರ ಬಂಟ್ವಾಳ್ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಬಗ್ಗೆ ಮಹತ್ವದ ಸುಳಿವು ಸಿಕ್ಕಿದ್ದು,  ಸುರೇಂದ್ರನ ಆಪ್ತ ಸ್ನೇಹಿತ  ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಕಳಿಸಿದ್ದು ಪೊಲೀಸರು ಸುಳಿವಿನ ಬೆನ್ನು ಹತ್ತಿದ್ದಾರೆ. ರೌಡಿ ಶೀಟರ್, ನಟ ಸುರೇಂದ್ರ ಭಂಡಾರಿ ಬಂಟ್ವಾಳ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಎರಡು ಪ್ರತ್ಯೇಕ ತಂಡ ರಚಿಸಿ ಹಂತಕರ ಬೇಟೆ ಆರಂಭಿಸಿದ್ದಾರೆ. ಸುರೇಂದ್ರ ಬಂಟ್ವಾಳ್ ಅವರ ಆಪ್ತ ಸ್ನೇಹಿತ ಸತೀಶ್ ಕುಲಾಲ್ ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಸಂದೇಶದ  […]

ತಲ್ವಾರ್ ಹಿಡಿದು ಯುವಕರ ಮೇಲೆ ಹಲ್ಲೆ ಆರೋಪ, ಸುರೇಂದ್ರ ಶೆಟ್ಟಿ ಸೇರಿ ಮೂವರ ಬಂಧನ..!

Friday, June 22nd, 2018
surendra-shetty

ಮಂಗಳೂರು: ತಲ್ವಾರ್ ಹಿಡಿದುಕೊಂಡು ಜೂ. 11ರಂದು ಬಂಟ್ವಾಳದ ಬಡ್ಡಕಟ್ಟೆಯಲ್ಲಿ ಯುವಕರ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದ ಆರೋಪಿ, ನಟ ಸುರೇಂದ್ರ ಮತ್ತು ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ಸತೀಶ್ ಕುಲಾಲ್ ಹಾಗೂ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಪೃಥ್ವಿರಾಜ್ ಜೆ. ಶೆಟ್ಟಿ (35) ಎಂಬಾತನನ್ನು ಕೂಡ ಬಂಧಿಸಲಾಗಿದೆ. ಜೂ. 11ರಂದು ಬಡ್ಡಕಟ್ಟೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರಾದ ಗಣೇಶ್ ರೈ, ಪುಷ್ಪರಾಜ್, ಮನೋಜ್ ಮತ್ತು ಇತರರ ಮೇಲೆ ಆರೋಪಿ ಸುರೇಂದ್ರ ಕೊಲೆ ಯತ್ನ ನಡೆಸಿದ್ದ […]

ಬಾವಿಗೆ ಬಿದ್ದು ಚಿರತೆ ಸಾವು

Wednesday, January 31st, 2018
chitaa-well

ಉಡುಪಿ: ಆಹಾರ ಅರಸುತ್ತ ಬಂದ ಚಿರತೆಯೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಪೆರ್ಡೂರು ಸಮೀಪದ ಬೆಳ್ಳರ್ಪಾಡಿಯ ಸುತ್ತುಬಲ್ಲೆ ಎಂಬಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಆಹಾರ ಅರಸುತ್ತ ಬಂದ 2 ವರ್ಷ ಪ್ರಾಯದ ಗಂಡು ಚಿರತೆಯು ಸುತ್ತುಬಲ್ಲೆಯ ಸತೀಶ್ ಕುಲಾಲ್ ಎಂಬುವವರ ಆವರಣವಿಲ್ಲದ ಬಾವಿಗೆ ಬಿದ್ದಿದೆ. ನೀರು ತುಂಬಿದ್ದ ಬಾವಿಯಿಂದ ಮೇಲೆ ಬರಲಾಗದೆ ಚಿರತೆ ಸಾವನ್ನಪ್ಪಿದ್ದು, ಚಿರತೆಯ ಮೃತದೇಹವನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳೀಯರ ಸಹಕಾರದಿಂದ ಚಿರತೆಯ ಮೃತದೇಹವನ್ನು […]