ಪ್ರಧಾನಿಯವರ ರೋಡ್ ಶೋ ಬಿಲ್ಲವರಿಗೆ ಮಂಕುಬೂದಿ ಎರಚುವ ಪ್ರಯತ್ನ : ಸತ್ಯಜಿತ್ ಸುರತ್ಕಲ್

Saturday, April 13th, 2024
satyajith

ಮಂಗಳೂರು: ಕಾಂಗ್ರೆಸ್ ಪಕ್ಷದಿಂದ ಬಿಲ್ಲವರಿಗೆ ಟಿಕೆಟ್ ನೀಡಿರುವುದನ್ನು ನೋಡಿ ಬಿಲ್ಲವರು ಎಲ್ಲಿ ಬಿಜೆಪಿ ಕೈ ಬಿಡುತ್ತದೆಯೋ ಎಂಬ ಅಂಜಿಕೆಯಿಂದ ಬಿಜೆಪಿಗೆ ಮತ್ತೆ ಬ್ರಹ್ಮಶ್ರೀ ನಾರಾಯಣ ಗುರುಗಳ ನೆನಪಾಗಿದೆ. ಅದಕ್ಕಾಗಿ ಪ್ರಧಾನಿಯವರ ಮೂಲಕ ನಾರಾಯಣ ಗುರು ವೃತ್ತದಿಂದ ರೋಡ್ ಶೋಗೆ ಬಿಜೆಪಿ ಮುಂದಾಗಿದೆ, ಇದು ಸಮಾಜಕ್ಕೆ ಮಂಕುಬೂದಿ ಎರಚುವ ಪ್ರಯತ್ನವಾಗಿದೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ […]

ಕೆ.ಎಸ್‌.ಈಶ್ವರಪ್ಪ ಭೇಟಿ, ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ ಸತ್ಯಜಿತ್ ಸುರತ್ಕಲ್‌

Saturday, March 16th, 2024
Satyajith

ಮಂಗಳೂರು : ಈ ಬಾರಿ ಜಿಲ್ಲೆಯಲ್ಲಿ ಓಡಾಡಿ ತನ್ನ ಕಾರ್ಯಕರ್ತರನ್ನು ಸಂಘಟಿಸಿ ಹಲವು ಸಭೆಗಳನ್ನು ನಡೆಸಿ ಪಕ್ಷದ ಗಮನ ಸೆಳೆಯುವ ಪ್ರಯತ್ನ ಮಾಡಿ ವಿಫಲರಾದ ಸತ್ಯಜಿತ್ ಸುರತ್ಕಲ್‌ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ್ದಾರೆ. ಅದಕ್ಕಾಗಿ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಗೆ ಸಿದ್ಧತೆ ಮಾಡಿಕೊಂಡಿರುವ ಕೆ.ಎಸ್‌.ಈಶ್ವರಪ್ಪಅವರನ್ನು ಭೇಟಿಮಾಡಿದ್ದಾರೆ. ಕೆ.ಎಸ್‌. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್ ಈಶ್ವರಪ್ಪ ಅವರ ಬೆಂಬಲಕ್ಕೆ ತಾವು ಇರುವುದಾಗಿ ಬರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ […]

ರಾಜ್ಯಕ್ಕೆ ವ್ಯವಸ್ಥಿತವಾಗಿ ಬೆಂಕಿ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ: ಸತ್ಯಜಿತ್

Tuesday, January 3rd, 2017
Sathyajith

ಮಂಗಳೂರು: ರಾಜ್ಯಕ್ಕೆ ವ್ಯವಸ್ಥಿತವಾಗಿ ಬೆಂಕಿ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಣಾಜೆಯ ಕಾರ್ತಿಕ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಭಾವೋದ್ವೇಗದಲ್ಲಿ ಆಡಿದ ಕೆಲವೊಂದು ಶಬ್ದಗಳನ್ನು ಹಿಡಿದುಕೊಂಡು ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆಯುತ್ತಿರುವುದು ನೋಡಿದಾಗ `ದೆವ್ವದ ಬಾಯಿಯಲ್ಲಿ ಭಗವದ್ಗೀತೆ’ ಕೇಳಿದಂತ ಮಾತು ನೆನಪಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. […]