ಮಂಗಳೂರು ವಕೀಲರ ಸಂಘದಿಂದ ಬೃಹತ್ ಲಸಿಕಾ ಅಭಿಯಾನ: 500ಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸೀನ್

Thursday, June 24th, 2021
Advocates-Vaccination

ಮಂಗಳೂರು: ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳೂರು ವಕೀಲರ ಸಂಘದಿಂದ ಇಂದು ಬೃಹತ್ ಲಸಿಕಾ ಅಭಿಯಾನ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮಾರ್ಗದರ್ಶನದಲ್ಲಿ ಬೃಹತ್ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ನಾಲ್ಕನೇ ಅಭಿಯಾನ ಇದಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಫಲಾನುಭವಿಗಳು ಲಸಿಕೆ ಪಡೆದುಕೊಂಡರು. 18 ವಯಸ್ಸಿನ ಮೇಲ್ಪಟ್ಟ ವಕೀಲರಿಗೆ, 45 ವರ್ಷ ಮೇಲ್ಪಟ್ಟ ವಕೀಲರಿಗೆ ಇದುವರೆಗೆ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆದಿತ್ತು. […]

ಧಾರವಾಡ ಜಿಲ್ಲಾ ನ್ಯಾಯಾಧೀಶರಿಗೆ ಮತ್ತು ನ್ಯಾಯಾಲಯ ಸಿಬ್ಬಂದಿಗೆ ಲಸಿಕೆ ಅಭಿಯಾನ

Friday, May 28th, 2021
Vaccination

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯದ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಯಿತು. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಅವರು ಲಸಿಕೀಕರಣದ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಧಾನ ಹಿರಿಯ ನ್ಯಾಯಾಧೀಶ ಹಾಗೂ ಸಿಜೆಎಂ ಸಂಜಯ ಗುಡಗುಡಿ, ವ್ಯೆದ್ಯಾಧಿಕಾರಿಗಳಾದ ಡಾ. ಕೆ.ಎನ್. ತನುಜಾ, ಡಾ.ಕವಿತಾ ಮತ್ತು ಅವರ ಸಿಬ್ಬಂದಿ ಹಾಜರಿದ್ದು ಅಭಿಯಾನವನ್ನು ಯಶಸ್ವಿಗೂಳಿಸಿದರು. 120ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ನ್ಯಾಯಾಧೀಶರು ಮೊದಲ ಡೋಸ್ ಲಸಿಕೆ ಪಡೆದರು.