ತುಳುವೆರೆ ಪಕ್ಷದ ವೆಬ್‌ಸೈಟ್ ಲೋಕಾರ್ಪಣೆ ಮತ್ತು ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Monday, September 27th, 2021
Tuluvere Paksha

ಬೆಳ್ತಂಗಡಿ : ತುಳುವೆರೆ ಪಕ್ಷದ ವೆಬ್‌ಸೈಟ್ ಲೋಕಾರ್ಪಣೆ ಮತ್ತು ಸದಸ್ಯತ್ವ ಅಭಿಯಾನಕ್ಕೆ ಅಂಬೇಡ್ಕರ್ ಭವನದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕರ್ತರ ಸಮಾವೇಶ ಮತ್ತು ಸಮಾರಂಭದ ಅಧ್ಯಕ್ಷತೆಯನ್ನು ಪಕ್ಷದ ಸ್ಥಾಪಕ ಅಧ್ಯಕ್ಷರಾದ ಶೈಲೇಶ್ ಆರ್.ಜೆ.ಯವರು ವಹಿಸಿ ಮಾತನಾಡುತ್ತ ತುಳು ಭಾಷೆಯ ಸ್ಥಾನಮಾನ ಮತ್ತು ತುಲುನಾಡ್ ರಾಜ್ಯ ರಚನೆಯ ಬೇಡಿಕೆಗೆ ಸುಧೀರ್ಘಕಾಲದಿಂದ ತುಳುವರು ಹೋರಾಟ ನಡೆಸುತ್ತಿದ್ದರು ತುಳು ಭಾಷೆಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಅಧಿಕೃತ ಭಾಷೆಯೆಂಬ ಸ್ಥಾನಮಾನ ನೀಡಲು ವಿಫಲವಾಗಿದೆ, 8ನೇ ಪರಿಚ್ಛೇದಕ್ಕೆ ಸೇರಿಸಲು […]

ಕನ್ನಡ ನಾಡು, ನುಡಿ, ಜಲ ಸಂರಕ್ಷಣೆಗೆ ಕರವೇ ಮುಖಂಡ ಸಂತೋಷ ಸುಬ್ಬಣ್ಣವರ ಕರೆ

Monday, January 25th, 2021
Subbannanavaru

ಧಾರವಾಡ : ರಾಜ್ಯದ ನುಡಿ, ಜಲ ಸಂರಕ್ಷಣೆಗೆ ಧಾರವಾಡ ಜಿಲ್ಲಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ ಶೆಟ್ಟಿ ಬಣ) ಯು ಸದಸ್ಯತ್ವ ಅಭಿಯಾನ ಆರಂಭಿಸಿದೆ ಎಂದು ಕರವೇ ಜಿಲ್ಲಾ ಮುಖಂಡ ಸಂತೋಷ ಸುಬ್ಬಣ್ಣವರ ತಿಳಿಸಿದ್ದಾರೆ. ಜಿಲ್ಲೆಯ ಕಲಘಟಗಿ, ಅಳ್ನಾವರ, ಅಣ್ಣಿಗೇರಿ, ನವಲಗುಂದ, ಕುಂದಗೋಳ, ಹುಬ್ಬಳ್ಳಿ ಹಾಗೂ ಧಾರವಾಡ ತಾಲೂಕಿನಾದ್ಯಂತ ನಮ್ಮ ಸಂಘಟನೆಯ ಕಾರ್ಯಕರ್ತರು ಸದಸ್ಯತ್ವ ಅಭಿಯಾನ ಆರಂಭಿಸಲಿದ್ದಾರೆ ಎಂದು ಸಂತೋಷ ಸುಬ್ಬಣ್ಣವರ ತಿಳಿಸಿದ್ದಾರೆ. ವರದಿ :  ಶಂಭು ಹಬ್ಬಳ್ಳಿ