ಬಂಗಾರಪಲ್ಕೆ ಗುಡ್ಡ ಕುಸಿತದಿಂದ ಮಣ್ಣಿನಡಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

Tuesday, February 16th, 2021
sanath

ಬೆಳ್ತಂಗಡಿ :  ಮಲವಂತಿಗೆ ಗ್ರಾಮದ ಬಂಗಾರಪಲ್ಕೆ ಜಲಪಾತದಲ್ಲಿ ಜ.25ರಂದು ಗುಡ್ಡ ಕುಸಿತದಿಂದ ಮಣ್ಣಿನಡಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ  ಮೃತದೇಹ ಮಂಗಳವಾರ ಪತ್ತೆಯಾಗಿದೆ. ಲಾಯಿಲ ಗ್ರಾಮದ ಕಾಶಿಬೆಟ್ಟು ವಾಸುದೇವ ಶೆಟ್ಟಿ ಅವರ ಪುತ್ರ ಸನತ್ ಶೆಟ್ಟಿ (20) ಅವರ ಮೃತದೇಹ ಮೂರು ವಾರಗಳ ನಂತರ ಪತ್ತೆಯಾಗಿದೆ. ಬಂಗಾರಪಲ್ಕೆ ಜಲಪಾತದಲ್ಲಿ ಕಾರ್ಯಾಚರಣೆ ನಡೆಸಲು ಬೇಕಾದ ಯಂತ್ರಗಳನ್ನು ಬಳಸಲು ಸರಿಯಾದ ವಾತಾವರಣವಿಲ್ಲದ ಕಾರಣ ಹಲವು ಸಮಯದವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಮಂಗಳವಾರ ಕಲ್ಲು ಬಂಡೆಯಡಿ ಮೃತದೇಹ ಲಭ್ಯವಾಗಿದೆ.