ಸರ್ಕಾರಿ ಜಾಗದಲ್ಲಿ ಕ್ರೈಸ್ತರು-ಹಿಂದೂಗಳ ನಡುವೆ ಆರಾಧನೆಗೆ ಕಿತ್ತಾಟ

Saturday, September 29th, 2018
Koragajja

ಮಂಗಳೂರು : ಸರ್ಕಾರಿ ಜಾಗದಲ್ಲಿ ಕ್ರೈಸ್ತರು ಮತ್ತೆ ಹಿಂದೂಗಳ ನಡುವೆ ಆರಾಧನೆ ಮಾಡುವ ವಿಚಾರದಲ್ಲಿ ಕಿತ್ತಾಟ ಆರಂಭ ಗೊಂಡಿದ್ದು ಮೇರಿಯ ಮಾತೆಯ ಆರಾಧನೆಯ ಸ್ಥಳದಲ್ಲಿ ಶುಕ್ರವಾರ ಮಧ್ಯರಾತ್ರಿ ನಂತರ ಕೊರಗಜ್ಜ ದೈವದ ಆರಾಧನೆ ಆರಂಭ ಗೊಂಡಿದೆ. ಬಂಟ್ವಾಳ ತಾಲೂಕು ಕುಂಟ್ರಕಳದ ಸರ್ಕಾರಿ ಸ್ಥಳದಲ್ಲಿ ಅನಧಿಕೃತವಾಗಿ ಮೇರಿ ಆರಾಧನೆ ಬಗ್ಗೆ ಇತ್ತೀಚೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ಷೇಪ ಎತ್ತಿದ್ದರು. ಕ್ರೈಸ್ತರು ಆರಾಧನೆ ಮಾಡುತ್ತಿದ್ದ ಸ್ಥಳದಲ್ಲಿ ಕೊರಗಜ್ಜ ದೈವದ ಮೂರ್ತಿ ಇರಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಳೆದ 45 ವರ್ಷಗಳಿಂದ ಕುಂಟ್ರಕಳದಲ್ಲಿ ಮಾತೆ ಮೇರಿಯ ಮೂರ್ತಿಯನ್ನಿಟ್ಟು ಕ್ರೈಸ್ತರು  ಕೆಲವು  ಆರಾಧನೆ ಮಾಡುತ್ತಿದ್ದರು. ಸೆ.28 ಮಧ್ಯರಾತ್ರಿ  ಹಿಂದೂಗಳ ತಂಡ […]