ಅನ್ಯಧರ್ಮದ ಯುವಕ ಮತ್ತು ಯುವತಿ ಮೇಲೆ ಬಸ್‌ನಲ್ಲಿ ಹಲ್ಲೆ, ನಾಲ್ವರ ಬಂಧನ

Saturday, December 11th, 2021
Bus Love

ಮಂಗಳೂರು : ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಶುಕ್ರವಾರ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಅವಾಚ್ಯವಾಗಿ ಬೈದು ಕೈಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಪ್ರಕಾಶ್, ರಾಘವೇಂದ್ರ, ರಂಜಿತ್, ಪವನ್ ಎಂದು ಗುರುತಿಸಲಾಗಿದೆ. ಅನ್ಯಧರ್ಮದ ಯುವಕ ಮತ್ತು ಯುವತಿ ಬಸ್‌ನಲ್ಲಿ ಕುಳಿತುಕೊಂಡಿದ್ದ ಸಂದರ್ಭದಲ್ಲಿ 5-6 ಮಂದಿ ಐಡಿ ಪ್ರೂಫ್ ಕೇಳಿ ಅವರ ಮನೆಯವರ ಬಗ್ಗೆ ವಿಚಾರಿಸಿ ಅವಾಚ್ಯ ಶಬ್ಧಗಳಿಂದ ಬೈದು ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಮಾತ್ರವಲ್ಲದೆ ಯುವತಿಯ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ವರ್ತಿಸಿದ್ದ […]

ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಎರಡು ಅಂಗಡಿಯಲ್ಲಿ ಬೆಂಕಿ ಅನಾಹುತ

Wednesday, September 16th, 2020
fire Udupi

ಉಡುಪಿ : ಇಲ್ಲಿನ  ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬುಧವಾರ  ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಈ ಅಗ್ನಿ ಅನಾಹುತದಿಂದಾಗಿ ಎರಡು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎನ್ಮಲಾಗಿದೆ. ಸ್ಥಳಕ್ಕೆ ನಗರ ಸಭಾ ಸದಸ್ಯರು ಮತ್ತು  ಅಧಿಕಾರಿಗಳು ಬೇಟಿ ನೀಡಿ ದ್ದಾರೆ.

ಪಂಪ್‍ವೆಲ್ – ಪಡೀಲ್ ರಸ್ತೆ: ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿ, ಸ್ಟೇಟ್‍ಬ್ಯಾಂಕ್ ಸರ್ವೀಸ್ ಬಸ್ ನಿಲ್ದಾಣ ನವೀಕರಣ

Friday, June 5th, 2020
nalin-kumar

ಮಂಗಳೂರು :  ಮಂಗಳೂರು ನಗರ ಪ್ರವೇಶಿಸುವ ಪ್ರಮುಖ ರಸ್ತೆ ಪಂಪ್‍ವೆಲ್ ನಿಂದ ಪಡೀಲ್‍ವರೆಗೆ ಸುಮಾರು 26 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‍ಸಿಟಿ ಅಡಿಯಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ಮಾರ್ಟ್‍ಸಿಟಿ ನಗರ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ. ಸುಮಾರು 2800 ಮೀಟರ್ ಉದ್ದದ ಈ ರಸ್ತೆಯ ಅಭಿವೃದ್ಧಿ ತುರ್ತು ಅಗತ್ಯವಾಗಿದ್ದು, ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ಇದಕ್ಕೆ ಅನುದಾನ ಕಾದಿರಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ […]