ಬಜಾಲ್ : ಬಾವಿಗೆ ಬಿದ್ದ ಸ್ಕೂಟರ್ ಸವಾರರು, ಓರ್ವ ಮೃತ್ಯು

Monday, January 4th, 2021
Ajith

ಮಂಗಳೂರು : ಬಜಾಲ್ ಸಮೀಪದ  ಪಕ್ಕಲಡ್ಕ ಎಂಬಲ್ಲಿ ಬಾವಿಯ ತಡೆಗೋಡೆಗೆ ಸ್ಕೂಟರ್ ಡಿಕ್ಕಿ ಹೊಡೆದು ಸವಾರರು ಬಿದ್ದು ಓರ್ವ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಇಬ್ಬರು ಸವಾರರ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದ್ದು ಆತನನ್ನು  ಎಮ್ಮೆಕೆರೆ ನಿವಾಸಿ ಅಜಿತ್ (22) ಎಂದು ಗುರುತಿಸಲಾಗಿದೆ. ಅಜಿತ್ ಸೋಮವಾರ ಬಜಾಲ್ನ ಉಲ್ಲಾಸ್ ನಗರದ ತನ್ನ ಸಂಬಂಧಿಕರ ಮನೆಗೆ ಬರುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ರಾತ್ರಿ ವೇಳೆಗೆ ಸ್ಕೂಟರ್ ಸವಾರ ನಿಯಂತ್ರಣ ಕಳೆದುಕೊಂಡು  ರಸ್ತೆ ಪಕ್ಕದಲ್ಲೇ ಇದ್ದ ಬಾವಿ ಆವರಣಕ್ಕೆ ಡಿಕ್ಕಿ ಹೊಡೆದು ಸ್ಕೂಟರ್‌ನಲ್ಲಿದ್ದ ಇಬ್ಬರು ಬಿದ್ದಿದದ್ದಾರೆ ಎನ್ನಲಾಗಿದೆ. […]

ಬೆಳ್ತಂಗಡಿ : ಬಸ್-ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸಾವು

Friday, December 27th, 2019
belthangady

ಬೆಳ್ತಂಗಡಿ : ಚರ್ಚ್ ರೋಡ್ ಬಳಿ ಬಸ್ ಹಾಗೂ ಬೈಕ್ ನಡುವೆ ಸಂಬಂಧಿಸಿದ ಅಪಘಾತದಲ್ಲಿ ಬೈಕ್ ಸವಾರ ಉಮೇಶ್ ದೇವಾಡಿಗ ಎಂಬವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೈಕ್ ಮತ್ತು ಬಸ್ ಮುಖಾಮುಖಿ ಢಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.