ಡೆಂಗ್ಯೂ ಹಾಗೂ ನಿಫಾ ವೈರಸ್ ಕುರಿತು ಆತಂಕ ಬೇಡ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Friday, September 15th, 2023
ಡೆಂಗ್ಯೂ ಹಾಗೂ ನಿಫಾ ವೈರಸ್ ಕುರಿತು ಆತಂಕ ಬೇಡ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಂಗಳೂರು : ಜಿಲ್ಲೆಯಲ್ಲಿ ಡೆಂಗ್ಯೂ, ನಿಫಾ ವೈರಸ್ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳ ಲಕ್ಷಣ, ಹರಡುವಿಕೆ ನಿಯಂತ್ರಣ ಸೇರಿದಂತೆ ಚಿಕಿತ್ಸೆಯ ಬಗ್ಗೆ ಜನಸಾಮಾನ್ಯರಿಗೆ ಆರೋಗ್ಯ ಶಿಕ್ಷಣವನ್ನು ನೀಡಿ ಇವುಗಳ ನಿಯಂತ್ರಣಕ್ಕೆ ಆರೋಗ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಡೆಂಗ್ಯೂ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮಲೇರಿಯ ನಿಯಂತ್ರಣದಂತೆ ಡೆಂಗ್ಯೂ ನಿಯಂತ್ರಣ ಮಾಡುವುದು ಅತೀ ಮುಖ್ಯ […]

ಕೋವಿಡ್-19 ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ

Monday, June 7th, 2021
Yunani

ಬೆಂಗಳೂರು : ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಗುಣಪಡಿಸಲಾಗುತ್ತದೆ ಎಂಬ ಸುಳ್ಳು ಆಶ್ವಾಸನೆ ನೀಡುವುದು ಹಾಗೂ ಮಾಧ್ಯಮಗಳಲ್ಲಿ ಪ್ರಚಾರ ಮಾಡುವುದು ಕಾನೂನಿನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹವರ ವಿರುದ್ಧ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಗೆ ಸಾರ್ವಜನಿಕರು ದೂರು ನೀಡಿದಲ್ಲಿ ಪರಿಶೀಲಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನೋಂದಣಾಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್-19 ಎರಡನೆ ಅಲೆ ತೀವ್ರವಾಗಿ ಪ್ರಸರಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಜ್ವರ, ನೆಗಡಿ, ಕೆಮ್ಮು ಮತ್ತು ಮೈ-ಕೈ ನೋವಿನಂತಹ ಲಕ್ಷಣಗಳಿಂದ […]

ಕೊರೋನ ಸೋಂಕು ಮೇ 29 : ದ.ಕ. ಜಿಲ್ಲೆ 923 – 7 ಸಾವು, ಉಡುಪಿ ಜಿಲ್ಲೆ- 684 – 3 ಸಾವು, ಕಾಸರಗೋಡು – 506

Saturday, May 29th, 2021
corona Case

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ 923 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ ಮತ್ತು  7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಮರಣ ಹೊಂದಿದವರಲ್ಲಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳದಲ್ಲಿ ತಲಾ ಎರಡು ಮತ್ತು ಪುತ್ತೂರಿನಲ್ಲಿ ಒಬ್ಬರು ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 901ಕ್ಕೇರಿದೆ. ಅಲ್ಲದೆ ಶನಿವಾರ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ 9,345 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರಗೆ 8,44,997 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,70,176 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು […]

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

Friday, May 28th, 2021
aritist

ಹುಬ್ಬಳ್ಳಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ. ಅರ್ಜಿದಾರರು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಆಧಾರ್ ಸಂಖ್ಯೆ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ದೂರವಾಣಿ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಸವಿವರಗಳನ್ನೊಳಗೊಂಡ ದಾಖಲೆಗಳನ್ನು ನಾಗರಿಕ ಸೇವಾ ಕೇಂದ್ರಗಳು […]

ಬಿಡಾಡಿ ದನಗಳಿಗೆ ಮೇವು, ಬೀದಿ ನಾಯಿಗಳಿಗೆ ಆಹಾರ ಹಾಕ್ತೀರಾ? ಹಾಗಾದ್ರೆ ಈ ಕೇಂದ್ರಕ್ಕೆ ನೀಡಿ

Wednesday, May 26th, 2021
dog Food

ಧಾರವಾಡ: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡುತ್ತಿರುವ ಹಿನ್ನಲೆಯಲ್ಲಿ ಜೂನ್ 7 ರ ವರೆಗೆ ಲಾಕ್‍ಡೌನ್ ಮಾಡಲಾಗಿದ್ದು, ಈ ಅವಧಿಯಲ್ಲಿ ವಾರಸುದಾರರಿಲ್ಲದೇ ರಸ್ತೆಯಲ್ಲಿ ಸಂಚರಿಸುವ ದನಗಳಿಗೆ ಮೇವು ಮತ್ತು ನಾಯಿಗಳಿಗೆ ಆಹಾರ ನೀಡಬಯಸುವ ದಾನಿಗಳಿಂದ ಮೇವು, ಆಹಾರ ಸ್ವೀಕರಿಸಲು ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಪ್ರತ್ಯೇಕವಾದ ಎರಡು ಸ್ವೀಕೃತಿ ಕೇಂದ್ರಗಳನ್ನು ಜಿಲ್ಲಾಡಳಿತದಿಂದ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ದಾನಿಗಳಿಂದ ಮೇವು, ಆಹಾರ ಸ್ವೀಕರಿಸಲು ಧಾರವಾಡ ಮತ್ತು ಹುಬ್ಬಳ್ಳಿ ತಾಲೂಕಿನ […]

ಅಂತ್ಯಕ್ರಿಯೆ ಪ್ರಕ್ರಿಯೆಗೆ ಹೊಸ ಆನ್ಲೈನ್ ವ್ಯವಸ್ಥೆ ಜಾರಿ

Tuesday, May 25th, 2021
BBMP

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ವಲಯಗಳಲ್ಲಿ ಕೋವಿಡ್ – 19 ಸಾಂಕ್ರಾಮಿಕ ರೋಗ ಹಾಗೂ ಇತರೆ ಕಾರಣಗಳಿಂದ ಮೃತಪಟ್ಟ ಪ್ರಕರಣಗಳಲ್ಲಿ ಚಿತಾಗಾರ / ಸ್ಮಶಾನಗಳಲ್ಲಿ ಅಂತ್ಯಕ್ರಿಯೆಯನ್ನು ನಡೆಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಲಯ ಕಚೇರಿಗಳ ಆರೋಗ್ಯ ನಿರೀಕ್ಷಕರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಮರಣ ಹೊಂದಿದ ವ್ಯಕ್ತಿಗಳ ಪಾರ್ಥಿವ ಶರೀರವನ್ನು ಚಿತಾಗಾರ / ಸ್ಮಶಾನಕ್ಕೆ ಕಳುಹಿಸುತ್ತಿರುವ ಪ್ರಸ್ತುತ ಪದ್ದತಿಯನ್ನು ಕೈಬಿಡಲಾಗಿದ್ದು, ಈಗಿರುವ […]

ಪ್ರತಿಬಂಧಕಾಜ್ಞೆ ಜಾರಿ ಮುಂದುವರಿಕೆ : ಮುಖಗವಸು ಧರಿಸದಿದ್ದರೆ ರೂ.250 ದಂಡ

Monday, May 24th, 2021
Gadag mask

ಗದಗ : ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ […]

ಕೋವಿಡ್ ರೋಗಿಯ ಮೃತದೇಹ ಇಟ್ಟು 5.23 ಲಕ್ಷ ರೂ. ಬಿಲ್ ಕೇಳಿದ ಮಂಗಳೂರಿನ ಇಂದಿರಾ ಆಸ್ಪತ್ರೆ

Tuesday, May 18th, 2021
indira-hospital

ಮಂಗಳೂರು : ಕೋವಿಡ್ ನಂತಹ ಮಾರಣಾಂತಿಕ ಸಾಂಕ್ರಾಮಿಕ ರೋಗಬಂದಾಗಲೂ ಬಡವರಿಂದ ಕಿತ್ತು ತಿನ್ನುವ ಆಸ್ಪತೆಗಳು ನಮ್ಮ ನಗರದಲ್ಲಿ ತಲೆ ಎತ್ತಿವೆ.  ಸಾಂಕ್ರಾಮಿಕ ರೋಗಗಳಿಗೆ ಉಚಿತ ಚಿಕಿತ್ಸೆ ನೀಡಬೇಕಾದ ಖಾಸಗಿ ಆಸ್ಪತ್ರೆಗಳು ಬಡವರ ರಕ್ತ ಹೀರುವ ದೈತ್ಯ ಲೂಟಿಕೋರ ಕೇಂದ್ರಗಳಾಗಿ ಬೆಳೆದಿವೆ. ಈ ಸುಲಿಗೆ ಕೋರರನ್ನು ಕೇಳುವವರೇ ಇಲ್ಲ. ಜನ ಲಾಕ್ ಡೌನ್ ನಿಂದ ಊಟಕ್ಕೂ ಕಷ್ಟಪಡುತ್ತಿರುವ ಸಂದರ್ಭದಲ್ಲಿ ಇವರಿಗೆ ಬಡವರ ಹೆಣವನ್ನಿಟ್ಟು ವ್ಯಾಪಾರ ಮಾಡುವುದೇ ಕಾಯಕ. ನಗರದ ಖಾಸಗಿ ಆಸ್ಪತ್ರೆಯೊಂದು ಕೋವಿಡ್ ರೋಗಿಯ ಮೃತದೇಹ ಬಿಟ್ಟು ಕೊಡಲು 5.23 […]

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ

Tuesday, December 15th, 2020
shabarimale

ಮಂಗಳೂರು : ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ (https://sabarimalaonline.org/)  ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ  ನೋಂದಣಿ ಮಾಡಿಕೊಂಡಿದ್ದರೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ ಪ್ರತಿ ದಿನ ಒಂದು ಸಾವಿರ […]

ಕೋವಿಡ್‌ -19 ಮಣಿಸಲು ಹುಬ್ಬಳ್ಳಿ ಸಿದ್ದಾರೂಢನ ಸಂಶೋಧನೆ

Friday, July 24th, 2020
chandrashekara

ಹುಬ್ಬಳ್ಳಿ : ನಗರದ ಸಿದ್ಧಾರೂಢ ಚಂದ್ರಶೇಖರ ಅಂಗಡಿ ಕೋವಿಡ್‌ -19 ಕೋರಾನಾ ಸಾಂಕ್ರಾಮಿಕ ರೋಗ ಮಣಿಸಲು ವಿಶಿಷ್ಟ ರೀತಿಯ ಸ್ಯಾನಿಟೈಸರ್‌ ತಮ್ಮ ತಂಡದೊಂದಿಗೆ ಸಂಶೋಧಿಸಿ ಹುಬ್ಬಳ್ಳಿಯ ಹೆಸರನ್ನು ವಿಶ್ವದಾದ್ಯಂತ ಬೆಳಗಿಸಿದ್ದಾನೆ. ವಿಜ್ಹ್‌ ಕ್ಲೀಂಜರ್‌ ಇ – ಸ್ಯಾನಿಟೈಜರ್‌ ಶೋಧಿಸಿದ ಸಿದ್ಧಾರೂಢನ ತಂಡವು ಜಾಗತಿಕ ಮಟ್ಟದಲ್ಲಿ ಇದೊಂದು ಮೊಟ್ಟ ಮೊದಲ ಉತ್ಪನ್ನ (ಮೇಡ್‌ ಇನ್‌ ಇಂಡಿಯಾ, ಮೇಡ್‌ ಫಾರ್‌ ಇಂಡಿಯಾ). ಇ-ಸ್ಯಾನಿಟೈಜರ್‌ ಎಂಬ ವಿನೂತನ, ವಿಶಿಷ್ಷ ಹಾಗೂ ಪರಿಸರ ಸ್ನೇಹಿ ಉತ್ಪನ್ನವನ್ನು ವಿವಿಧ ಕಾಲೇಜಿನ ಇಂಜಿನೀಯರಿಂಗ್‌ ವಿದ್ಯಾರ್ಥಿಗಳ ಗುಂಪೊಂದು […]