ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸರ್ಕಾರ ನನಗೆ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ: ಸಾಲುಮರದ ತಿಮ್ಮಕ್ಕ
Tuesday, July 3rd, 2018ಮಂಗಳೂರು: ನಾನು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದು, ಸರ್ಕಾರ ನನಗೆ ಯಾವುದೇ ವ್ಯವಸ್ಥೆ ಕಲ್ಪಿಸಿಲ್ಲ. ಸ್ವಂತ ಮನೆ ಬೇಕು ಎನ್ನುವ ತನ್ನ ಕನಸಿಗೆ ಸರ್ಕಾರ ಸ್ಪಂದಿಸಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ತನ್ನ ಕನಸು ಸಾಕಾರಗೊಳಿಸಲಿ ಎಂದು ಸಾಲುಮರದ ತಿಮ್ಮಕ್ಕ ಅಳಲು ತೋಡಿಕೊಂಡಿದ್ದಾರೆ. ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ವೃಕ್ಷಾಂಜಲಿ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಇದೇ ವೇಳೆ ಮಾತನಾಡಿದ ಸಾಲುಮರದ ತಿಮ್ಮಕ್ಕ ಅವರ ದತ್ತುಪುತ್ರ ಉಮೇಶ್, ಹಿಂದೆ […]