ದೆಹಲಿ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ : ರಕ್ಷಣಾ ಕಾರ್ಯಾಚರಣೆ ವೇಳೆ ಕುಸಿದ ಕಟ್ಟಡ

Thursday, January 2nd, 2020
dehli

ನವದೆಹಲಿ : ಬೆಂಕಿ ಅವಘಡ ಸಂಭವಿಸಿದ್ದ ಪೀರಗರ್ಹಿಯ ಫ್ಯಾಕ್ಟರಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ ಹಲವು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ಪ್ರಾಥಮಿಕ ಮೂಲಗಳ ಪ್ರಕಾರ, ಪೀರಗರ್ಹಿಯ ಫ್ಯಾಕ್ಟರಿಯೊಂದಲ್ಲಿ ಇಂದು ಮುಂಜಾನೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿತ್ತು. ಕೂಡಲೇ ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಧಾವಿಸಿದ್ದವು. ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದು ಬಿದ್ದಿದೆ. ಪರಿಣಾಮ […]

ಮೊಯ್ಲಿ, ದಿಯೋರಾ, ಅಂಬಾನಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

Tuesday, February 11th, 2014
Arvind-Kejriwal

ನವದೆಹಲಿ: ಮುರಳಿ ದಿಯೋರಾ, ವೀರಪ್ಪ ಮೊಯ್ಲಿ, ವಿ.ಕೆ ಸಿಬಲ್ , ಮುಖೇಶ್ ಅಂಬಾನಿ ಮತ್ತು ರಿಲಾಯನ್ಸ್ ಇಂಡಸ್ಟ್ರೀಸ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸೂಚನೆ ನೀಡಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅನಿಲ ಬೆಲೆ ಹೆಚ್ಚಳ ರಿಲಾಯನ್ಸ್ ಕಂಪನಿಯೇ ಕಾರಣ ಎಂದು ಹೇಳಿದ್ದಾರೆ. ರಿಲಾಯನ್ಸ್ ಕಂಪನಿ ಅನಿಲ ಬಾವಿ ಗುತ್ತಿಗೆಯ ವಿಚಾರದಲ್ಲಿ ಕೇಂದ್ರ ಗೋಲ್‌ಮಾಲ್ ನಡೆಸಿದೆ ಹಾಗು ರಿಲಾಯನ್ಸ್ ಕಂಪನಿ ದೇಶದಲ್ಲಿ ಅನಿಲವನ್ನು ಕೃತಕ ಸಂಗ್ರಹದಲ್ಲಿರಿಸಿದೆ […]