2.38 ಲಕ್ಷ ಕೋಟಿ ರೂ. ಬಜೆಟ್ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಬಿ ಎಸ್ ಯಡಿಯೂರಪ್ಪ

Thursday, March 5th, 2020
bsy

ಬೆಂಗಳೂರು : ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಈ ಬಾರಿ 2,37,893 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕಳೆದ ಬಾರಿಯ ಸರ್ಕಾರ ಮಂಡಿಸಿದ್ದ ಬಜೆಟ್ ಗಾತ್ರದಕ್ಕಿಂತ ಈ ಬಾರಿ 3 ಸಾವಿರ ಕೋಟಿ ಹೆಚ್ಚು ಇದೆ. ಮಹದಾಯಿ ಯೋಜನೆ ಮೊದಲಾದ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚು ಒತ್ತುಕೊಡಲಾಗಿದೆ. ಹಾಗೆಯೇ, ಸಿದ್ದರಾಮಯ್ಯ ಸರ್ಕಾರದ ಬಹುತೇಕ ಯೋಜನೆಗಳನ್ನು ಮುಂದುವರಿಸಲಾಗುತ್ತಿದೆ. ಭಾಗ್ಯಲಕ್ಷ್ಮೀ ಯೋಜನೆ, ಮಕ್ಕಳಿಗೆ ಬೈಸಿಕಲ್ ವಿತರಣೆ ಇತ್ಯಾದಿ ಯೋಜನೆಗಳನ್ನು ಮುಂದುವರಿಸಲು ಬಜೆಟ್ನಲ್ಲಿ ನಿರ್ಧರಿಸಲಾಗಿದೆ. ಪ್ರಧಾನಿ ಮೋದಿ ಆಶಯದಂತೆ […]

ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯಗೆ ನಕ್ಸಲ್​ ಜೊತೆ ಸಂಬಂಧ ಇರುವುದು ಸಾಬೀತಾಗಿದೆ : ಸಿಎಂ ಬಿ.ಎಸ್.ಯಡಿಯೂರಪ್ಪ

Friday, February 21st, 2020
bsy

ಮೈಸೂರು : ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾ ವಿರುದ್ಧ ರಾಜ್ಯದೆಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಅಮೂಲ್ಯ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಮೂಲ್ಯ ತಂದೆ ಆಕೆಯ ಕೈ-ಕಾಲು ಮುರಿಯಿರಿ ಎಂದು ಹೇಳಿದ್ದಾರೆ. ಜೊತೆಗೆ ಅವಳ ರಕ್ಷಣೆಗೂ ಹೋಗಲ್ಲ ಎಂದಿದ್ದಾರೆ. ಆಕೆಯ ಹಿಂದಿರುವ ಸಂಘಟನೆಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ತೆಗೆದುಕೊಳ್ಳದಿದ್ದರೆ ಇದು ಕೊನೆಯಾಗಲ್ಲ,” ಎಂದರು. “ಅಮೂಲ್ಯಗೆ ನಕ್ಸಲ್ ಜೊತೆ ಸಂಬಂಧ ಇರುವುದು ಸಾಬೀತಾಗಿದೆ. ಶಾಂತಿ ಸುವ್ಯವಸ್ಥೆ […]

ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರು ಆರೋಪಿಗಳಾಗಿದ್ದರೆ ಪರಿಹಾರ ಇಲ್ಲ : ಸಿಎಂ ಬಿ.ಎಸ್.ಯಡಿಯೂರಪ್ಪ

Wednesday, December 25th, 2019
CM

ಮಂಗಳೂರು : ಮಂಗಳೂರು ನಗರದಲ್ಲಿ ಇತ್ತೀಚೆಗೆ ನಡೆದ ಗೋಲಿಬಾರ್‌ನಲ್ಲಿ ಮೃತಪಟ್ಟವರು ಅಂದು ನಡೆದ ಹಿಂಸಾಚಾರ ಪ್ರಕರಣದ ಆರೋಪಿಗಳಾಗಿದ್ದರೆ ಸಂತ್ರಸ್ತ ಕುಟುಂಬಗಳಿಗೆ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಗೋಲಿಬಾರ್‌ಗೆ ಬಲಿಯಾದವರು ಅಪರಾಧಿಗಳಾಗಿದ್ದರೆ ಪರಿಹಾರ ನೀಡುವುದು ಅಕ್ಷಮ್ಯ ಅಪರಾಧವಾಗುತ್ತದೆ. ಬಲಿಯಾದವರು ಹಿಂಸಾಚಾರದಲ್ಲಿ ಭಾಗಿಯಾಗಿರುವ ಶಂಕೆಯಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದ್ದರಿಂದ ಸದ್ಯ 1 ರೂ. ಪರಿಹಾರ ಕೂಡಾ ಕೊಡಲಾಗದು ಎಂದು ಮುಖ್ಯಮಂತ್ರಿ […]