ಮಂಜೇಶ್ವರದಲ್ಲಿಯೂ ಸಿಎಂ ಸಿದ್ದರಾಮಯ್ಯನನ್ನು ಕಾಡಿದ ಕಾಗೆ

Thursday, January 19th, 2017
cm crow

ಮಂಜೇಶ್ವರ : ಮಂಜೇಶ್ವರದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಗೌರವಾರ್ಥ ಅವರ ಹುಟ್ಟೂರು ಮಂಜೇಶ್ವರದಲ್ಲಿ ಕೇರಳ ಸರಕಾರದ ಸಹಾಯದೊಂದಿಗೆ ನಿರ್ಮಿಸಲಾಗಿರುವ ಗಿಳಿವಿಂಡು ಸಾಂಸ್ಕೃತಿಕ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಇಂದು ಭಾಗವಹಿದ್ದ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವರಿಗೆ ಕಾಗೆಯೊಂದು ಅಡ್ಡಿಪಡಿಸಿತು. ವೇದಿಕೆಯ ಮೇಲೆ ಕುಳಿತಿದ್ದ ಸಿಎಂ ಮೇಲೆ ಪಕ್ಕದ ಮರದಲ್ಲಿ ಕುಳಿತಿದ್ದ ಕಾಗೆಯೊಂದು ಹಿಕ್ಕೆ ಹಾಕಿತು. ಇದರಿಂದ ಸಿಎಂ ಮುಜುಗರಕ್ಕೊಳಗಾದರು. ತಕ್ಷಣ ಶಾಸಕ ಮೊಯ್ದೀನ್ ಬಾವಾ ಸ್ವಚ್ಛಗೊಳಿಸಲು ಟಿಶ್ಯೂ ಪೇಪರ್ ಕೊಟ್ಟರು.ಮೂಡಾದ ಮಾಜಿ ಅಧ್ಯಕ್ಷ ತೇಜೋಮಯ ಅವರು ಸಿಎಂ ಪಂಚೆ […]

ಪೊಲೀಸರ ಬಹುದಿನಗಳ ಬೇಡಿಕೆ, ಪೊಲೀಸರ ವೇತನ ಹೆಚ್ಚಳ ಸಂಬಂಧ ಕರಡು ಸಿದ್ಧ

Thursday, September 1st, 2016
Dr-G-Parameshwar

ಬೆಂಗಳೂರು: ವೇತನ ಹೆಚ್ಚಳ ಮಾಡಬೇಕು ಎಂಬ ರಾಜ್ಯ ಪೊಲೀಸರ ಬಹುದಿನಗಳ ಬೇಡಿಕೆ ಶೀಘ್ರವೇ ಈಡೇರುವ ಸಾಧ್ಯತೆ ಕಂಡು ಬಂದಿದೆ. ಪೊಲೀಸರ ವೇತನ ಹೆಚ್ಚಳ ಸಂಬಂಧ ದೇಶದ ಎಲ್ಲ ರಾಜ್ಯಗಳ ಪೊಲೀಸ್‌ ಇಲಾಖೆಗಳ ವೇತನದ ಮಾಹಿತಿ ಪಡೆದು ಅದರ ಆಧಾರದಲ್ಲಿ ಡಿಜಿಪಿ ಓಂ ಪ್ರಕಾಶ್‌ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ವೇತನ ಪರಿಷ್ಕರಣೆ ಕರಡು ಸಿದ್ಧಗೊಂಡಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆಯ ನಂತರ ಸರ್ಕಾರ ನಿರ್ಧಾರ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಗೃಹ ಸಚಿವ ಡಾ. […]

ಸೋನಿಯಾಗೆ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ರವಾನೆ: ಸಿಎಂ

Wednesday, February 5th, 2014
Siddaramaiah

ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸೋನಿಯಾಗಾಂಧಿಗೆ ಅಭ್ಯರ್ಥಿಗಳ ಪಟ್ಟಿ ರವಾನೆಯಾಗಿದೆ ಎಂದು ಹೇಳಿದ್ದಾರೆ. ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಭಾಗಿಯಾಗುವೆ. ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಭಾಗವಹಿಸಲಿದ್ದು, ಕೇಂದ್ರ ಸಚಿವ ವಯಲಾರ್ ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ರಾಜ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲಿದೆ ಎಂದು ಬಿಜೆಪಿ ಹಿರಿಯ ಮುಖಂಡ […]