ಸವಾರನೇ ಇಲ್ಲದೇ ಮಧ್ಯರಾತ್ರಿ ಸುತ್ತು ಹಾಕಿದ ಬೈಕ್, ಭೂತ, ಪಿಶಾಚಿಯ ಕಾಟ ಎಂದು ವೈರಲ್

Thursday, January 28th, 2021
Bike Move

ಬಂಟ್ವಾಳ: ಮಧ್ಯರಾತ್ರಿ 1 ಗಂಟೆ ವೇಳೆ ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯವೊಂದು ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಬೈಕ್ವೊಂದು ಸವಾರನೇ ಇಲ್ಲದೇ ಮಧ್ಯರಾತ್ರಿ ತನ್ನಷ್ಟಕ್ಕೆ ತಾನೇ ಚಲಿಸುತ್ತದೆ. ಬಂಟ್ವಾಳ ಸಮೀಪ ಪಾಣೆಮಂಗಳೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದು ಅದೇ ಪ್ರದೇಶದ್ದೇ ಬೈಕಾ ಎಂಬುದು ಇನ್ನೂ ಖಚಿತವಾಗಿಲ್ಲ. ಕಳೆದ ವರ್ಷ ಡಿಸೆಂಬರ್ 30ರಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ವಿವರಗಳಿವೆ. ಊರಿನ ಹೆಸರು ಬದಲಾಯಿಸಿಕೊಂಡು ಈ ವಿಡಿಯೋ ಹರಿದಾಡುತ್ತಿದ್ದರೂ, ಇದರಲ್ಲಿ ಕಂಡುಬರುವ ದೃಶ್ಯ ಆಶ್ಚರ್ಯ ಹುಟ್ಟಿಸುತ್ತದೆ. ಈ ವಿಡಿಯೋ ಈಗ ಕಳೆದೆರಡು […]

ಒಂಟಿ ಮಹಿಳೆ ವಾಸಿಸುತ್ತಿದ್ದ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ ಮಾಡಿದ ಅಪರಿಚಿತ

Friday, October 9th, 2020
Robery

ಮಂಗಳೂರು : ವಿಟ್ಲ ಮೇಗಿನಪೇಟೆಯಲ್ಲಿ ಒಂಟಿ ಮಹಿಳೆ ವಾಸಿಸುತ್ತಿದ್ದ ಮನೆಯೊಂದಕ್ಕೆ ನುಗ್ಗಿ ಅಪರಿಚಿತ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ಶುಕ್ರವಾರ ಬೆಳಗಿನ ಜಾವ  ನಡೆದಿದೆ. ಮೇಗಿನಪೇಟೆ ನಿವಾಸಿ ಲಲಿತಾ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಅವರ ಮನೆಯ ಮುಂಬಾಗಿಲು ಮೂಲಕ ಅಪರಿಚಿತ ನುಗ್ಗಿ ಅವರ ಮೇಲೆ ಹಲ್ಲೆ ನಡೆಸಿ, ಕೃತ್ಯ ಎಸಗಿದ್ದಾನೆ. ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈಕಟ್ಟಿ ಹಾಕಿ ಒಂದು ಜೊತೆ ಕಿವಿಯೋಲೆ ದರೋಡೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ವಿಟ್ಲ ಎಸ್ಐ ವಿನೋದ್ ಕುಮಾರ್ ರೆಡ್ಡಿ ಮತ್ತು […]

ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗದಂತೆ ತಡೆಯಲು ಸಿಸಿ ಕ್ಯಾಮರಾ, ತಂತಿ ಬೇಲಿ : ಶಾಸಕ ವೇದವ್ಯಾಸ್ ಕಾಮತ್

Thursday, April 16th, 2020
Vedavyas-Kamath

ಮಂಗಳೂರು : ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗುತ್ತಿದ್ದು ಅದನ್ನು ತಪ್ಪಿಸಲು ಸೇತುವೆಯ  ಎರಡೂ ಭಾಗಗಳಲ್ಲಿ ತಂತಿ ಬೇಲಿ ಹಾಗೂ ಸಿಸಿ ಟಿವಿ ಅಳವಡಿಕೆ ಕಾಮಗಾರಿಗೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಈ ವಾರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಇದೇ ಮಾತನ್ನು ವರ್ಷದ ಹಿಂದೆ ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡಾಗ 2019 ರ ಸೆಪ್ಟೆಂಬರ್ ತಿಂಗಳಲ್ಲಿಯೂ ಹೇಳಿದ್ದರು. ಬಳಿಕ 2020 ರ ಜನವರಿ ತಿಂಗಳಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿಯು ಪುನರಾವರ್ತಿಸಿದ್ದರು. ಇಂದು ಮಾಧ್ಯಮಕ್ಕೆ ಮಾಹಿತಿ ನೀಡಿದಂತೆ ನೇತ್ರಾವತಿ ಸೇತುವೆಯ ಮೇಲೆ […]

ಉಳ್ಳಾಲ ನೇತ್ರಾವತಿ ಸೇತುವೆಯ ಮೇಲೆ ಶೀಘ್ರವೇ ಸಿಸಿ ಕ್ಯಾಮರಾ ಅಳವಡಿಕೆಗೆ ನಿರ್ಧಾರ : ಶಾಸಕ ವೇದವ್ಯಾಸ್ ಕಾಮತ್

Saturday, January 18th, 2020
kamath

ಮಂಗಳೂರು : ಉಳ್ಳಾಲದ ನೇತ್ರಾವತಿ ನದಿ ಸೇತುವೆಯ ಎರಡೂ ಕಡೆಗಳಲ್ಲಿ ಸುರಕ್ಷತಾ ತಡೆಗೋಡೆ ಅಳವಡಿಕೆಗೆ ಕ್ರಿಯಾ ಯೋಜನೆ ಹಾಗೂ ಸೇತುವೆಯ ಎರಡೂ ಬದಿಗಳಲ್ಲಿ ತಕ್ಷಣವೇ ಸಿಸಿ ಕ್ಯಾಮರಾ ಅಳವಡಿಕೆಗೆ ಶನಿವಾರ ನಡೆದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ವೆಲೆನ್ಸಿಯಾ ಜಂಕ್ಷನ್‌ನಲ್ಲಿರುವ ಪಾರ್ಕನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಡೆಯಿಂದ ತಕ್ಷಣವೇ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ನಗರದ ಸೌಂದರ್ಯ ಹೆಚ್ಚಿಸಲು ಸಹಕಾರಿಯಾಗುವಂತೆ ಪಾರ್ಕ್ ಅಭಿವೃದ್ಧಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ಜಿಲ್ಲಾಧಿಕಾರಿ […]

ಬಂಟ್ವಾಳ : ದೇವಸ್ಥಾನದಲ್ಲಿ ನಗದು ಕಳವು; ಸಿಸಿ ಕ್ಯಾಮರಾದಲ್ಲಿ ಕಳ್ಳರ ಚಲನವಲನ ಸೆರೆ

Thursday, December 26th, 2019
veeara-bhadra-temple

ಬಂಟ್ವಾಳ : ಬಂಟ್ವಾಳ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಕಟ್ಟೆಯ ಸಂಗಬೆಟ್ಟುನಲ್ಲಿರುವ, ಪಣಂಬೂರು ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿದ್ದು, ದೇವಸ್ಥಾನದ ಒಳಗಿರುವ ಕಾಣಿಕೆ ಡಬ್ಬಿ ಕೊಂಡೊಯ್ದ ಘಟನೆ ಸಂಭವಿಸಿದೆ. ಡಿ.25 ರ ಮಧ್ಯರಾತ್ರಿ 2.30 ವೇಳೆ ಘಟನೆ ಸಂಭವಿಸಿದ್ದು, ಕಳ್ಳರ ಚಲನ ವಲನ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಇಬ್ಬರು ವ್ಯಕ್ತಿಗಳು ದೇವಸ್ಥಾನಕ್ಕೆ ಒಳಗೆ ನುಗ್ಗಿದ ಚಿತ್ರ ಸಿ.ಸಿ.ಕ್ಯಾಮಾರದಲ್ಲಿ ಸೆರೆಯಾಗಿದೆ. ಶ್ರೀ ವೀರಭದ್ರ ಹಾಗೂ ಮಹಾಮ್ಮಾಯಿ ದೇವಸ್ಥಾನದ ನವೀಕರಣಗೊಂಡು ಇತ್ತೀಚಿಗೆ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ ನಡೆದಿತ್ತು.‌ […]