ಮಾಜಿ ಅರಣ್ಯ ಸಚಿವ ಸಿ. ಚನ್ನಿಗಪ್ಪ ನಿಧನ

Friday, February 21st, 2020
chinnigappa

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಹಾಗೂ ಜೆಡಿಎಸ್ ಪಕ್ಷದ ಹಿರಿಯ ನಾಯಕ ಸಿ. ಚನ್ನಿಗಪ್ಪ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಬೆಳಗ್ಗೆ 8.30ಕ್ಕೆ ಕೊನೆಯುಸಿರೆಳೆದರು. ಚನ್ನಿಗಪ್ಪ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಧರಂಸಿಂಗ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದರು. ಅಷ್ಟೇ ಅಲ್ಲದೇ ಎಚ್. ಡಿ.ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ಅರಣ್ಯ ಸಚಿವರಾಗಿದ್ದರು. ಇಂದು ಸಂಜೆ ಚನ್ನಿಗಪ್ಪ ಅವರ ಅಂತ್ಯಸಂಸ್ಕಾರ ನಡೆಯುವ ಸಾಧ್ಯತೆ ಇದೆ. […]