ಗದಗ ಉಸ್ತುವಾರಿ ಸಚಿವರಿಂದ ನರಗುಂದ ನಗರ ಪ್ರದಕ್ಷಿಣೆ

Monday, May 24th, 2021
CC Pateel

ಗದಗ : ರಾಜ್ಯ ಸಣ್ಣ ಕೈಗಾರಿಕೆ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಸೋಮವಾರ ನರಗುಂದ ನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಲಾಕ್ ಡೌನ್ ಸಮಯದ ಸ್ಥಿತಿಗತಿಯ ವೀಕ್ಷಣೆ ಮಾಡಿದರು. ಕೊರೋನಾ ಸಮಯದ ಲಾಕ್‌ಡೌನ್ ಕಠಿಣ ಸಂದರ್ಭವಾಗಿದ್ದು, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಜನರ ಜೀವಹಾನಿ ತಪ್ಪಿಸಲು ಲಾಕ್ ಡೌನ್ ಅನಿವಾರ್ಯವಾಗಿದೆ. ಕೋವಿಡ್ ನಿಯಮಾವಳಿಗಳನ್ನು ಸಾರ್ವಜನಿಕರು ಸರಿಯಾಗಿ ಪಾಲಿಸುವ ಮೂಲಕ ಸಹಕರಿಸಿ, ಸುರಕ್ಷಿತವಾಗಿರಿ […]

ಫೆ.18 ರಿಂದ ರಾಷ್ಟ್ರೀಯ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‍ಶಿಫ್ ಸ್ಪರ್ದೆ

Monday, February 15th, 2021
cycle

ಹುಬ್ಬಳ್ಳಿ : 17ನೇ ರಾಷ್ಟ್ರೀಯ ಮೌಂಟೇನ್ ಸಿನಿಯರ್, ಜ್ಯೂನಿಯರ್ ಮತ್ತು ಸಬ್ ಜ್ಯೂನಿಯರ್ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‍ಶಿಫ್ ಸ್ಪರ್ಧೆಯನ್ನು ಫೆ.18 ರಿಂದ 21 ರವರೆಗೆ ಗದಗ ಜಿಲ್ಲೆಯ ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ ಎಂದು ಸಣ್ಣ ಕೈಗಾರಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ರವಿವಾರ ಹೇಳಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ರಾಷ್ಟೀಯ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್‍ಶಿಫ್ ಸ್ಪರ್ಧೆಯ ಲೋಗೊ ಬಿಡುಗಡೆಗೊಳಿಸಿ ಮಾತನಾಡಿದರು. 17ನೇ ರಾಷ್ಟೀಯ ಮೌಂಟೇನ್ ಸಿನಿಯರ್, […]

ಸಚಿವರಿಂದ ತಾಲ್ಲೂಕಾ ಆಸ್ಪತ್ರೆಯ ಹೈಟೆಕ್ ಲ್ಯಾಬ್, 50 ಆಕ್ಸಿಜನ್ ಬೆಡ್ ಲೋಕಾರ್ಪಣೆ

Tuesday, September 22nd, 2020
Taluk Hospital

ನರಗುಂದ : ನರಗುಂದ ನಗರದಲ್ಲಿನ ಬಾಬಾಸಾಹೇಬ ಭಾವೆ ತಾಲೂಕಾ ಸರ್ಕಾರಿ ಆಸ್ಪತ್ರೆಯಲ್ಲಿ ನೂತನವಾದ ಹೈಟೆಕ್ ಲ್ಯಾಬ್, ಸುಸಜ್ಜಿತವಾದ 50 ಆಕ್ಸಿಜನ್ ಬೆಡ್ ನಿರ್ವಹಣಾ ಕೇಂದ್ರ ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಸಚಿವರು, ಕೋವಿಡ್ ಸೋಂಕು ನಿಯಂತ್ರಿಸಲು ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು. ಸಾಮಾಜಿಕ ಅಂತರ ಮಾಸ್ಕ್ ಧರಿಸುವಿಕೆಯೇ […]

ಫೋನ್ ಕದ್ದಾಲಿಕೆ ಕುರಿತು ಎಚ್.ಡಿ. ಕುಮಾರಸ್ವಾಮಿಗೆ ಸಚಿವ ಸಿ.ಸಿ ಪಾಟೀಲ ತಿರುಗೇಟು

Friday, September 27th, 2019
phone-kaddalike

ವಿಜಯಪುರ : ಎಲ್ಲ ಸರಕಾರಗಳೂ ಫೋನ್ ಕದ್ದಾಲಿಕೆ ಮಾಡುತ್ತವೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಾಲಿಶತನದಿಂದ ಕೂಡಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ತಿರುಗೇಟು ನೀಡಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಎಲ್ಲಾ ಸರ್ಕಾರದಲ್ಲಿಯೂ ಪೋನ್ ಕದ್ದಾಲಿಕೆ ನಡೆಯತ್ತದೆ ಎಂದು ನೀಡಿದ ಹೇಳಿಕೆಯನ್ನು ಗಮನಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ಆಗಿರುವ ಅವರಿಗೆ ಇಂಥ ಹೇಳಿಕೆ ಶೋಭೆ ತರುವುದಿಲ್ಲ. ಯಾರದೇ ಪೋನ್ ಟ್ಯಾಪಿಂಗ್ ಮಾಡುವುದು ಕಾನೂನು ಪ್ರಕಾರ ಅಪರಾಧ […]