ಉಸ್ತುವಾರಿ ಸಚಿವರ ಸೀಮೆಎಣ್ಣೆ ಮುಕ್ತ ನಗರ ಅವಾಸ್ತವಿಕ DYFI

Wednesday, September 17th, 2014
Rai

ಮಂಗಳೂರು : ಮಂಗಳೂರು ನಗರವನ್ನು ನವೆಂಬರ್ ಒಂದರಿಂದ ಸೀಮೆಎಣ್ಣೆ ಮುಕ್ತ ನಗರವನ್ನಾಗಿ ಘೋಷಿಸಲಾಗುವುದು ಎಂಬ ಉಸ್ತುವಾರಿ ಸಚಿವರ ಹೇಳಿಕೆಯನ್ನು ಅವಾಸ್ತವಿಕ ಎಂದು DYFI ನಗರ ಸಮಿತಿ ಹೇಳಿದೆ. ಮಂಗಳೂರು ನಗರದಲ್ಲಿ ವಾಸಿಸುವ ಕಡುಬಡವರಿಗೆ ಬ್ಯಾಂಕ್ ಸಾಲದ ಮೂಲಕ ಅಡುಗೆ ಅನಿಲ ಸಂಪರ್ಕವನ್ನು ಬಲವಂತವಾಗಿ ನೀಡುವುದು, ಹಾಗೆಯೇ ವಾಸ್ತವ್ಯ ದಾಖಲೆ ಗುರುತು ಚೀಟಿ ಇದ್ದವರಿಗಷ್ಟೇ ಅಡುಗೆ ಸಂಪರ್ಕ ನೀಡುತ್ತೇವೆ. ಅದಕ್ಕಾಗಿ ಪ್ರತ್ಯೇಕ ಕೌಂಟರ್ಗಳನ್ನು ತೆರೆಯುತ್ತೇವೆ ಅನ್ನುವ ಮಾತುಗಳು ಆಡಳಿತದ ಬಾಲಿಶತನವನ್ನು ಎತ್ತಿ ತೋರಿಸುತ್ತಿದೆ. ಇನ್ನು ಪ್ರತಿಯೊಬ್ಬರಿಗೂ ಪಡಿತರ ಚೀಟಿ […]