ವಿಶೇಷ ಚೇತನ ಮಕ್ಕಳಿಗೆ ದಾನಿಗಳು ನೀಡಿದ ಹಣ ನೀಡುವಂತೆ ಪೀಡಿಸಿ ಮಗನಿಂದ ತಂದೆಯ ಕೊಲೆ

Saturday, May 29th, 2021
Sundara Poojary

ಚಿಕ್ಕಮಗಳೂರು: ಲಾಕ್ ಡೌನ್ ಹೇರಿರುವ ಹಿನ್ನೆಲೆಯಲ್ಲಿ ಆದಾಯವಿಲ್ಲದೆ  ಮನೆಗೆ ಬಂದು ತಾನು ಕೇಳಿದಾಗ ಹಣ ನೀಡಿಲ್ಲವೆಂದು ಸಿಟ್ಟಿಗೆದ್ದ ಹಿರಿಯ ಮಗ ತಂದೆಯನ್ನೇ ಕೊಲೆಗೈದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆಯ ಚನ್ನಡ್ಲುವಿನಲ್ಲಿ ನಡೆದಿದೆ. ಸುಂದರ ಪೂಜಾರಿ (52) ಮೃತ ದುರ್ದೈವಿ. ಈ ಘಟನೆ ಮೂಡಿಗೆರೆ ತಾಲೂಕಿನ ಚನ್ನಡ್ಲುವಿನಲ್ಲಿ ನಡೆಡಿದ್ದು ಇವರನ್ನು ಹಿರಿಯ ಮಗ ನಿಖೇಶ್ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸುಂದರ ಪೂಜಾರಿಯವರು ಪಾರ್ಶ್ವವಾಯು ಪೀಡಿತರಾಗಿದ್ದು,  ಇಬ್ಬರು ವಿಶೇಷ ಚೇತನ ಮಕ್ಕಳು ಮತ್ತು ಪತ್ನಿಯೊಂದಿಗೆ ಅವರು ವಾಸವಾಗಿದ್ದು, ದಾನಿಗಳು ಅವರಿಗೆ ನೆರವು ನೀಡಿದ್ದರಿಂದ ಲಕ್ಷಾಂತರ ರೂ. ಸಂಗ್ರಹವಾಗಿದೆ. […]

ಮತ್ತೆ ಕುಸಿದು ಬಿದ್ದ ದ.ಕ. ಜಿಲ್ಲಾ ಮಹಿಳಾ-ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ

Monday, January 29th, 2018
sundar-poojary

ಮಂಗಳೂರು: ದ.ಕ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ ಅವರು ಉಪ ಲೋಕಾಯುಕ್ತರ ವಿಚಾರಣೆ ವೇಳೆ ಮಾಹಿತಿ ನೀಡುತ್ತಿದ್ದಾಗ ಹಠಾತ್ ಕುಸಿದು ಬಿದ್ದ ಘಟನೆ ನಡೆದಿದೆ. ದ.ಕ. ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ. ಅಡಿ ಅವರು ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಸಾರ್ವಜನಿಕರ ಅಹವಾಲಿಗೆ ಸಂಬಂಧಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ […]

ಉಗ್ರಪ್ಪ ಸಭೆಯಲ್ಲಿ ಕುಸಿದು ಬಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಂದರ ಪೂಜಾರಿ

Wednesday, August 2nd, 2017
Sundar Poojary

ಮಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಸುಂದರ ಪೂಜಾರಿಯವರು ಆಸನದಲ್ಲಿ ಕುಳಿತಿದ್ದಲ್ಲಿಂದಲೇ ಕುಸಿದು ಅಸ್ವಸ್ಥರಾದ ಘಟನೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಗ್ರಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಮತ್ತೆ  ನಡೆದಿದೆ. ತಕ್ಷಣ ಪೊಲೀಸ್ ಆಯುಕ್ತರಾದ ಟಿ.ಆರ್. ಸುರೇಶ್, ಜಿಲ್ಲಾಧಿಕಾರಿ ಕೆ.ಜಿ. ಜಗದೀಶ್, ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ, ಡಿಸಿಪಿ ಶಾಂತರಾಜು ಮೊದಲಾದವರು ಅಸ್ವಸ್ಥರಾದ ಸುಂದರ ಪೂಜಾರಿಯವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು. 2016ರ ಜನವರಿ 23ರಂದು ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಇದೇ […]