ನವೆಂಬರ್ 5 ರಂದು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿರುವ ಮುಖ್ಯಮಂತ್ರಿ

Tuesday, November 3rd, 2020
Karyakarini

ಮಂಗಳೂರು : ನವೆಂಬರ್ 5 ರಂದು ಮಂಗಳೂರಿನಲ್ಲಿ ನಡೆಯಲಿರುವ  ಬಿಜೆಪಿಯ ವಿಶೇಷ ಕಾರ್ಯಕಾರಿ ಸಭೆಯನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸರುವರು ಎಂದು,  ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಮಂಗಳೂರು ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು,  ಟಿ ವಿ ರಮಣ್ ಪೈ ಹಾಲ್‌ನಲ್ಲಿ ನಡೆಯಲಿರುವ ಬಿಜೆಪಿಯ ವಿಶೇಷ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನವೆಂಬರ್ 4 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ” ಎಂದು  ಅವರು ಮಾಹಿತಿ ನೀಡಿದರು. ಸಿಎಂ ಯಡಿಯೂರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು […]

ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮಾತೃ ವಿಯೋಗ

Wednesday, August 12th, 2020
kasturi

ಮೂಡಬಿದ್ರೆ : ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಯವರ ಮಾತೃಶ್ರೀ ಕಸ್ತೂರಿ 63 ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ 5.45 ಕ್ಕೆ ಮುಡಬಿದ್ರೆ ಸ್ವರಾಜ್ ಮೈದಾನಿನ ಸಮೀಪವಿರುವ ಅವರ ಮನೆಯಲ್ಲಿ ನಿಧನರಾದರು. ರಮೇಶ್ ಶಾಂತಿ ಮತ್ತು ಕಸ್ತೂರಿ ದಂಪತಿಗಳಿಗೆ 6 ಜನ ಮಕ್ಕಳು ನಾಲ್ಕು ಗಂಡು ಮತ್ತು ಎರಡು  ಹೆಣ್ಣು, ಸುದರ್ಶನ್ ಮೊದಲನೆಯವರು. ರಮೇಶ್ ಶಾಂತಿ ಸ್ವರಾಜ್ ಮೈದಾನ ಅಯ್ಯಪ್ಪ ಗುಡಿಯಲ್ಲಿ ಅರ್ಚಕರಾಗಿದ್ದರೆ ನಾಳೆ ಆಗಸ್ಟ್ 13 ರಂದು ಅಂತ್ಯಕ್ರಿಯೆ ನಡೆಯಲಿದ್ದು, ಬೆಳಿಗ್ಗೆ 7 ರಿಂದ 9.30 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ […]

ಮೀಜಾರ್ ಸಮೀಪ ಬಿಜೆಪಿ ಜಿಲ್ಲಾಧ್ಯಕ್ಷರ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ

Wednesday, July 1st, 2020
sudarshan-car

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆಯವರ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂ ಗೊಂಡ ಘಟನೆ ಬುಧವಾರ ಮಧ್ಯಾಹ್ನಮೀಜಾರ್ ಸಮೀಪ ನಡೆದಿದೆ. ಕಾರನ್ನು ಸುದರ್ಶ ಅವರೇ ಚಲಾಯಿಸಿದ್ದು, ಘಟನೆಯಲ್ಲಿ ಸುದರ್ಶನ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಿಜಾರ್ ಸಮೀಪ ಪಾದಚಾರಿಗೆ ಕಾರ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ ವೇಳೆ ರಸ್ತೆ ಪಕ್ಕ ಕೆಸರಿಗೆ ಜಾರಿದ ಕಾರ್ ಮುಂಭಾಗದಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮೂಡಬಿದ್ರೆ ಠಾಣಾ ಪೊಲೀಸರು ಭೇಟಿಕೊಟ್ಟು […]