ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ

Thursday, October 11th, 2018
kumarswamy

ಮೈಸೂರು: ಕರ್ನಾಟಕ ಸರ್ಕಾರ ಭೂಮಿ ನೀಡಿದರೆ ಇನ್ಫೋಸಿಸ್ ವತಿಯಿಂದ ಕೊಡಗು ಜಿಲ್ಲೆಯ ಪ್ರವಾಹ ಪೀಡಿತರಿಗೆ ವಸತಿ ಕಲ್ಪಿಸಿಕೊಡಲಾಗುವುದು ಎಂದು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ತಿಳಿಸಿದ್ದಾರೆ. ಅವರು ಇಂದು ಬೆಳಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿ ಚಾಮುಂಡಿಗೆ ಪುಷ್ಪಾರ್ಚನೆ ಸಲ್ಲಿಸಿ 9 ದಿನಗಳ ನವರಾತ್ರಿ ಹಾಗೂ 10ನೇ ದಿನ ವಿಜಯದಶಮಿಯ ನಾಡಹಬ್ಬಕ್ಕೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಮಾಡುವ ಯಾವುದೇ ಕೆಲಸದಲ್ಲಿ ನಾವು ಕೈಜೋಡಿಸುವುದು ನಮ್ಮ ಕೆಲಸವಾಗಿದೆ, ನಮಗೆ ಸಮಾಜದಿಂದ ಸಿಕ್ಕಿದ ಹಣ ಮತ್ತೆ ಸಮಾಜಕ್ಕೆ […]