ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನ ತಿರುವಾಂಕೂರು ರಾಜನಮನೆತನಕ್ಕೆ ಸೇರಿದ್ದು ಸುಪ್ರೀಂ ಕೋರ್ಟ್ ತೀರ್ಪು

Monday, July 13th, 2020
Triuvankuru

ಹೊಸದಿಲ್ಲಿ: 18ನೇ ಶತಮಾನದ ಕೇರಳದ ಐತಿಹಾಸಿಕ, ಶ್ರೀಮಂತ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನದ ಸಂಪತ್ತು ಮತ್ತು ಆಡಳಿತದ ಹಕ್ಕು ತಿರುವಾಂಕೂರು ರಾಜನಮನೆತನಕ್ಕೆ ಸೇರಿದ್ದು ಎಂಬುದಾಗಿ ಸುಪ್ರೀಂ ಕೋರ್ಟ್‌ ಸೋಮವಾರ ಮಹತ್ವದ ತೀರ್ಪುನೀಡಿದೆ. ಕೇರಳ ಹೈಕೋರ್ಟ್‌ 2011ರಲ್ಲಿ ದೇವಸ್ಥಾನದ ಆಡಳಿತ ಮತ್ತು ಸಂಪತ್ತಿನ ನಿರ್ವಹಣೆಗಾಗಿ ಟ್ರಸ್ಟ್‌ ಸ್ಥಾಪಿಸುವಂತೆ ರಾಜ್ಯ ಸರಕಾರಕ್ಕೆ ನೀಡಿದ್ದ ನಿರ್ದೇಶನವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಪದ್ಮನಾಭಸ್ವಾಮಿ ದೇವಸ್ಥಾನ ವಿಶ್ವದಲ್ಲಿಯೇ ಅತೀ ಶ್ರೀಮಂತ ದೇವಾಲಯ ಎಂಬ ಹೆಗ್ಗಳಿಕೆ ಹೊಂದಿದ್ದು, ಕೆಲವು ವರ್ಷಗಳ ಹಿಂದೆ ಲೆಕ್ಕ ಹಾಕಿದಾಗ ಸುಮಾರು 90 ಸಾವಿರ […]

ಮೀಸಲಾತಿ ಗೊಂದಲಕ್ಕೆ ಕೇಂದ್ರ ಕಾರಣ : ಕಾಂಗ್ರೆಸ್ ಆರೋಪ; ಫೆ.16 ರಂದು ಮಡಿಕೇರಿಯಲ್ಲಿ ಪ್ರತಿಭಟನೆ

Friday, February 14th, 2020
manjunath

ಮಡಿಕೇರಿ : ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸದೆ ಇರುವುದರಿಂದಲೇ ಈ ರೀತಿಯ ತೀರ್ಪು ಹೊರ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ಫೆ16 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ […]

ಹಿಂಸಾಚಾರ ನಿಂತ ಬಳಿಕವೇ ವಿಚಾರಣೆ : ಸಿಎಎ ಮೇಲ್ಮನವಿ ಬಗ್ಗೆ ಸುಪ್ರೀಂಕೋರ್ಟ್

Thursday, January 9th, 2020
SC

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಸಿಂಧುತ್ವ ಪ್ರಶ್ನಿಸಿ ಹಾಗೂ ಸಿಎಎ ಸಂವಿಧಾನಬದ್ಧ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂಸಾಚಾರ ನಿಂತ ಬಳಿಕವೇ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಗುರುವಾರ ತಿಳಿಸಿದೆ. ದೇಶ ಪ್ರಸ್ತುತ ಸಂದಿಗ್ಧ ಕಾಲಘಟ್ಟದಲ್ಲಿದೆ. ಇಂತಹ ಮೇಲ್ಮನವಿಗಳಿಂದ ಸಹಾಯವಾಗಲ್ಲ. ಹೀಗಾಗಿ ಹಿಂಸಾಚಾರ ನಿಂತ ನಂತರವೇ ಸಿಎಎ ಕುರಿತ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎಸ್ ಎ ಬೋಬ್ಡೆ ಹೇಳಿದರು. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಸಂವಿಧಾನಬದ್ಧ ಎಂದು ಘೋಷಿಸಬೇಕು. ಅಲ್ಲದೇ ಕಾನೂನಿನ ಕುರಿತು ಪ್ರತಿಭಟನೆ […]

ಶಬರಿಮಲೆ ವಿವಾದ : ಜ.13 ರಿಂದ ಸುಪ್ರೀಂಕೋರ್ಟ್​​ನಲ್ಲಿ ಸಾಂವಿಧಾನಿಕ ಪೀಠ ವಿಚಾರಣೆ

Tuesday, January 7th, 2020
SC

ನವದೆಹಲಿ : ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಬೇಕೇ ಬೇಡವೇ ಎನ್ನುವ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ಜನವರಿ 13ನೇ ತಾರೀಕಿನಿಂದ ಅಂತಿಮ ವಿಚಾರಣೆ ಆರಂಭವಾಗಲಿದೆ. ಸುಪ್ರೀಂಕೋರ್ಟ್ನ 9 ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ವಿಚಾರಣೆ ನಡೆಸಲಿದೆ. ಇದೇ ವೇಳೆ ಮುಸ್ಲಿಂ ಮತ್ತು ಪಾರ್ಸಿ ಸುಮಾಯದ ಮಹಿಳೆಯರ ತಾರತಮ್ಯದ ಬಗ್ಗೆಯೂ ವಿಚಾರಣೆ ಮಾಡಲಿದೆ. ಈ ಹಿಂದೆ ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಕುರಿತು ಸುಪ್ರೀಂಕೋರ್ಟ್ ತನ್ನ ತೀರ್ಮಾನ ಪ್ರಕಟಿಸಿತ್ತು. ಈ ಪ್ರಕರಣವನ್ನು […]

105 ದಿನಗಳ ಜೈಲುವಾಸ ಅಂತ್ಯ : ಪಿ.ಚಿದಂಬರಂ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು

Wednesday, December 4th, 2019
Chidambaram

ನವದೆಹಲಿ : ಐಎನ್ ಎಕ್ಸ್ ಮೀಡಿಯಾ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 105 ದಿನಗಳಿಂದ ಜೈಲು ಶಿಕ್ಷೆ ಅನುಭವಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಬುಧವಾರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾ.ಭಾನುಮತಿ ನೇತೃತ್ವದ ತ್ರಿಸದಸ್ಯ ಪೀಠ ಚಿದಂಬರಂಗೆ ಷರತ್ತು ಬದ್ಧ ಜಾಮೀನು ನೀಡಿದೆ. ಸಾರ್ವಜನಿಕ ಹೇಳಿಕೆ, ಸಂದರ್ಶನ ನೀಡದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಪಾಸ್ ಪೋರ್ಟ್ ಪೊಲೀಸರ ವಶಕ್ಕೆ ಒಪ್ಪಿಸಬೇಕು, ಇಬ್ಬರ ಶ್ಯೂರಿಟಿ ಹಾಗೂ 2 ಲಕ್ಷ […]

ಶಬರಿಮಲೆ ವಿವಾದ : ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂಕೋರ್ಟ್

Thursday, November 14th, 2019
Shabari-Male

ನವದೆಹಲಿ : ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ 2018ರ ಸೆಪ್ಟಂಬರ್ 28ರಂದು ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಗುರುವಾರ ಅಂಗೀಕರಿಸಿದ್ದು, ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಆದೇಶ ನೀಡಿದೆ. ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ಅವರು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ಸಲ್ಲಿಕೆಯಾದ ಮರುಪರಿಶೀಲನೆ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. 3:2 ಬಹುಮತದಿಂದ ಪಂಚಸದಸ್ಯ ಪೀಠ ಪೂರ್ಣಪೀಠಕ್ಕೆ ನೀಡಿದೆ. ತೀರ್ಪು ಹಿಂದೂ ಮಹಿಳೆಯರಿಗೆ […]

ಸುಪ್ರೀಂಕೋರ್ಟಿನಲ್ಲಿ ಇಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ

Wednesday, November 13th, 2019
Anarha-shasakaru

ನವದೆಹಲಿ : ಇಂದು ಸುಪ್ರೀಂ ಕೋರ್ಟಿನಲ್ಲಿ ಅನರ್ಹ 17 ಮಂದಿ ಶಾಸಕರ ಅರ್ಜಿ ವಿಚಾರಣೆ ನಡೆಯಲಿದೆ. ರಾಷ್ಟ್ರ ರಾಜಕಾರಣಕ್ಕೆ ಮಹತ್ವದ ದಿನವಾಗಿದೆ. ರಾಜಕೀಯ ಇತಿಹಾಸದಲ್ಲಿಯೂ ಮೈಲುಗಲ್ಲಾಗಿ ಉಳಿಯುವ ದಿನ. ಅನರ್ಹತೆ ಪಟ್ಟ ಹೊತ್ತ 17 ಮಂದಿ ಶಾಸಕರ ಭವಿಷ್ಯ ನಿರ್ಧಾರ ಆಗುವ ದಿನ. ಅನರ್ಹ ಶಾಸಕರ ಅಂತಿಮ ತೀರ್ಪಿಗೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಇಂದು 17 ಮಂದಿ ಅನರ್ಹ ಶಾಸಕರ ಭವಿಷ್ಯ ನಿರ್ಧಾರ ಆಗಲಿದೆ. ಸ್ಪೀಕರ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಪ್ರಕಟ ಆಗಲಿದೆ. […]

ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಭರವಸೆ ನೀಡಿದ ನಳಿನ್ ಕುಮಾರ್ ಕಟೀಲ್

Thursday, October 3rd, 2019
nalin-kumar

ಬೆಂಗಳೂರು : ಉಪ ಚುನಾವಣೆ ಟಿಕೆಟ್ ನೀಡುವ ಕುರಿತು ಅಮಿತ್ ಶಾ, ಯಡಿಯೂರಪ್ಪ ಮತ್ತು ನಾನು ಕುಳಿತು ಚರ್ಚೆ ನಡೆಸುತ್ತೇವೆ ಯಾವುದೇ ಕಾರಣಕ್ಕೂ ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಏನೇ ಬಂದರೂ ಅನರ್ಹ ಶಾಸಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಕಟೀಲ್ ಧೈರ್ಯ ಹೇಳಿದ್ದಾರೆ. ಕಳೆದ ಎಂಟು ದಿನಗಳಿಂದ ಮುಖ್ಯಮಂತ್ರಿ ಹಾಗೂ ನಾನು ಪ್ರವಾಸದಲ್ಲಿದ್ದೆವು, ಹಾಗಾಗಿ ಪರಸ್ಪರ ಭೇಟಿ […]

ಸುಪ್ರೀಂಕೋರ್ಟ್ ನಲ್ಲಿ ಅನರ್ಹ‌ ಶಾಸಕರಿಗೆ ನ್ಯಾಯ ಸಿಗುವ ವಿಶ್ವಾಸವಿದೆ : ಕೆ.ಎಸ್.ಈಶ್ವರಪ್ಪ

Saturday, September 28th, 2019
eshwarappa

ಶಿವಮೊಗ್ಗ : ಸುಪ್ರೀಂಕೋರ್ಟ್ ಅನರ್ಹ ಶಾಸಕರ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತದೆಯೋ ಯಾರಿಗೂ ಗೊತ್ತಿಲ್ಲ. ಅವರು ಅನರ್ಹರು ಅಂತ ನಾನಲ್ಲ, ದೇವರೇ ಬಂದು ಹೇಳಿದರೂ ಆಗಲ್ಲ. ಅದನ್ನು ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು‌ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಹೇಳಿದರು. ಸುಪ್ರೀಂಕೋರ್ಟ್ ಅಂದಿನ‌ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶಾಸಕರ ರಾಜೀನಾಮೆ ಅಂಗೀಕಾರ ಮಾಡ್ತೀರಾ, ಇಲ್ಲ ತಿರಸ್ಕಾರ ಮಾಡ್ತೀರಾ ಅಂತ ಕೇಳಿತ್ತು. ಆದ್ರೆ ರಮೇಶ್ ಕುಮಾರ್ ಎರಡನ್ನು ಬಿಟ್ಟು‌ ಸಿದ್ದರಾಮಯ್ಯನವರ ಮಾತು ಕೇಳಿ ಶಾಸಕರನ್ನು ಅನರ್ಹರನ್ನಾಗಿ […]

17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಸುಪ್ರೀಂಕೋರ್ಟ್

Wednesday, September 25th, 2019
supreem-court

ನವದೆಹಲಿ : ಕಾಂಗ್ರೆಸ್ ಮತ್ತು ಜೆಡಿಎಸ್ ನ 17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಗುರುವಾರಕ್ಕೆ ಮುಂದೂಡಿದೆ. ಬುಧವಾರ ಅನರ್ಹ ಶಾಸಕರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು ಒಂದೂವರೆ ಗಂಟೆಗಳ ಕಾಲ ವಾದ ಮಂಡಿಸಿದ್ದರು. ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಸ್ಪೀಕರ್ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅನರ್ಹ ಶಾಸಕ ಡಾ.ಸುಧಾಕರ್ ಪರ ಸುಂದರಂ ವಾದ ಮಂಡಿಸಿದ್ದರು. ವಾದ, ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್ ನ ನ್ಯಾ.ಎನ್ ವಿ ರಮಣ್ […]