ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಕುಕ್ಕೆ ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯಾ ಶಿಕ್ಷಕ ಬಂಧನ

Sunday, August 8th, 2021
Gururaj

ಸುಬ್ರಹ್ಮಣ್ಯ :  ವಿದ್ಯಾರ್ಥಿನಿಯ ಮೇಲೆ  ಲೈಂಗಿಕ ದೌರ್ಜನ್ಯ ಆರೋಪದಡಿ ಶಿಕ್ಷಕನೊಬ್ಬ ಬಂಧನಕ್ಕೊಳಗಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ರಾಯಚೂರು ಮೂಲದ ಗುರುರಾಜ್ ಬಂಧಿತ ವ್ಯಕ್ತಿ. ಕುಕ್ಕೆ ಸುಬ್ರಹ್ಮಣ್ಯ ಶಿಕ್ಷಣ ಸಂಸ್ಥೆಯೊಂದರ ಪ್ರೌಢಶಾಲಾ ವಿಭಾಗದ ಶಿಕ್ಷಕನಾಗಿರುವ ಈತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಶಾಲಾ ಶಿಕ್ಷಕನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದು, ಫೋಕ್ಸೊ ಪ್ರಕರಣ ದಾಖಲಿಸಿದ್ದಾರೆ.

ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ವಾಹನ ಸವಾರರನ್ನು ಓಡಿಸಿದ ಕಾಡಾನೆ

Sunday, July 11th, 2021
Elephant

ಕಡಬ :   ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಭಾನುವಾರ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ ಎಂದು ತಿಳಿದು ಬಂದಿದೆ.

ಸುಬ್ರಹ್ಮಣ್ಯ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಸಾವು

Monday, May 31st, 2021
Prathiksha

ಸುಬ್ರಹ್ಮಣ್ಯ:  ಸುಬ್ರಹ್ಮಣ್ಯ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು  ಆರೋಗ್ಯದಲ್ಲಿ ದಿಢೀರ್ ಏರುಪೇರುಗೊಂಡ  ಬೆಂಗಳೂರಿನಲ್ಲಿ ಮೃತರಾದರು. ಮಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಯಾಗಿರುವ ಕಡಬ ತಾಲೂಕಿನ ಐನೆಕಿದು ಗ್ರಾಮದ ಕೂಜುಗೋಡು ಕಟ್ಟೆಮನೆ ಮನೆತನದ ಬೆಂಗಳೂರಿನ ಉದ್ಯಮಿ ದಿನೇಶ್ ಕೆ. ಅವರ ಪುತ್ರಿ ಪ್ರತೀಕ್ಷಾ(21) ಬೆಂಗಳೂರಿನಲ್ಲಿ ನಿಧನರಾದರು. ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಪ್ರತೀಕ್ಷಾ ಬೆಂಗಳೂರಿನ ಮನೆಗೆ ಹೋಗಿದ್ದರು. ರಕ್ತದೊತ್ತಡ ಕುಸಿತಕ್ಕೊಳಗಾಗಿ  ಅಸೌಖ್ಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ  ನಿಧನರಾದರು. ಅವರು ತಂದೆ, ತಾಯಿ, ಸಹೋದರಿ ಹಾಗೂ ಸಹೋದರನನ್ನು ಅಗಲಿದ್ದಾರೆ. […]

ಸಚಿವರ ಅಭಿನಂದನಾ ಸಮಾರಂಭಕ್ಕೆ ತೆರಳುತ್ತಿದ್ದ ರಿಟ್ಜ್ ಕಾರು ಢಿಕ್ಕಿ, ಓರ್ವ ಮೃತ್ಯು

Sunday, January 24th, 2021
Naveen Martiz

ಕಡಬ : ಸಚಿವ ಅಂಗಾರರಿಗೆ ಅಭಿನಂದನಾ ಸಮಾರಂಭಕ್ಕೆ ತೆರಳುತ್ತಿದ್ದ  ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಜನವರಿ  24 ರ ಭಾನುವಾರ ನಡೆದಿದೆ. ಮೃತಪಟ್ಟವರನ್ನು ರಿಟ್ಜ್ ಕಾರು ಚಾಲಕ ಅಲಂಗೇರಿ ಹೊಸ್ಮಠದ  ನವೀನ ಮಾರ್ಟಿಜ್ (30) ಎಂದು ಗುರುತಿಸಲಾಗಿದೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಬರುತ್ತಿದ್ದ ರಿಟ್ಝ್ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ವಾಹನಕ್ಕೆ ಢಿಕ್ಕಿಯಾಗಿ […]

ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಗರ್ಭಪಾತ ಮಾಡಿಸಿದ ಯುವಕ

Tuesday, January 19th, 2021
Rakshith

ಸುಬ್ರಹ್ಮಣ್ಯ: ಫೇಸ್‌ಬುಕ್ ಮೂಲಕ ಪರಿಚಯವಾಗಿ ಯುವತಿಯನ್ನು ಮದುವೆಯಾಗುವುದಾಗಿ  ನಂಬಿಸಿ  ದೈಹಿಕ ಸಂಪರ್ಕ ಬೆಳೆಸಿ ಗರ್ಭಪಾತ ಮಾಡಿಸಿ ದ್ದಾನೆಂದು ಯುವತಿ ದೂರು ನೀಡಿದ್ದಾಳೆ. ಕಡಬ ತಾಲೂಕಿನ ಸುಬ್ರಹ್ಮಣ್ಯದ ರಕ್ಷಿತ್ ಎಂಬಾತ  ಮದುವೆಯಾಗುವ ಭರವಸೆ ನೀಡಿ ತನ್ನನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆಕೆ ಹೇಳಿದ್ದು, ಗರ್ಭಪಾತ ಸಹ ಮಾಡಿಸಿದ್ದಾನೆ ಎಂದು ತಿಳಿಸಿದ್ದಾನೆ. ಆದರೆ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡುತ್ತಿದ್ದಾನೆಂದು ತುಮಕೂರಿನ ವಸಂತಾ ಎಂಬ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿ ನೀಡಿರುವ ದೂರಿನ ಆಧಾರದ ಮೇರೆಗೆ ಕ್ರಮ ಕೈಗೊಂಡ […]

ವಿಷವುಣಿಸಿ ತಂದೆಯನ್ನು ಕೊಲ್ಲಲು ಮುಂದಾದ ಮಕ್ಕಳು

Sunday, July 26th, 2020
sullia

ಸುಳ್ಯ : ಸಾಕಿ ಬೆಳೆಸಿದ ಮಕ್ಕಳೇ ತಂದೆಯನ್ನು ವಿಷ ಹಾಕಿ ಕೊಲ್ಲಲು ಯೋಚಿಸುತ್ತಾರೆಂದರೆ ಅವರ  ಮನಸ್ಥಿತಿ ಹೇಗಿರಬೇಕು ನೀವೇ ಯೋಚಿಸಿ, ಸುಳ್ಯ ತಾಲೂಕಿನ  ನಾಲ್ಕೂರು ಗ್ರಾಮದ ಅಂಜೇರಿ ಎಂಬಲ್ಲಿ ಮಕ್ಕಳಿಬ್ಬರು ಸೇರಿ ಆಹಾರಕ್ಕೆ ವಿಷ ಬೆರೆಸಿ ತಂದೆಯ ಹತ್ಯೆಗೆ ಮುಂದಾದ ಘಟನೆಯೊಂದು ಜು.24 ರ ಗುರುವಾರ ನಡೆದಿದೆ. ಮಕ್ಕಳಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬಿಬ್ಬರು ತಂದೆಗೆ ವಿಷವುಣಿಸಿದ್ದು, ತಂದೆ, ಹೊನ್ನಪ್ಪ ನಾಯ್ಕ ಅಂಜೇರಿ ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥಗೊಂಡ ವ್ಯಕ್ತಿ.  ಪೊಲೀಸರು ಮಕ್ಕಳನ್ನು  ವಶಕ್ಕೆ ಪಡೆದಿದ್ದಾರೆ. ಪುತ್ರ ಲೊಕೇಶ್ […]

ಸುಳ್ಯದಲ್ಲಿ ಭಾರಿ ಗಾಳಿ ಮಳೆ : ಮರ ಬಿದ್ದು ಕಾರು ಸ್ಕೂಟಿ ಜಖಂ

Thursday, November 7th, 2019
car

ಸುಳ್ಯ : ಬುಧವಾರ ಸಂಜೆ ಸುರಿದ ಗುಡುಗು ಸಹಿತ ಭಾರೀ ಗಾಳಿ ಮಳೆಗೆ ಸುಬ್ರಹ್ಮಣ್ಯ- ಪಂಜ ನಡುವಿನ ಬಳ್ಪ ಸಮೀಪದ ಎಣ್ಣೆಮಜಲು ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಗಣೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಳ್ಯ, ಕಡಬ, ನೆಲ್ಯಾಡಿ, ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸಾಯಂಕಾಲ ಸುಮಾರು 6 ಗಂಟೆಯಿಂದ ಸಿಡಿಲು-ಗುಡುಗು, ಗಾಳಿ ಸಹಿತ ಮಳೆಯಾಗಿದೆ. ಈ ವೇಳೆ ಬಳ್ಪದ ಎಣ್ಣೆಮಜಲು ಕ್ರಾಸ್ ಬಳಿ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬಡೆಕ್ಕೋಡಿಯ ಜನಾರ್ದನ ಎಂಬವರ ಕಾರಿನ […]

ಸುಬ್ರಹ್ಮಣ್ಯ : ದೀಪಾವಳಿ ಹಿನ್ನೆಲೆ ದಿಪಾಳೆ ಮರದ ಪ್ರತಿಷ್ಠಾಪನೆ ಕಾರ್ಯ

Monday, October 28th, 2019
Subrahmanya

ಸುಬ್ರಹ್ಮಣ್ಯ : ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಹಾಗೂ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ, ದಿಪಾಳೆ ಮರದ ಪ್ರತಿಷ್ಠಾಪನೆ ಕಾರ್ಯ ನಡೆಯಿತು. ದೀಪಾವಳಿ ಹಿನ್ನೆಲೆ ಪುರಾತನ ಕಾಲದಿಂದಲೂ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿರುವ ದೀಪಾಳೆ ಪ್ರತಿಷ್ಠಾಪನೆ ಹಬ್ಬವನ್ನು ಸಂಭ್ರಮದಿಂದ ನೆರವೇರಿಸಲಾಯಿತು. ಕರಾವಳಿ ಪ್ರದೇಶಗಳಲ್ಲಿ ಪ್ರತೀ ವರ್ಷವು ಈ ಸಂಪ್ರದಾಯವನ್ನು ಪಾಲನೆ ಮಾಡಿಕೊಂಡು ಬರಲಾಗುತ್ತಿದೆ. ಶ್ರೀ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠ ಹಾಗೂ ನರಸಿಂಹ ಸ್ವಾಮಿ […]

ಸುಳ್ಯ : ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ; ಶಿಕ್ಷಕಿ ಸಾವು

Saturday, October 19th, 2019
sulya1

ಸುಳ್ಯ : ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇದೀಗ ನಡೆದಿದೆ ಮಹಿಳೆಯನ್ನು ಶಾಂತಿನಗರ ಶಾಲೆಯ ಮೀನಾಕ್ಷಿ ಟೀಚರ್ ಎಂದು ಗುರುತಿಸಲಾಗಿದೆ. ರಿಕ್ಷಾ ಇಳಿದು ರಸ್ತೆಯ ಇನ್ನೊಂದು ಬದಿಗೆ ತೆರಳುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಬಂದ ಕೆಎಸ್ಆರ್ ಟಿಸಿ ಬಸ್ ಮಹಿಳೆಯ ತಲೆಯ ಮೇಲೆ ಸಂಚರಿಸಿ ಮಹಿಳೆ ದಾರುಣವಾಗಿ ಸಾವನಪ್ಪಿದ್ದಾರೆ.    

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಅಕ್ಟೋಬರ್​ 2 ರಂದು ನೂತನ ಬ್ರಹ್ಮರಥ ಸಮರ್ಪಣೆ

Monday, September 30th, 2019
subrahmanya

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಮರ್ಪಣೆಗೊಳ್ಳಲಿರುವ ನೂತನ ಬ್ರಹ್ಮರಥವು ಅಕ್ಟೋಬರ್ 2ರಂದು ಉಪ್ಪಿನಂಗಡಿ, ಕಡಬದ ಮೂಲಕ ತೆರಳುವ ರಥಕ್ಕೆ ವಿವಿಧ ಕಡೆಗಳಲ್ಲಿ ಅದ್ಧೂರಿ ಸ್ವಾಗತ ನೀಡಲು ಸಿದ್ಧತೆಗಳು ಆರಂಭವಾಗಿದೆ. ಉದ್ಯಮಿ ಎನ್. ಮುತ್ತಪ್ಪ ರೈ ಹಾಗೂ ಕಡಬದ ಅಜಿತ್ ಶೆಟ್ಟಿ ಅವರು 2.5 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಬ್ರಹ್ಮರಥವನ್ನು ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಕಾಣಿಕೆಯಾಗಿ ಸಮರ್ಪಣೆ ಮಾಡಲಿದ್ದಾರೆ. ಬ್ರಹ್ಮರಥವು ಇಂದು ಬೆಳಿಗ್ಗೆ ಕೋಟೇಶ್ವರದಿಂದ ಹೊರಟು ಮೂಲ್ಕಿ, ಬಪ್ಪನಾಡು ಮಾರ್ಗವಾಗಿ ಸಂಜೆ ವೇಳೆ ಮಂಗಳೂರಿನ ಕದ್ರಿಗೆ […]