ಮಂಗಳೂರಿನಲ್ಲಿ ಕರ್ನಾಟಕ ಹಕ್ಕಿ ಹಬ್ಬಕ್ಕೆ ಚಾಲನೆ

Friday, February 9th, 2018
hakki

ಮಂಗಳೂರು : ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವೃತ್ತ ಹಾಗೂ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ 3 ದಿನಗಳ 4ನೇ ಕರ್ನಾಟಕ ಹಕ್ಕಿ ಹಬ್ಬಕ್ಕೆ ಇಂದು ನಗರದ ಪುರಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ನಾಲ್ಕು ವರ್ಷಗಳ ಹಿಂದೆ ರಂಗನತಿಟ್ಟಿನಲ್ಲಿ ಹಕ್ಕಿ ಹಬ್ಬ ಮಾಡಲಾಗಿತ್ತು. ಇದು ಪಕ್ಷಿ ವೀಕ್ಷಕರಿಗೆ ಅನುಕೂಲವಾಗಿದ್ದು, ಪಕ್ಷಿಗಳ ಬಗ್ಗೆ ತಿಳಿದುಕೊಳ್ಳಲು ಹಾಗೂ ಹವ್ಯಾಸಿಗಳಿಗೆ ಅನುಕೂಲವಾಗಿದೆ. ಹಕ್ಕಿಗಳಿಗಾಗಿ […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ಆಯ್ಕೆ

Saturday, December 3rd, 2016
Suresh-ballal

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ನೇಮಕಗೊಂಡಿದ್ದಾರೆ. ಸುರೇಶ್ ಬಲ್ಲಾಳ್ ಪ್ರಸಕ್ತ ಕೆಪಿಸಿಸಿ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. ಈ ಹಿಂದೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಿಂಡಿಕೇಟ್, ಸೆನೆಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಸುರೇಶ್ ಬಲ್ಲಾಳ್ ಈ ಹಿಂದೆಯೂ ಮುಡಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.