ಸುಲಿಗೆ, ಕಳ್ಳತನ ನಡೆಸುತ್ತಿದ್ದ 6 ಮಂದಿ ದರೋಡೆಕೋರರ ಬಂಧನ

Thursday, April 15th, 2021
Robbers

ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಲಿಗೆ, ಕಳ್ಳತನ ನಡೆಸುತ್ತಿದ್ದ 6 ಮಂದಿಯನ್ನು ಬಂಧಿಸಿದ್ದು, ಈ ಮೊದಲು  9 ಮಂದಿ ದರೋಡೆಕೋರರನ್ನು ಬಂಧಿಸಿದ್ದರು. ಇದೀಗ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕೆ.ಸಿ ರೋಡ್ನ ಮುಹಮ್ಮದ್ ಝುಬೈರ್, ಬೆಳ್ತಂಗಡಿಯ ಇಬ್ರಾಹಿಂ ಲತೀಫ್,‌ ಮೂಡಬಿದಿರೆಯ ರಾಕೇಶ್, ಅರ್ಜುನ್, ಉಪ್ಪಿನಂಗಡಿಯ ಮೋಹನ್ ಮತ್ತು ಕೋಣಾಜೆ ಬೋಳಿಯಾರ್ನ ಮನ್ಸೂರ್ ಬಂಧಿತರು. ಮಂಗಳೂರು ನಗರದಲ್ಲಿ 7 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 8, ಹಾಸನದಲ್ಲಿ 2, ಚಿಕ್ಕಮಗಳೂರಿನಲ್ಲಿ 3, ಕೊಡಗುವಿನಲ್ಲಿ 5, ಉಡುಪಿಯಲ್ಲಿ […]