ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ, ವ್ಯಕ್ತಿಯ ಬಂಧನ

Saturday, March 19th, 2022
Wajid

ಮಂಗಳೂರು : ಸುಳ್ಯದಿಂದ ಸರಕಾರಿ ಬಸ್ ನಲ್ಲಿ  ಪ್ರಯಾಣಿಸುತ್ತಿದ್ದ  ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ವಾಜಿದ್ ಎ. ಜಮಖಾನಿ ಬಂಧಿತ ಆರೋಪಿ. ಮಹಿಳೆ ಸುಳ್ಯದಿಂದ ಮಂಗಳೂರಿಗೆ ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೀಟಿನ ಪಕ್ಕದಲ್ಲಿ ಕುಳಿತ ವಾಜಿದ್ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ಮಾನಹಾನಿ ಮಾಡಿ ಕಿರುಕುಳ ನೀಡಿದ್ದಾನೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ಯುವತಿ ಪ್ರಕರಣ ದಾಖಲಿಸಿದ್ದಳು. ಯುವತಿಯ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಗ್ರಾಮೀಣ ಭಾಗದ ಮೂಲಭೂತ ಅಭಿವೃದ್ಧಿಗೆ ಸರಕಾರದ‌ ಆದ್ಯತೆ- ಸಚಿವ ಎಸ್.ಅಂಗಾರ

Tuesday, January 11th, 2022
madappady

  ಸುಳ್ಯ : ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದೇಶದ ಗ್ರಾಮೀಣ‌ ಭಾಗದ ಅಭಿವೃದ್ಧಿ ಇನ್ನೂ ಆಗಿಲ್ಲ. ಗ್ರಾಮಗಳ ಅಭಿವೃದ್ಧಿ ಆಗಬೇಕು ಎಂಬ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರಕಾರವು ಇಚ್ಛಾಶಕ್ತಿಯಿಂದ ಕೆಲಸ ಮಾಡುತಿದೆ. ರಸ್ತೆ, ಸೇತುವೆಗಳು ಸೇರಿದಂತೆ ಗ್ರಾಮೀಣ ಭಾಗದ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪೂರ್ತಿ ಮಾಡಲಾಗುವುದು ಎಂದು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಹಾಗು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ […]

ವಾಯ್ಸ್ ಮೆಸೇಜ್ ಕಳುಹಿಸಿ ಬಸ್ಸು ಮಾಲೀಕ ಆತ್ಮಹತ್ಯೆ

Tuesday, December 14th, 2021
Narayana Rai

ಸುಳ್ಯ :  ಅವಿನಾಶ್ ಮೋಟಾರ್ಸ್ ಮಾಲೀಕ ಸುಳ್ಯದ  ನಾರಾಯಣ ರೈ(73) ಸೋಮವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸೌಖ್ಯದ ಹಿನ್ನೆಲೆಯಲ್ಲಿ ತನಗೆ ಬದುಕಲು ಕಷ್ಟವಾಗುತ್ತಿದೆ. ಮನೆಯವರಿಗೂ ಕಷ್ಟ ಕೊಡಲು ಮನಸ್ಸಿಲ್ಲ, ಹೀಗಾಗಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ. ನನ್ನ ಮರಣದ ಕಾರಣದಿಂದ ಬಸ್ಗಳ ಓಡಾಟ ನಿಲ್ಲಿಸಬಾರದು. ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಬೇಕು’ ಎಂದು ಡೆತ್ ನೋಟ್ ಬರೆದಿದ್ದರು. ಸಾವಿಗೂ ಮೊದಲು ತನ್ನ ತಂಗಿಗೆ ಧ್ವನಿ ಸಂದೇಶ ಕಳುಹಿಸಿದ್ದರು. ಮೃತದೇಹದ ಪಕ್ಕದಲ್ಲಿ ಡೆತ್ನೋಟ್ ಪತ್ತೆಯಾಗಿದೆ. ಕೆಲವು ತಿಂಗಳ […]

ಮೆಡಿಕಲ್‌ ಶಾಪಿಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ: ವ್ಯಕ್ತಿಯ ಬಂಧನ

Wednesday, June 2nd, 2021
Rape Attempt

ಈಶ್ವರಮಂಗಲ: ಯಾರು ಇಲ್ಲದೆ ಇರುವುದನ್ನು ಗಮನಿಸಿದ ವ್ಯಕ್ತಿಯೊಬ್ಬ ಔಷಧ ಖರೀದಿಗೆಂದು ಈಶ್ವರಮಂಗಲದ ಮೆಡಿಕಲ್‌ಗೆ ಬಂದು ಅಲ್ಲಿದ್ದ ಮಹಿಳಾ ಸಿಬ್ಬಂದಿಯನ್ನು ಮಾನಭಂಗಕ್ಕೆ ಯತ್ನಿಸಿದ ಘಟನೆ ಸುಳ್ಯ ಸಮೀಪದ ಈಶ್ವರಮಂಗಲದಲ್ಲಿ ನಡೆದಿದೆ. ಈಶ್ವರಮಂಗಲ ಕುಕ್ಕಾಜೆ ನಿವಾಸಿ ಇಬ್ರಾಹಿಂ ಕುಕ್ಕಾಜೆ (60) ಎಂಬಾತ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದು, ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮೆಡಿಕಲ್‌ನಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿದ ಇಬ್ರಾಹಿಂ ಒಳನುಗ್ಗಿ ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಕಿರುಚಿದ್ದರು. ತಕ್ಷಣ ಸುತ್ತಮುತ್ತಲಿದ್ದ ಮಂದಿ ಜಮಾಯಿಸಿ ಆತನನ್ನು ಹಿಡಿದು ಈಶ್ವರಮಂಗಲ ಹೊರ ಠಾಣೆ ಪೊಲೀಸರಿಗೆ […]

ಪೊಲೀಸರಿಂದ ತಪ್ಪಿಸಿಕೊಳ್ಳಲು ಚಿನ್ನ ನುಂಗಿದ ಕಳ್ಳ

Monday, May 31st, 2021
shibu

ಮಂಗಳೂರು : ಪೊಲೀಸರು ಬಂಧಿಸಿದ್ದ ಕಳ್ಳನೊಬ್ಬ ಕಳ್ಳತನ  ಮಾಡಿದ ಚಿನ್ನದ ಉಂಗುರಗಳನ್ನೇ ನುಂಗಿ ದ ಘಟನೆ ಸುಳ್ಯದಲ್ಲಿ ನಡೆದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ಶಿಬು ಎಂಬಾತ ಸುಳ್ಯ, ಪುತ್ತೂರಿನಲ್ಲಿ ಕಳ್ಳತನ ಮಾಡಿದ ಚಿನ್ನ ನುಂಗಿ ತೀವ್ರ ಹೊಟ್ಟೆ ನೋವಿನಿಂದ ನೋವಿಗೆ ಒಳಗಾಗಿದ್ದು, ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಹೊಟ್ಟೆಯಿಂದ 35 ಗ್ರಾಂ ತೂಕದ ಉಂಗುರಗಳನ್ನು ವೈದ್ಯರು ಹೊರ ತೆಗೆದಿದ್ದು,ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.‌ ಬಳಿಕ ಶಿಬುವನ್ನು […]

ಎರಡು ಐಷಾರಾಮಿ ಕಾರುಗಳು , ಎರಡು ಸ್ಕೂಟರ್‌ಗಳ ಜೊತೆಗೆ 25 ಲಕ್ಷ ರೂ. ಕೊಟ್ಟರು ಗಂಡನನ್ನು ದೂರವಿರಿಸಿದ ಮನೆಯವರು

Wednesday, November 25th, 2020
Ayesha

ಮಂಗಳೂರು : ಫೇಸ್‌ಬುಕ್ ಮೂಲಕ ಪರಿಚಯವಾದ ವ್ಯಕಿಯನ್ನು ಮದುವೆಯಾದ ಮಹಿಳೆಯ ಗಂಡನನ್ನು ಆತನ ಮನೆಯವರು ಎರಡು ವರ್ಷದ ಬಳಿಕ ಆಕೆಗೆ ಸಿಗದಂತೆ ನಿಗೂಢವಾಗಿ ಅಡಗಿಸಿಡಲಾಗಿದೆ ಎಂದು ಆರೋಪಿಸಿದ್ದಾರೆ. ಕೇರಳದ ಕಣ್ಣೂರು ಮೂಲದ ಶಾಂತಿ ಜೂಬಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ದ ಇಬ್ರಾಹಿಂ ಖಲೀಲ್ ಕಟ್ಟೇಕರ್ ಎಂಬವರು ಫೇಸ್‌ಬುಕ್ ಮೂಲಕ ಪರಿಚಯವಾಗಿ ಜುಲೈ 12, 2017 ಮದುವೆಯಾಗುತ್ತಾರೆ. ಮದುವೆಯಾದ ಬಳಿಕ ಶಾಂತಿ ಜೂಬಿ ಆಯಿಷಾ ಇಬ್ರಾಹಿಂ ಖಲೀಲ್ ಕಟ್ಟೇಕರ್ ಎಂದು ಹೆಸರು ಬದಲಿಸಿಕೊಂಡು ದಂಪತಿಗಳು ಬೆಂಗಳೂರು, ಮೈಸೂರು […]

ಸುಳ್ಯ : ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಗುಂಡಿಟ್ಟು ಕೊಲೆ ಮಾಡಿದ ಅಪರಿಚಿತರು

Thursday, October 8th, 2020
sampath

ಮಂಗಳೂರು: ಜಾಮೀನು ಪಡೆದು ಹೊರಗೆ ಬಂದಿದ್ದ ಕೊಲೆ ಪ್ರಕರಣದ ಆರೋಪಿಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿಟ್ಟು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸಂಪತ್‌ ಕುಮಾರ್‌ (35) ಎಂದು ಗುರುತಿಸಲಾಗಿದೆ. ಬೆಳಗ್ಗೆ 6  ಗಂಟೆ ಸುಮಾರಿಗೆ ಸಂಪತ್‌ ಅವರು ಮನೆಯಿಂದ ಹೊರಡುವ ವೇಳೆ ಅಪರಿಚಿತರು ಕಾರಿನ ಮೇಲೆ ದಾಳಿ ನಡೆಸಿದ್ದರು. ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ  ರಸ್ತೆ ಬದಿಗೆ ಸರಿದಿದೆ. ನಂತರವೂ ಗುಂಡಿನ ಸದ್ದು ಕೇಳಿದೆ ಎಂದು ಸ್ಥಳೀಯರು  ತಿಳಿಸಿದ್ದಾರೆ.  ಸುಳ್ಯ ತಾಲೂಕಿನ ಶಾಂತಿನಗರದಲ್ಲಿ […]

ಸುಳ್ಯ ಮೂಲದ ಮದರಸ ಶಿಕ್ಷಕನಿಂದ ತನ್ನ16ರ ಮಗಳ ನಿರಂತರ ಅತ್ಯಾಚಾರ, 6 ಮಂದಿ ಗೆಳೆಯರು ಕೃತ್ಯದಲ್ಲಿ ಭಾಗಿ

Tuesday, July 21st, 2020
muslim girl

ಕಾಸರಗೋಡು: ಕಳೆದ ಮೂರು ವರ್ಷಗಳಲ್ಲಿ ತನ್ನ 16 ವರ್ಷದ ಮಗಳನ್ನು ಪದೇ ಪದೇ ಲೈಂಗಿಕ ಕಿರುಕುಳ ನೀಡಿದ 50 ವರ್ಷದ ಮದರಸಾ ಶಿಕ್ಷಕನನ್ನು ನಿಲೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಇತರ ಆರು ಮಂದಿಯ ಮೇಲೂ ಆರೋಪ ಹೊರಿಸಲಾಗಿದೆ. ಆರೋಪಿಗಳಾದ ರಿಯಾಸ್ (19), ಇಜಾಜ್ (20), ಮತ್ತು ಮೊಹಮ್ಮದ್ ಅಲಿ (20) ಅವರನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ಇತರ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಸಂತ್ರಸ್ತೆಯ ಮಾವ ನಿಲೇಶ್ವರಂ ಪೊಲೀಸ್ ಠಾಣೆಯಲ್ಲಿ […]

ಕೊರೋನಾ ಸೋಂಕಿತರು : ದಕ್ಷಿಣ ಕನ್ನಡ ಜಿಲ್ಲೆ 73, ಉಡುಪಿ ಜಿಲ್ಲೆ 53, ಕಾಸರಗೋಡು ಜಿಲ್ಲೆ 74

Thursday, July 16th, 2020
corona virus

ಮಂಗಳೂರು : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬುಧವಾರ 73 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  ಜಿಲ್ಲೆಯಲ್ಲಿ 104 ಮಂದಿಯ ಬುಧವಾರದಂದು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2525 ಕ್ಕೆ ಏರಿಕೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 1089 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1379 ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ 22740 ಮಂದಿಯ ವರದಿ ನೆಗೆಟಿವ್ ಬಂದಿದೆ. ದಕ್ಷಿಣ ಕನ್ನಡದಲ್ಲಿ  ಬುಧವಾರದಂದು ನಾಲ್ವರು ಸೋಂಕಿನಿಂದಾಗಿ […]

ಸುಳ್ಯ : ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

Friday, February 7th, 2020
vineeth

ಸುಳ್ಯ : ಸುಳ್ಯ-ಬಡ್ಡಡ್ಕ ರಸ್ತೆಯ ಕುಡೆಕಲ್ಲು ಬಳಿ ಜ.19 ರಂದು ಸಂಭವಿಸಿದ ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಲ್ಲಪಳ್ಳಿ‌ ನಿವಾಸಿ ವಿನೀತ್ ಚಿಕಿತ್ಸೆ ಫಲಕಾರಿಯಾಗದೆ ಫೆ. 6 ರಂದು ರಾತ್ರಿ ಮೃತಪಟ್ಟಿದ್ದಾರೆ. ಜ.19 ರಂದು ಬೆಳಿಗ್ಗೆ ಸುಳ್ಯ ಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ವ್ಯಾಗನರ್ ಕಾರಿಗೆ ಬಡ್ಡಡ್ಕದಿಂದ ಸುಳ್ಯಕ್ಕೆ ಬರುತ್ತಿದ್ದ ಬೈಕ್ ಆಲೆಟ್ಟಿಯ ಕುಡೆಕಲ್ಲು ಎಂಬ ತಿರುವಿನಲ್ಲಿ ಕಾರಿಗೆ ಡಿಕ್ಕಿ ಹೊಡೆದಿತ್ತು. ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ನಂತರ ಅವರನ್ನು […]