ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತಿಸಂಭ್ರಮದ ಚಂಪಾಷಷ್ಠಿ ಬ್ರಹ್ಮರಥೋತ್ಸವ ಸಮಾಪನ

Thursday, December 1st, 2011
subrahmanya champasashti

ಸುಬ್ರಹ್ಮಣ್ಯ : ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬುಧವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿಸಂಭ್ರಮದಿಂದ ಚಂಪಾಷಷ್ಠಿ ಬ್ರಹ್ಮರಥೋತ್ಸವ ನಡೆಯಿತು. ಬೆಳಗ್ಗೆ ಬ್ರಹ್ಮರಥದಲ್ಲಿರಿಸಲಾದ ಉತ್ಸವಮೂರ್ತಿಗೆ ದೇವಳದ ಪ್ರಧಾನ ಅರ್ಚಕ ವೆ|ಮೂ| ಬಿ. ಕೇಶವ ಜೋಗಿತ್ತಾಯ ಮತ್ತು ರಾಜೇಶ್‌ ಭಟ್‌ ಆರತಿ ಬೆಳಗಿದರು. ಸಾಲಂಕೃತ ಪಾಲಕಿಯಲ್ಲಿ ಸುಬ್ರಹ್ಮಣ್ಯ ದೇವರು ಹಾಗೂ ಉಮಾಮಹೇಶ್ವರ ದೇವರ ಉತ್ಸವಮೂರ್ತಿಯನ್ನು ಇರಿಸಿ ದೇವಳದ ಹೊರಾಂಗಣದಲ್ಲಿ ಪ್ರದಕ್ಷಿಣೆ ಬಂದು ಬಳಿಕ ಉಮಾಮಹೇಶ್ವರ ದೇವರನ್ನು ಪಂಚಮಿ ರಥದಲ್ಲಿ, ಸುಬ್ರಹ್ಮಣ್ಯ ದೇವರನ್ನು ಬ್ರಹ್ಮರಥದಲ್ಲಿರಿಸಲಾಯಿತು. ಆರತಿ ಬೆಳಗಿದ ಅನಂತರ ರಥದ ಮೇಲಿಂದ […]