ಸೂರ್ಲಬಿಯಲ್ಲಿ ಕಾಡು ಹಂದಿ ಬೇಟೆಯಾಡುತ್ತಿದ್ದ ಇಬ್ಬರ ಬಂಧನ
Wednesday, September 25th, 2019ಮಡಿಕೇರಿ : ಸೋಮವಾರಪೇಟೆ ಸಮೀಪದ ಸೂರ್ಲಬಿಯಲ್ಲಿ ಕಾಡುಹಂದಿಯನ್ನು ಬೇಟೆಯಾಡಿ, ಮಾಂಸವನ್ನಾಗಿ ಪರಿವರ್ತಿಸಿ ಸಾಗಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕುಂಬಾರಗಡಿಗೆ ಗ್ರಾಮದ ನಿವಾಸಿ ಯು.ಬಿ.ಸುಬ್ರಮಣಿ ಹಾಗೂ ಸೂರ್ಲಬಿ ಗ್ರಾಮದ ಎನ್.ಪಿ.ಗಣೇಶ್ ಬಂಧಿತ ಆರೋಪಿಗಳು. ಸೂರ್ಲಬಿ ಗ್ರಾಮದ ಸರ್ಕಾರಿ ಶಾಲೆ ಬಳಿ ವನ್ಯಜೀವಿಯ ಮಾಂಸ ಸಾಗಾಟ ಯತ್ನದ ಖಚಿತ ಮಾಹಿತಿ ದೊರೆತ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿದರು. ಕಡವೆಯನ್ನು ಬೇಟೆಯಾಡಿರುವ ಬಗ್ಗೆ ಮಾಹಿತಿ ದೊರೆಯಿತ್ತಾದರೂ ಆರೋಪಿಗಳು ಕಾಡುಹಂದಿಯನ್ನು ಬೇಟೆಯಾಡಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆ ವಶಪಡಿಸಿಕೊಂಡ ಮಾಂಸವನ್ನು […]