ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ

Saturday, March 16th, 2024
chakravarti-sulibale

ಮಂಗಳೂರು : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ದೊರೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಬಿಜೆಪಿಯಿಂದ ಲೋಕಸಭೆ ಚುನಾವಣೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಗಳಾಗಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ […]

`ಐ ಆ್ಯಮ್ ಮೋದಿ’ ಅಭಿಯಾನ :ಸೂಲಿಬೆಲೆ

Saturday, October 14th, 2017
Chakravarthi sulibele

ಮಂಗಳೂರು: ನಗರಾಭಿವೃದ್ಧಿ ಮತ್ತು ಹಜ್ ಸಚಿವ ರೋಷನ್ ಬೇಗ್ ತೀರ ಕೆಳಮಟ್ಟದ ಭಾಷೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಮಾತನಾಡಿರುವುದು ಸಹಿಸಲಸಾಧ್ಯ. ಇದರ ವಿರುದ್ಧ ಸಾಮೂಹಿಕವಾಗಿ ಜನಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯಾದ್ಯಂತ `ಐ ಆ್ಯಮ್ ಮೋದಿ’ ಎಂಬ ಅಭಿಯಾನ ನಡೆಸಲಾಗುವುದು ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟೀಕಿಸಲು ಹಕ್ಕಿದೆ. ಹಾಗಂತ ಕೀಳು ಭಾಷೆ ಬಳಸುವುದಲ್ಲ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಕೂಡ ನನ್ನ […]

ಸೂಲಿಬೆಲೆಯನ್ನು ಸೂ.. ಮಗ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ರಮಾನಾಥ್ ರೈ – ವಿಡಿಯೋ

Saturday, September 23rd, 2017
Sulibele

ಮಂಗಳೂರು : ಅರಣ್ಯ ಸಚಿವ ರಮಾನಾಥ್ ರೈ ಅಸೈಗೋಳಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆಯವರನ್ನು ಕೆಟ್ಟ ಶಬ್ಧದಿಂದ ನಿಂದಿಸಿದ್ದಾರೆ. ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ತುಳು ಭಾಷೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಿದ ಸಚಿವ ರಮಾನಾಥ್ ರೈ, ಯುವ ಬ್ರಿಗೇಡ್ ಸಂಚಾಲಕ ಚಕ್ರವರ್ತಿ ಸೂಲಿಬೆಲೆಯವರನ್ನು ಅವಾಚ್ಯ ಶಬ್ಧಗಳಿಂದ ಟೀಕಿಸಿದ್ದಾರೆ. ನೆಹರೂ ಕುಟುಂಬದ ಬಗ್ಗೆ ಮಾತನಾಡುವ ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ, ಇಂತವರನ್ನು ಜೈಲಿಗೆ ಹಾಕಬೇಕು ಎಂದು ಸೂಲಿಬೆಲೆ […]