ಜಿಲ್ಲಾಡಳಿತದ ನಿರ್ಲಕ್ಷ್ಯ ಮರವೂರು ಸೇತುವೆ ಹಾನಿಗೊಳಗಾಗಲು ಕಾರಣ : ಅಭಯಚಂದ್ರ ಜೈನ್
Tuesday, June 15th, 2021ಮಂಗಳೂರು : ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿರುವುದೇ ಮರವೂರು ಸೇತುವೆಯ ಪಿಲ್ಲರ್ ಗಳು ಕುಸಿಯಲು ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಸಮೀಪದಲ್ಲೇ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದ್ದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು ಜೈನ್ ಆರೋಪಿಸಿದರು. ಮರಳು ಮಾಫಿಯಾದಿಂದ ಮರವೂರು ಸೇತುವೆಯ […]