ಸೋಮವಾರಪೇಟೆಗೆ ತೆರಳುತ್ತಿದ್ದ ಕನ್ನಡದ ರಿಯಾಲಿಟಿ ಶೋ ಹುಡುಗಿ ಅಪಘಾತದಲ್ಲಿ ಮೃತ್ಯು

Wednesday, May 27th, 2020
Mebina-Michael

ಮಂಡ್ಯ: ಕನ್ನಡದ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4 ವಿಜೇತೆ ಮೆಬಿನಾ ಮೈಕಲ್, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ  ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಿನ್ನೆ ಸಂಜೆ 4.30ರ ವೇಳೆಗೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. […]

ಪ್ರವಾಸಿಗರಿಂದ ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ

Wednesday, December 11th, 2019
Dubare

ಮಡಿಕೇರಿ : ದುಬಾರೆ ಆನೆ ಕ್ಯಾಂಪ್ ವೀಕ್ಷಿಸಲು ಬಂದಿದ್ದ ಪ್ರವಾಸಿಗರು ಅರಣ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಕುಶಾಲನಗರದ ದುಬಾರೆ ಪ್ರವಾಸಿತಾಣದಲ್ಲಿ ನಡೆದಿದೆ. ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ದುಬಾರೆ ಆನೆ ಶಿಬಿರ ನೋಡಲು ಮಂಗಳೂರಿನಿಂದ ತಡವಾಗಿ ಬಸ್‌ನಲ್ಲಿ ಬಂದಿದ್ದ ಪ್ರವಾಸಿಗರ ತಂಡ ಸಾಕಾನೆ ಶಿಬಿರಕ್ಕೆ ಹೋಗಲು ಬೋಟ್ ಬೇಕು ಎಂದು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಕೇಳಿದ್ದಾರೆ. ಅದಕ್ಕೆ ಸಿಬ್ಬಂದಿ ಸಮಯ ಮೀರಿದ ಹಿನ್ನೆಲೆ ಬೋಟ್‌ನಲ್ಲಿ ಕರೆಯೊಯ್ಯಲು ಸಿಬ್ಬಂದಿ ನಿರಾಕರಿಸಿದ್ದಾರೆ ಎನ್ನುವ ಕಾರಣಕ್ಕೆ ಪ್ರವಾಸಿಗರು […]

ಕಾಡಾನೆ ಉಪಟಳ ತಡೆಗೆ ಆಗ್ರಹ : ಅರಣ್ಯಾಧಿಕಾರಿಗಳಿಗೆ ಸೋಮವಾರಪೇಟೆ ತಾಲೂಕು ಗ್ರಾಮಸ್ಥರಿಂದ ಮನವಿ

Tuesday, December 3rd, 2019
somavarapete

ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಐಗೂರು, ಕಾಜೂರು, ಯಡವಾರೆ, ಗರ್ವಾಲೆ ಮುಂತಾದ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಅವರಿಗೆ ಮನವಿ ಸಲ್ಲಿಸಿದರು. ಮಡಿಕೇರಿಯ ಅರಣ್ಯ ಭವನದಲ್ಲಿ ಅಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಿದ ಗ್ರಾಮಸ್ಥರು ಕಾಡಾನೆ ಹಾವಳಿ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಕಾಫಿ ಬೆಳೆಗಾರ ಮಚ್ಚಂಡ ಪ್ರಕಾಶ್ ಬೆಳ್ಯಪ್ಪ, ಸೋಮವಾರಪೇಟೆ ತಾಲೂಕಿನ ಗರ್ವಾಲೆ, ಐಗೂರು, ಯಡವಾರೆ, ಕಾಜೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ […]