ಮಂಗಳೂರು ನಿವೃತ್ತ ಪ್ರೊಫೆಸರ್ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ

Saturday, January 6th, 2024
ಮಂಗಳೂರು ನಿವೃತ್ತ ಪ್ರೊಫೆಸರ್ ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ ನಿಧನ

ಉಳ್ಳಾಲ: ಖ್ಯಾತ ಸಾಹಿತಿ ಪ್ರೊ.ಅಮೃತ ಸೋಮೇಶ್ವರ (88) ಅವರು ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ “ಒಲುಮೆ”ಯಲ್ಲಿ ನಿಧನರಾದರು. ನಿಧನರಾದರು. ಕನ್ನಡ, ತುಳು ಸಾಹಿತಿ, ಯಕ್ಷಗಾನ ಪ್ರಸಂಗ ಮೊದಲಾದ ಸಾಹಿತ್ಯ ಲೋಕಕ್ಕೆ ಅಪಾರ ಸೇವೆಯನ್ನು ನೀಡಿದ್ದರು. ಮಂಗಳೂರು ತಾಲೂಕಿನ ಸೋಮೇಶ್ವರ ಗ್ರಾಮದ ಅಡ್ಕ ನಿವಾಸಿಯಾಗಿರುವ ಅಮೃತ ಸೋಮೇಶ್ವರ ಅವರು 1935 ಸೆಪ್ಟೆಂಬರ್ 27‌ ರಂದು ಜನಿಸಿದರು. ತಮ್ಮ ಬಾಲ್ಯವನ್ನು ಮುಂಬೈಯಲ್ಲಿ ಕಳೆದ ಅಮೃತರು, ಐದು ವರ್ಷವಾಗುವಾಗ ಊರಿಗೆ ಮರಳಿ, ಕೋಟೆಕಾರಿನಲ್ಲಿರುವ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]

ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದಲ್ಲಿ ಶ್ರಾವಣ ಅಮವಾಸ್ಯೆ ತೀರ್ಥ ಸ್ನಾನ

Friday, September 15th, 2023
someshwara-thirtha

ಮಂಗಳೂರು : ಪುರಾಣ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಕಡಲಲ್ಲಿ ಸಹಸ್ರಾರು ಮಂದಿ ಭಕ್ತರು ಪವಿತ್ರ ಶ್ರಾವಣ ಅಮವಾಸ್ಯೆ ಪ್ರಯುಕ್ತ ತೀರ್ಥ ಸ್ನಾನ ಮಾಡಿದರು. ಸಮುದ್ರ ಸ್ನಾನದ ಮೊದಲು ಭಕ್ತಾಧಿಗಳು ಕಡಲಿಗೆ ಅಡಿಕೆ, ವೀಳ್ಯವನ್ನ ಸಮರ್ಪಿಸಿ ತೀರ್ಥ ಸ್ನಾನದ ಬಳಿಕ ಸೋಮನಾಥನಿಗೆ ವಿಶೇಷ ಸೇವೆಗಳನ್ನು ನೀಡಿತ್ತಾರೆ ಸೋಮೇಶ್ವರದ ಸೋಮನಾಥ ದೇವಸ್ಥಾನದ ಉತ್ಸವಗಳಲ್ಲಿ ಶ್ರಾವಣ ಅಮವಾಸ್ಯೆಯ ಪವಿತ್ರ ಸಮುದ್ರ ತೀರ್ಥ ಸ್ನಾನವು ಪ್ರಾಮುಖ್ಯತೆ ಪಡೆದಿದೆ. ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರದ ಕಡಲ ತೀರಕ್ಕೆ ಸಹಸ್ರಾರು […]

ಉಳ್ಳಾಲದಲ್ಲಿ 15 ಕ್ಕೂ ಅಧಿಕ ಮನೆಗಳ ಗೇಟುಗಳಲ್ಲಿ ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳು ಪತ್ತೆ

Friday, September 24th, 2021
Christian

ಮಂಗಳೂರು  : ಉಳ್ಳಾಲ ರೈಲ್ವೇ ನಿಲ್ದಾಣದ ಹಿಂಭಾಗದ  15 ಕ್ಕೂ ಅಧಿಕ ಮನೆಗಳ ಗೇಟುಗಳಲ್ಲಿ  ಕ್ರೈಸ್ತ ಧರ್ಮ ಪ್ರಚೋದಿಸುವ ಭಿತ್ತಿ ಪತ್ರ ಹಾಗೂ ಪುಸ್ತಕಗಳು ಪತ್ತೆಯಾಗಿದ್ದು ಸೋಮೇಶ್ವರ ಪರಿಸರದಲ್ಲಿ  ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಅಪರಿಚಿತ ವ್ಯಕ್ತಿಯೋರ್ವ ಸೆ.21ರ ಶುಕ್ರವಾರ ಸೋಮೇಶ್ವರ ಪರಿಸರದಲ್ಲಿ ಇದನ್ನು ಮನೆಯ ಗೇಟುಗಳಲ್ಲಿ  ಸಿಕ್ಕಿಸಿರುವುದಾಗಿ ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಬಜರಂಗದಳ ಘಟಕ ಭೇಟಿ ನೀಡಿ ಭಿತ್ತಿ ಪತ್ರಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿರುವ ಮೊಬೈಲ್ ನಂಬರಿರುವ ವ್ಯಕ್ತಿಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ‌. ಬೆಳಿಗ್ಗೆ ಲುಂಗಿ ಧರಿಸಿದ್ದ ಅಪರಿಚಿತ ವ್ಯಕ್ತಿ 15 ರಷ್ಟು […]

ಸೋಮೇಶ್ವರ ಕಡಲ ಕಿನಾರೆಯ ರುದ್ರಬಂಡೆ ಯಿಂದ ಹಾರಿ ಇಂಜಿನಿಯರಿಂಗ್ ಆತ್ಮಹತ್ಯೆ

Thursday, June 24th, 2021
Pawan-Bhat

ಉಳ್ಳಾಲ :  ಸೋಮೇಶ್ವರ ಕಡಲ ಕಿನಾರೆಯ ರುದ್ರಬಂಡೆ ಯಿಂದ ಹಾರಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (30) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ. ಬುಧವಾರ ಸಂಜೆ 4.30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ […]

ಉಳ್ಳಾಲ : ಸೋಮೇಶ್ವರ ದೇವಸ್ಥಾನದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿ ಪಾಲ್ಗೊಂಡ ಸಾವಿರಾರು ಭಕ್ತರು

Tuesday, April 27th, 2021
Someshwara

ಮಂಗಳೂರು : ಉಳ್ಳಾಲದ ಸೋಮೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 26 ರ ರಾತ್ರಿ  ಬ್ರಹ್ಮಕಲಶೋತ್ಸವ ದ ರಥೋತ್ಸವದಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮಾಸ್ಕ್ ಧರಿಸದೇ ಜನರು ಗುಂಪಾಗಿ ಸೇರಿದ ಘಟನೆ ನಡೆದಿದೆ. ಈ  ವೇಳೆ  ಸಹಾಯಕ ಆಯುಕ್ತ(ಎಸಿ) ಮದನ್ ಮೋಹನ್ ದೇವಾಲಯದ ಆವರಣದ ಮೇಲೆ ದಾಳಿ ನಡೆಸಿ ನೆರೆದಿದ್ದ ಜನರನ್ನು ವಾಪಸ್ ಕಳುಹಿಸಿದ್ದಾರೆ. ಈ ದೇವಾಲಯವು ಕೊರೊನಾ ಮಾರ್ಗಸೂಚಿಯನ್ನು ಉಲ್ಲಂಘಿಸಿ ದೇವಸ್ಥಾನಕ್ಕೆ ನೂತನ ರಥ ಮತ್ತು ಹೊರೆ ಕಾಣಿಕೆ ಮೆರವಣಿಗೆ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಸ್ಕ್ ಧರಿಸದೇ ಅಂತರ ಕಾಯ್ದುಕೊಳ್ಳದೇ […]

ಸೋಮೇಶ್ವರ ತೀರದಲ್ಲಿ ಹಸುರು ಮತ್ತು ನೀಲಿ ಬಣ್ಣಕ್ಕೆ ತಿರುಗಿದ ಸಮುದ್ರದ ಅಲೆಗಳ ಬಣ್ಣ

Tuesday, November 24th, 2020
Ullal Beach

ಉಳ್ಳಾಲ : ಸೋಮೇಶ್ವರ ಸಮುದ್ರ ತೀರದಲ್ಲಿ ಅಲೆಗಳ ಬಣ್ಣ ನೀಲಿಯಾಗಿ  ಗೋಚರಿಸಿದ್ದು , ಸೋಮವಾರ ತಡರಾತ್ರಿವರೆಗೂ ಕುತೂಹಲಿಗರು ಸಮುದ್ರ ತಟದಲ್ಲಿ ನಿಂತು ಅಲೆಗಳ  ಬಣ್ಣದ ಆಟವನ್ನು ವೀಕ್ಷಣೆ ನಡೆಸಿದರು. ಅರಬ್ಬಿ ಸಮುದ್ರದ ಮಲ್ಪೆಯ ಪಡುಕೆರೆ,ಕಾರವಾರ ಉದ್ದಕ್ಕೂ ನೀಲಿ ಬೆಳಕು ಕಾಣಿಸಿಕೊಳ್ಳುತ್ತಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುದ್ಧಿ ಹರಡುತ್ತಿದ್ದಂತೆ , ಸೋಮೇಶ್ವರ ಸಮುದ್ರ ತೀರದಲ್ಲಿ ಸೋಮವಾರ ರಾತ್ರಿ ಜನ ಜಮಾಯಿಸಿ ನೀಲಿ ಬೆಳಕು ದಡಕ್ಕೆ ಅಪ್ಪಳಿಸುವುದನ್ನು ಕಂಡರು. ಅರಬ್ಬಿ ಸಮುದ್ರದಲ್ಲಿ ಮೂರು ದಿನಗಳಿಂದ ವಿಚಿತ್ರ ವಿದ್ಯಮಾನ ಜರಗುತ್ತಿದ್ದು, ಹಗಲು ಹೊತ್ತು ಪಾಚಿ ಬಣ್ಣದ ಹಸುರು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರಗೊಂಡ ಕಡಲ ಕೊರೆತ, ಜಿಲ್ಲಾಧಿಕಾರಿ ಭೇಟಿ

Thursday, September 17th, 2020
Kamagari

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಲ ಕೊರೆತ  ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸವಾಗಿರುವ ಜನರಲ್ಲಿ ಆಂತಕ ಮನೆ ಮಾಡಿದೆ. ಕಡಲ ಕೊರೆತ ಸಮಸ್ಯೆಯ ಹಾನಿ ತಡೆಗಟ್ಟಲು ಸರ್ಕಾರದಿಂದ ಶಾಶ್ವತವಾದ ಪರಿಹಾರ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ಅದಷ್ಟು ಬೇಗನೆ ರೂಪಿಸಲಾಗುವುದು ಎಂದು ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಮ್ಯಾರಿಟೈಮ್ ಬೋರ್ಡ್ ಸಿಇಓ ಕಪಿಲ್ ಮೋಹನ್ ತಿಳಿಸಿದ್ದಾರೆ. ಅವರು ಬುಧವಾರ ಜಿಲ್ಲೆಯ ವಿವಿದೆಡೆ ಕಡಲಕೊರೆತ ನಿಯಂತ್ರಣಕ್ಕೆ ನಡೆಯುತ್ತಿರುವ ವಿವಿಧ […]

ಸಂಸದ ನಳಿನ್ ಕುಮಾರ್ ಕಟೀಲ್ ಸೋಮೇಶ್ವರ, ಉಚ್ಚಿಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ

Thursday, August 8th, 2019
Nalin-Someshwara

ಮಂಗಳೂರು  : ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಸೋಮೇಶ್ವರ, ಉಚ್ಚಿಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಪ್ರದೇಶ ಗಳಲ್ಲಿ ಕಡಲ್ಕೊರೆತ ಮುಂದುವರಿದಿದ್ದು ಕಡಲ ತಡಿಯ ಜನರ ಆತಂಕ ಮುಂದುವರಿದಿದೆ. ಕಳೆದ ಎರಡು ವರುಷಗಳಿಂದ ಸೋಮೇಶ್ವರ ಉಚ್ಚಿಲ ಪ್ರದೇಶಗಳಲ್ಲಿ ಕಡಲ್ಕೊರೆತವು ತೀವ್ರಗೊಂಡಿದ್ದು, ಈ ಭಾಗದಲ್ಲಿ ಬ್ರೇಕ್ ವಾಟರ್ ಕಾಮಗಾರಿ ನಡೆಸಲಾಗಿದ್ದರೂ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ […]

ಸೋಮೇಶ್ವರ ಉಚ್ಚಿಲದಲ್ಲಿ ಸಮುದ್ರಕ್ಕೆ ಜಾರುತ್ತಿರುವ ಕಲ್ಲಿನ ತಡೆಗೋಡೆ

Tuesday, August 6th, 2019
Someshwara

ಮಂಗಳೂರು : ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಬಳಿ ಅಪಾಯದಲ್ಲಿರುವ ರಸ್ತೆಗೆ ಹಾಕಲಾಗಿರುವ ಕಲ್ಲುಗಳು ಕೊರೆತಕ್ಕೆ ಕುಸಿತ ಕಂಡರೆ, ನ್ಯೂ ಉಚ್ಚಿಲದಲ್ಲಿ ಸಮುದ್ರ ಕೊರೆತವಾಗಿದ್ದು ಕಲ್ಲುಗಳು ಸಮುದ್ರಪಾಲಾಗಿವೆ. ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ಕಡಲು ಪ್ರಕ್ಷುಬ್ಧಗೊಂಡಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಕೆಲ ಭಾಗದಲ್ಲಿ ಕಡಲ ಕೊರೆತ ಉಂಟಾಗುತ್ತಿದೆ. ಕಡಲ ತಡಿಯಲ್ಲಿ ವಾಸಿಸುವ ಜನರು ಆತಂಕಗೊಂಡಿದ್ದಾರೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]

ಪ್ರವಾಸ ಬಂದಿದ್ದ ಬೆಂಗಳೂರಿನ ಬಾಲಕಿ ಸೋಮೇಶ್ವರ ಬೀಚಿನಲ್ಲಿ ನೀರುಪಾಲು

Monday, December 24th, 2018
someshwara

ಮಂಗಳೂರು: ಮಂಗಳೂರಿನ ಸೋಮೇಶ್ವರ ಬೀಚ್ಗೆ ಬಂದಿದ್ದ ಬೆಂಗಳೂರು ಮೂಲದ ಕುಟುಂಬ ಸಮುದ್ರದ ಸೆಳೆತಕ್ಕೆ ಸಿಲುಕಿದ ಪರಿಣಾಮ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ನಾಲ್ಕು ವರುಷದ ಬಾಲಕಿ ಮೈತ್ರೇಯಿ ಕೇತ್ಕರ್ ಸಾವನ್ನಪ್ಪಿದ ಬಾಲಕಿ. ಬೆಂಗಳೂರಿನಿಂದ ಮಂಗಳೂರಿಗೆ ಪ್ರವಾಸ ಬಂದಿದ್ದ ಕುಟುಂಬ ಸೋಮೇಶ್ವರ ಬೀಚಿನಲ್ಲಿ ಮೋಜು ಮಾಡುತ್ತಿದ್ದ ವೇಳೆ ಸಮುದ್ರದ ಸೆಳೆತಕ್ಕೆ ಸಿಕ್ಕಿದೆ. ಚಿಂತಾಮಣಿ ಕೇತ್ಕರ್, ಶ್ರದ್ದಾ ಕೇತ್ಕರ್ ಮತ್ತು ಅವರ ಮಕ್ಕಳಾದ ಏಳು ವರ್ಷದ ಜಾರ್ಜಿ ಕೇತ್ಕರ್ ಹಾಗೂ ಮೈತ್ರೇಯಿ ಕೇತ್ಕರ್ ಸಮುದ್ರದ ಸೆಳೆತಕ್ಕೆ ಸಿಲುಕಿದ್ದರು. ಸೋಮೇಶ್ವರ ಬೀಚಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಲೈಫ್ […]