ಫೇಸ್ಬುಕ್​ನಲ್ಲಿ ಲೈವ್ ಆಗಿ ಶೌಚಾಲಯದ ಮುಂದೆ ಅಂತ್ಯಸಂಸ್ಕಾರ ನಡೆಸಿ ಪ್ರತಿಭಟನೆ

Saturday, July 14th, 2018
mangaluru

ಮಂಗಳೂರು: ಇಲ್ಲಿನ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯವನ್ನು ಇನ್ನೂ ಉದ್ಘಾಟನೆ ಮಾಡಿಲ್ಲವೆಂದು ಆರೋಪಿಸಿರುವ ಕೆಲವರು, ಅಧಿಕಾರಿಗಳ ಅಣಕು ಅಂತಿಮ ಸಂಸ್ಕಾರ ಮಾಡುವ ಮೂಲಕ ಪ್ರತಿಭಟಿಸಿದರು. ಪಿವಿಎಸ್ ಬಳಿಯಿರುವ ಬಿಜೆಪಿ ಕಚೇರಿಯ ಮುಂದೆ ಶೌಚಾಲಯದ ಕಾಮಗಾರಿ ಪೂರ್ಣಗೊಂಡಿದ್ದರೂ, ಇನ್ನೂ ಅದನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿಲ್ಲ ಎಂದು ಆರೋಪಿಸಿದರು. ಸೌರಜ್ ಎಂಬುವರು ತಮ್ಮ ಫೇಸ್ಬುಕ್ನಲ್ಲಿ ಲೈವ್ ಆಗಿ ಶೌಚಾಲಯದ ಮುಂದೆ ಅಂತ್ಯಸಂಸ್ಕಾರ ನಡೆಸಿ, ಪ್ರತಿಭಟನೆ ವ್ಯಕ್ತಪಡಿಸಿದರು. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಶೌಚಾಲಯ […]

ರಸ್ತೆಬದಿ ಕಸ ಎಸೆಯುವರಿಗೆ ಪಾಠ ಕಲಿಸಿದ ಮಂಗಳೂರು ಯುವಕ

Thursday, January 4th, 2018
swachatha

ಮಂಗಳೂರು: ದೇಶದಾದ್ಯಂತ ಸ್ವಚ್ಛ ಭಾರತ್ ಅಭಿಯಾನದಡಿ ಹಲವಾರು ಸಂಘ ಸಂಸ್ಥೆಗಳು ದೇಶವನ್ನು ಸ್ವಚ್ಛಗೊಳಿಸುವ ನಿಸ್ವಾರ್ಥ ಸೇವೆಗೆ ತಮ್ಮನ್ನು ತೊಡಗಿಸಿಕೊಂಡಿವೆ. ಭಾನುವಾರ ಬಂತೆಂದರೆ ಪೊರಕೆ ಹಿಡಿದು ಸಾವಿರಾರು ಸ್ವಯಂ ಸೇವಕರು ರಸ್ತೆಗಿಳಿದು ಪರಿಸರವನ್ನು ಸ್ವಚ್ಛಗೊಳಿಸುತ್ತಾರೆ. ಆದರೆ ಸೋಮವಾರ ಅದೇ ಸ್ಥಳಗಳಲ್ಲಿ ಸಾರ್ಜನಿಕರು ಮತ್ತೆ ತ್ಯಾಜ್ಯ ಸುರಿದು ಗಲೀಜುಗೊಳಿಸುತ್ತಾರೆ. ಸಾರ್ವಜನಿಕರ ಈ ಮನಸ್ಥತಿಯ ವಿರುದ್ದ ಮಂಗಳೂರಿನಲ್ಲಿ ನೂತನ ಅಭಿಯಾನ ಆರಂಭವಾಗಿದೆ. ಬಾನುವಾರವಷ್ಟೇ ಸ್ವಚ್ಛಗೊಳಿಸಿದ ರಸ್ತೆಯಲ್ಲಿ ಕಸ ಎಸೆದಿದ್ದಕ್ಕೆ ಸಿಟ್ಟಾದ ಯುವಕನೋರ್ವ ಅದೇ ಕಸವನ್ನು ವಸ್ತ್ರ ಮಳಿಗೆಯೊಳಗೆ ಸುರಿದ ಘಟನೆ ಮಂಗಳೂರಿನ […]